Advertisement
MIRROR FOCUS

2025 ರಲ್ಲಿ ಗಿಡಗಳನ್ನು ಉಡುಗೊರೆಯಾಗಿ ನೀಡಿ | ಅಭಿಯಾನ ನಡೆಸಲು ಒಡಿಶಾ ಸಚಿವರ ಮನವಿ |

Share

ಹವಾಮಾನ ಬದಲಾವಣೆ ಇಂದು ಬಹುದೊಡ್ಡ ಸವಾಲಾಗಿದೆ. ಹವಾಮಾನ ಸುಸ್ಥಿರವಾದ ಸ್ಥಿತಿಗೆ ಬರಲು ಪರಿಸರ ಉಳಿವು-ರಕ್ಷಣೆ ಅಗತ್ಯ ಇದೆ. ಹೀಗಾಗಿ ಎಲ್ಲಾ ಕಾರ್ಯಕ್ರಮಗಳಲ್ಲಿ ಉಡುಗೊರೆಯಾಗಿ ಹೂಗುಚ್ಛದ ಬದಲಾಗಿ ಗಿಡಗಳನ್ನು ನೀಡಬೇಕು. 2025 ರಲ್ಲಿ ಇದೊಂದು ಅಭಿಯಾನವಾಗಬೇಕು ಎಂದು ಒಡಿಶಾದ ಅರಣ್ಯ ಮತ್ತು ಪರಿಸರ ಸಚಿವ ಗಣೇಶ್ ರಾಮ್ ಸಿಂಗ್ಖುಂಟಿಯಾ ಹೇಳಿದ್ದಾರೆ.…..ಮುಂದೆ ಓದಿ….

Advertisement
Advertisement

ಹೊಸ ವರ್ಷ ಅಂದರೆ 2025 ರಲ್ಲಿ ಉಡುಗೊರೆಯಾಗಿ ಗಿಡಗಳನ್ನು ನೀಡುವಂತೆ ಜನರಿಗೆ ಮನವಿ ಮಾಡಿದ ಸಚಿವರು, ಪರಿಸರ ಬಿಕ್ಕಟ್ಟನ್ನು ಪರಿಹರಿಸಲು ಈ ವಿನೂತನ ಅಭಿಯಾನವು ನಡೆದು ಇಡೀ ದೇಶದಲ್ಲಿ ಇದೊಂದು  ಕ್ರಾಂತಿಯಾಗಬೇಕು ಎಂದು ಸಚಿವರು ಅಭಿಪ್ರಾಯಪಟ್ಟರು. ಹಸಿರು ಮತ್ತು ಸುಸ್ಥಿರ ಪರಿಸರ ನಿರ್ಮಾಣಕ್ಕೆ ಜನರ ಸಹಭಾಗಿತ್ವ ಅಗತ್ಯವಾಗಿದೆ. ಇದಕ್ಕಾಗಿ   ಹೊಸ ವರ್ಷದ ಸಂದರ್ಭದಲ್ಲಿ ಹೂಗುಚ್ಛಗಳ ಬದಲಿಗೆ ಗಿಡಗಳನ್ನು ಉಡುಗೊರೆಯಾಗಿ ನೀಡಿ ಎಂದು ಮನವಿ ಮಾಡಿದರು.

ಪರಿಸರ ಸಮಸ್ಯೆ, ಹವಾಮಾನ ಬದಲಾವಣೆಯನ್ನು ಪರಿಹರಿಸಲು ಈ ವಿನೂತನ ಅಭಿಯಾನವು  ಕ್ರಾಂತಿಯಾಗಬೇಕು, 2036 ರ ವೇಳೆಗೆ ಒಡಿಶಾ ತನ್ನ ಹಿಂದಿನ ಪರಿಸರದ ಸ್ಥಿತಿಗೆ ಮರಳಬೇಕಿದೆ. ಹೀಗಾಗಿ ಗಿಡ ನೆಡಲು ಜನರನ್ನು ಒಳಗೊಂಡ ಆಂದೋಲನವಾಗಿ ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಒಡಿಶಾದ ಬಕುಲ್ ಪೌಂಡೇಶನ್‌ ಕಳೆದ 15 ವರ್ಷಗಳಿಂದ “ನನ್ನ ಮರ ಅಭಿಯಾನ”ವನ್ನು ನಡೆಸುತ್ತಿದೆ. ಪೌಂಡೇಶನ್‌ ನಡೆಸಿದ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

22 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

23 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

23 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

23 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

23 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

23 hours ago