ಮಳೆ ಸರಿಯಾದ ಸಮಯಕ್ಕೆ ಬಾರದೆ ಕೈಕೊಟ್ಟರೆ, ರೈತನ ಮೇಲೆ ಮಾತ್ರವಲ್ಲ, ರೈತನನ್ನು ನಂಬಿ ಬದುಕುವ ಎಲ್ಲರಿಗೂ ಸಮಸ್ಯೆಯೇ. ರಾಜ್ಯಕ್ಕೆ ಮುಂಗಾರು #Monsoon ಕಾಲಿಟ್ಟಿರೂ, ಅಂದುಕೊಂಡಷ್ಟು ಮಳೆಯಾಗುತ್ತಿಲ್ಲ. ಇದರಿಂದ ರೈತ #Farmer ಕಂಗಾಲಾಗಿದ್ದಾನೆ. ಮಳೆ ಬಾರದೆ ಇಳುವರಿ ಕೈ ಕೊಟ್ಟಿದೆ. ಇದರಿಂದ ಮಾರುಕಟ್ಟೆಗೆ #Market ಸಮರ್ಪಕವಾಗಿ ತರಕಾರಿ #Vegetables ಬಾರದ ಹಿನ್ನೆಲೆ ಬೆಲೆಗಳು ಗಗನಕ್ಕೆ ಏರುತ್ತಿವೆ. ಈಗಾಗಲೆ ತರಕಾರಿ ಬೆಲೆ ದುಪ್ಪಟ್ಟಾಗಿದ್ದು, ಇದರ ಬೆನ್ನಲ್ಲೇ ದಿನಸಿ ಸಾಮಗ್ರಿಗಳ ಬೆಲೆ ಕೂಡ ಏರಿಕೆಯಾಗುತ್ತಿದೆ. ಇದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಈ ವಾರ ದಿನಸಿ ಸಾಮಗ್ರಿಗಳ ಬೆಲೆ 5 ರಿಂದ 10 ರೂಪಾಯಿ ಏರಿಕೆಯಾಗಿದೆ. ಕಳೆದ ವಾರ ಕೆಜಿಗೆ 50 ರೂ ಇದ್ದ ಸ್ಟೀಮ್ ಹಾಗೂ ಸೋನೆ ಮಸೂರಿ ರಾ ರೈಸ್ ಈ ವಾರ 50 ರಿಂದ 60 ರೂ. ಆಗಿದೆ. ಟೊಮೇಟೊ ಬೆಲೆ ದಶಕ ದಾಟಿದೆ. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ತರಕಾರಿ ಬೆಲೆ ಮತ್ತಷ್ಟು ಹೆಚ್ಚಳವಾಗಿದೆ. ಹಾಗೇ ದಿನಸಿ ಸಾಮಗ್ರಿಗಳ ಬೆಲೆಯೂ ಏರಿಕೆಯಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ರೈತರ ಜೊತೆ ಗ್ರಾಹಕರೂ ಬೆಲೆ ಎರಿಕೆಯಿಂದ ಕಂಗಾಲಾಗಿದ್ದಾರೆ.
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…