“ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜಾಗೃತಗೊಳಿಸಬೇಕು” ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಸುಸ್ಥಿರತಾ ಸಮಾವೇಶದಲ್ಲಿ ಮಾತನಾಡಿದ ಅವರು, ಸುಸ್ಥಿರ ಅಭಿವೃದ್ಧಿಯು ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲ ತತ್ವವಾಗಿದೆ ಎಂದು ಹೇಳಿದ್ದಾರೆ. ಬೆಂಗಳೂರು ನಗರವು ಇಂದು ನಾವೀನ್ಯತೆ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿದೆ. ಆದರೆ ತ್ವರಿತ ನಗರೀಕರಣ, ಹವಾಮಾನ ಬದಲಾವಣೆ ಮತ್ತು ಸಂಪನ್ಮೂಲಗಳ ಮೇಲೆ ಹೆಚ್ಚುತ್ತಿರುವ ಒತ್ತಡದಂತಹ ಸವಾಲುಗಳನ್ನು ಸಹ ಎದುರಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…