2025 ರಲ್ಲಿ ಗಿಡಗಳನ್ನು ಉಡುಗೊರೆಯಾಗಿ ನೀಡಿ | ಅಭಿಯಾನ ನಡೆಸಲು ಒಡಿಶಾ ಸಚಿವರ ಮನವಿ |

December 30, 2024
7:08 AM
ಹೊಸ ವರ್ಷದ ದಿನದಂದು ಸುಮಾರು ಒಂದು ಲಕ್ಷ ಹೂಗುಚ್ಛಗಳನ್ನು ಉಡುಗೊರೆಯಾಗಿ ನೀಡಲಾಗುತ್ತಿದೆ. ಪರಿಸರ ಉಳಿವು, ಹವಾಮಾನ ಬದಲಾವಣೆ ನಿಯಂತ್ರಣಕ್ಕಾಗಿ ಗಿಡಗಳ ರಕ್ಷಣೆಗಾಗಿ ಉಡುಗೊರೆಯಾಗಿ ಗಿಡಗಳನ್ನು ನೀಡುವ ಅಭಿಯಾನ ನಡೆಸಲು ಒಡಿಶಾ ಸಚಿವರು ಜನರಿಗೆ ಸಲಹೆ ನೀಡಿದ್ದಾರೆ.

ಹವಾಮಾನ ಬದಲಾವಣೆ ಇಂದು ಬಹುದೊಡ್ಡ ಸವಾಲಾಗಿದೆ. ಹವಾಮಾನ ಸುಸ್ಥಿರವಾದ ಸ್ಥಿತಿಗೆ ಬರಲು ಪರಿಸರ ಉಳಿವು-ರಕ್ಷಣೆ ಅಗತ್ಯ ಇದೆ. ಹೀಗಾಗಿ ಎಲ್ಲಾ ಕಾರ್ಯಕ್ರಮಗಳಲ್ಲಿ ಉಡುಗೊರೆಯಾಗಿ ಹೂಗುಚ್ಛದ ಬದಲಾಗಿ ಗಿಡಗಳನ್ನು ನೀಡಬೇಕು. 2025 ರಲ್ಲಿ ಇದೊಂದು ಅಭಿಯಾನವಾಗಬೇಕು ಎಂದು ಒಡಿಶಾದ ಅರಣ್ಯ ಮತ್ತು ಪರಿಸರ ಸಚಿವ ಗಣೇಶ್ ರಾಮ್ ಸಿಂಗ್ಖುಂಟಿಯಾ ಹೇಳಿದ್ದಾರೆ.…..ಮುಂದೆ ಓದಿ….

ಹೊಸ ವರ್ಷ ಅಂದರೆ 2025 ರಲ್ಲಿ ಉಡುಗೊರೆಯಾಗಿ ಗಿಡಗಳನ್ನು ನೀಡುವಂತೆ ಜನರಿಗೆ ಮನವಿ ಮಾಡಿದ ಸಚಿವರು, ಪರಿಸರ ಬಿಕ್ಕಟ್ಟನ್ನು ಪರಿಹರಿಸಲು ಈ ವಿನೂತನ ಅಭಿಯಾನವು ನಡೆದು ಇಡೀ ದೇಶದಲ್ಲಿ ಇದೊಂದು  ಕ್ರಾಂತಿಯಾಗಬೇಕು ಎಂದು ಸಚಿವರು ಅಭಿಪ್ರಾಯಪಟ್ಟರು. ಹಸಿರು ಮತ್ತು ಸುಸ್ಥಿರ ಪರಿಸರ ನಿರ್ಮಾಣಕ್ಕೆ ಜನರ ಸಹಭಾಗಿತ್ವ ಅಗತ್ಯವಾಗಿದೆ. ಇದಕ್ಕಾಗಿ   ಹೊಸ ವರ್ಷದ ಸಂದರ್ಭದಲ್ಲಿ ಹೂಗುಚ್ಛಗಳ ಬದಲಿಗೆ ಗಿಡಗಳನ್ನು ಉಡುಗೊರೆಯಾಗಿ ನೀಡಿ ಎಂದು ಮನವಿ ಮಾಡಿದರು.

ಪರಿಸರ ಸಮಸ್ಯೆ, ಹವಾಮಾನ ಬದಲಾವಣೆಯನ್ನು ಪರಿಹರಿಸಲು ಈ ವಿನೂತನ ಅಭಿಯಾನವು  ಕ್ರಾಂತಿಯಾಗಬೇಕು, 2036 ರ ವೇಳೆಗೆ ಒಡಿಶಾ ತನ್ನ ಹಿಂದಿನ ಪರಿಸರದ ಸ್ಥಿತಿಗೆ ಮರಳಬೇಕಿದೆ. ಹೀಗಾಗಿ ಗಿಡ ನೆಡಲು ಜನರನ್ನು ಒಳಗೊಂಡ ಆಂದೋಲನವಾಗಿ ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಒಡಿಶಾದ ಬಕುಲ್ ಪೌಂಡೇಶನ್‌ ಕಳೆದ 15 ವರ್ಷಗಳಿಂದ “ನನ್ನ ಮರ ಅಭಿಯಾನ”ವನ್ನು ನಡೆಸುತ್ತಿದೆ. ಪೌಂಡೇಶನ್‌ ನಡೆಸಿದ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror