2025 ರಲ್ಲಿ ಗಿಡಗಳನ್ನು ಉಡುಗೊರೆಯಾಗಿ ನೀಡಿ | ಅಭಿಯಾನ ನಡೆಸಲು ಒಡಿಶಾ ಸಚಿವರ ಮನವಿ |

December 30, 2024
7:08 AM
ಹೊಸ ವರ್ಷದ ದಿನದಂದು ಸುಮಾರು ಒಂದು ಲಕ್ಷ ಹೂಗುಚ್ಛಗಳನ್ನು ಉಡುಗೊರೆಯಾಗಿ ನೀಡಲಾಗುತ್ತಿದೆ. ಪರಿಸರ ಉಳಿವು, ಹವಾಮಾನ ಬದಲಾವಣೆ ನಿಯಂತ್ರಣಕ್ಕಾಗಿ ಗಿಡಗಳ ರಕ್ಷಣೆಗಾಗಿ ಉಡುಗೊರೆಯಾಗಿ ಗಿಡಗಳನ್ನು ನೀಡುವ ಅಭಿಯಾನ ನಡೆಸಲು ಒಡಿಶಾ ಸಚಿವರು ಜನರಿಗೆ ಸಲಹೆ ನೀಡಿದ್ದಾರೆ.

ಹವಾಮಾನ ಬದಲಾವಣೆ ಇಂದು ಬಹುದೊಡ್ಡ ಸವಾಲಾಗಿದೆ. ಹವಾಮಾನ ಸುಸ್ಥಿರವಾದ ಸ್ಥಿತಿಗೆ ಬರಲು ಪರಿಸರ ಉಳಿವು-ರಕ್ಷಣೆ ಅಗತ್ಯ ಇದೆ. ಹೀಗಾಗಿ ಎಲ್ಲಾ ಕಾರ್ಯಕ್ರಮಗಳಲ್ಲಿ ಉಡುಗೊರೆಯಾಗಿ ಹೂಗುಚ್ಛದ ಬದಲಾಗಿ ಗಿಡಗಳನ್ನು ನೀಡಬೇಕು. 2025 ರಲ್ಲಿ ಇದೊಂದು ಅಭಿಯಾನವಾಗಬೇಕು ಎಂದು ಒಡಿಶಾದ ಅರಣ್ಯ ಮತ್ತು ಪರಿಸರ ಸಚಿವ ಗಣೇಶ್ ರಾಮ್ ಸಿಂಗ್ಖುಂಟಿಯಾ ಹೇಳಿದ್ದಾರೆ.…..ಮುಂದೆ ಓದಿ….

Advertisement

ಹೊಸ ವರ್ಷ ಅಂದರೆ 2025 ರಲ್ಲಿ ಉಡುಗೊರೆಯಾಗಿ ಗಿಡಗಳನ್ನು ನೀಡುವಂತೆ ಜನರಿಗೆ ಮನವಿ ಮಾಡಿದ ಸಚಿವರು, ಪರಿಸರ ಬಿಕ್ಕಟ್ಟನ್ನು ಪರಿಹರಿಸಲು ಈ ವಿನೂತನ ಅಭಿಯಾನವು ನಡೆದು ಇಡೀ ದೇಶದಲ್ಲಿ ಇದೊಂದು  ಕ್ರಾಂತಿಯಾಗಬೇಕು ಎಂದು ಸಚಿವರು ಅಭಿಪ್ರಾಯಪಟ್ಟರು. ಹಸಿರು ಮತ್ತು ಸುಸ್ಥಿರ ಪರಿಸರ ನಿರ್ಮಾಣಕ್ಕೆ ಜನರ ಸಹಭಾಗಿತ್ವ ಅಗತ್ಯವಾಗಿದೆ. ಇದಕ್ಕಾಗಿ   ಹೊಸ ವರ್ಷದ ಸಂದರ್ಭದಲ್ಲಿ ಹೂಗುಚ್ಛಗಳ ಬದಲಿಗೆ ಗಿಡಗಳನ್ನು ಉಡುಗೊರೆಯಾಗಿ ನೀಡಿ ಎಂದು ಮನವಿ ಮಾಡಿದರು.

ಪರಿಸರ ಸಮಸ್ಯೆ, ಹವಾಮಾನ ಬದಲಾವಣೆಯನ್ನು ಪರಿಹರಿಸಲು ಈ ವಿನೂತನ ಅಭಿಯಾನವು  ಕ್ರಾಂತಿಯಾಗಬೇಕು, 2036 ರ ವೇಳೆಗೆ ಒಡಿಶಾ ತನ್ನ ಹಿಂದಿನ ಪರಿಸರದ ಸ್ಥಿತಿಗೆ ಮರಳಬೇಕಿದೆ. ಹೀಗಾಗಿ ಗಿಡ ನೆಡಲು ಜನರನ್ನು ಒಳಗೊಂಡ ಆಂದೋಲನವಾಗಿ ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಒಡಿಶಾದ ಬಕುಲ್ ಪೌಂಡೇಶನ್‌ ಕಳೆದ 15 ವರ್ಷಗಳಿಂದ “ನನ್ನ ಮರ ಅಭಿಯಾನ”ವನ್ನು ನಡೆಸುತ್ತಿದೆ. ಪೌಂಡೇಶನ್‌ ನಡೆಸಿದ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದ್ದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!
April 16, 2025
11:18 AM
by: ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ
ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |
April 16, 2025
10:50 AM
by: The Rural Mirror ಸುದ್ದಿಜಾಲ
ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |
April 16, 2025
8:14 AM
by: The Rural Mirror ಸುದ್ದಿಜಾಲ
ಹೊಸರುಚಿ| ಗುಜ್ಜೆ ರೋಲ್
April 16, 2025
8:00 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror

Join Our Group