MIRROR FOCUS

2025 ರಲ್ಲಿ ಗಿಡಗಳನ್ನು ಉಡುಗೊರೆಯಾಗಿ ನೀಡಿ | ಅಭಿಯಾನ ನಡೆಸಲು ಒಡಿಶಾ ಸಚಿವರ ಮನವಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹವಾಮಾನ ಬದಲಾವಣೆ ಇಂದು ಬಹುದೊಡ್ಡ ಸವಾಲಾಗಿದೆ. ಹವಾಮಾನ ಸುಸ್ಥಿರವಾದ ಸ್ಥಿತಿಗೆ ಬರಲು ಪರಿಸರ ಉಳಿವು-ರಕ್ಷಣೆ ಅಗತ್ಯ ಇದೆ. ಹೀಗಾಗಿ ಎಲ್ಲಾ ಕಾರ್ಯಕ್ರಮಗಳಲ್ಲಿ ಉಡುಗೊರೆಯಾಗಿ ಹೂಗುಚ್ಛದ ಬದಲಾಗಿ ಗಿಡಗಳನ್ನು ನೀಡಬೇಕು. 2025 ರಲ್ಲಿ ಇದೊಂದು ಅಭಿಯಾನವಾಗಬೇಕು ಎಂದು ಒಡಿಶಾದ ಅರಣ್ಯ ಮತ್ತು ಪರಿಸರ ಸಚಿವ ಗಣೇಶ್ ರಾಮ್ ಸಿಂಗ್ಖುಂಟಿಯಾ ಹೇಳಿದ್ದಾರೆ.…..ಮುಂದೆ ಓದಿ….

Advertisement

ಹೊಸ ವರ್ಷ ಅಂದರೆ 2025 ರಲ್ಲಿ ಉಡುಗೊರೆಯಾಗಿ ಗಿಡಗಳನ್ನು ನೀಡುವಂತೆ ಜನರಿಗೆ ಮನವಿ ಮಾಡಿದ ಸಚಿವರು, ಪರಿಸರ ಬಿಕ್ಕಟ್ಟನ್ನು ಪರಿಹರಿಸಲು ಈ ವಿನೂತನ ಅಭಿಯಾನವು ನಡೆದು ಇಡೀ ದೇಶದಲ್ಲಿ ಇದೊಂದು  ಕ್ರಾಂತಿಯಾಗಬೇಕು ಎಂದು ಸಚಿವರು ಅಭಿಪ್ರಾಯಪಟ್ಟರು. ಹಸಿರು ಮತ್ತು ಸುಸ್ಥಿರ ಪರಿಸರ ನಿರ್ಮಾಣಕ್ಕೆ ಜನರ ಸಹಭಾಗಿತ್ವ ಅಗತ್ಯವಾಗಿದೆ. ಇದಕ್ಕಾಗಿ   ಹೊಸ ವರ್ಷದ ಸಂದರ್ಭದಲ್ಲಿ ಹೂಗುಚ್ಛಗಳ ಬದಲಿಗೆ ಗಿಡಗಳನ್ನು ಉಡುಗೊರೆಯಾಗಿ ನೀಡಿ ಎಂದು ಮನವಿ ಮಾಡಿದರು.

ಪರಿಸರ ಸಮಸ್ಯೆ, ಹವಾಮಾನ ಬದಲಾವಣೆಯನ್ನು ಪರಿಹರಿಸಲು ಈ ವಿನೂತನ ಅಭಿಯಾನವು  ಕ್ರಾಂತಿಯಾಗಬೇಕು, 2036 ರ ವೇಳೆಗೆ ಒಡಿಶಾ ತನ್ನ ಹಿಂದಿನ ಪರಿಸರದ ಸ್ಥಿತಿಗೆ ಮರಳಬೇಕಿದೆ. ಹೀಗಾಗಿ ಗಿಡ ನೆಡಲು ಜನರನ್ನು ಒಳಗೊಂಡ ಆಂದೋಲನವಾಗಿ ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಒಡಿಶಾದ ಬಕುಲ್ ಪೌಂಡೇಶನ್‌ ಕಳೆದ 15 ವರ್ಷಗಳಿಂದ “ನನ್ನ ಮರ ಅಭಿಯಾನ”ವನ್ನು ನಡೆಸುತ್ತಿದೆ. ಪೌಂಡೇಶನ್‌ ನಡೆಸಿದ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

8 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…

8 hours ago

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

13 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

1 day ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 days ago