Advertisement
MIRROR FOCUS

2025 ರಲ್ಲಿ ಗಿಡಗಳನ್ನು ಉಡುಗೊರೆಯಾಗಿ ನೀಡಿ | ಅಭಿಯಾನ ನಡೆಸಲು ಒಡಿಶಾ ಸಚಿವರ ಮನವಿ |

Share

ಹವಾಮಾನ ಬದಲಾವಣೆ ಇಂದು ಬಹುದೊಡ್ಡ ಸವಾಲಾಗಿದೆ. ಹವಾಮಾನ ಸುಸ್ಥಿರವಾದ ಸ್ಥಿತಿಗೆ ಬರಲು ಪರಿಸರ ಉಳಿವು-ರಕ್ಷಣೆ ಅಗತ್ಯ ಇದೆ. ಹೀಗಾಗಿ ಎಲ್ಲಾ ಕಾರ್ಯಕ್ರಮಗಳಲ್ಲಿ ಉಡುಗೊರೆಯಾಗಿ ಹೂಗುಚ್ಛದ ಬದಲಾಗಿ ಗಿಡಗಳನ್ನು ನೀಡಬೇಕು. 2025 ರಲ್ಲಿ ಇದೊಂದು ಅಭಿಯಾನವಾಗಬೇಕು ಎಂದು ಒಡಿಶಾದ ಅರಣ್ಯ ಮತ್ತು ಪರಿಸರ ಸಚಿವ ಗಣೇಶ್ ರಾಮ್ ಸಿಂಗ್ಖುಂಟಿಯಾ ಹೇಳಿದ್ದಾರೆ.…..ಮುಂದೆ ಓದಿ….

ಹೊಸ ವರ್ಷ ಅಂದರೆ 2025 ರಲ್ಲಿ ಉಡುಗೊರೆಯಾಗಿ ಗಿಡಗಳನ್ನು ನೀಡುವಂತೆ ಜನರಿಗೆ ಮನವಿ ಮಾಡಿದ ಸಚಿವರು, ಪರಿಸರ ಬಿಕ್ಕಟ್ಟನ್ನು ಪರಿಹರಿಸಲು ಈ ವಿನೂತನ ಅಭಿಯಾನವು ನಡೆದು ಇಡೀ ದೇಶದಲ್ಲಿ ಇದೊಂದು  ಕ್ರಾಂತಿಯಾಗಬೇಕು ಎಂದು ಸಚಿವರು ಅಭಿಪ್ರಾಯಪಟ್ಟರು. ಹಸಿರು ಮತ್ತು ಸುಸ್ಥಿರ ಪರಿಸರ ನಿರ್ಮಾಣಕ್ಕೆ ಜನರ ಸಹಭಾಗಿತ್ವ ಅಗತ್ಯವಾಗಿದೆ. ಇದಕ್ಕಾಗಿ   ಹೊಸ ವರ್ಷದ ಸಂದರ್ಭದಲ್ಲಿ ಹೂಗುಚ್ಛಗಳ ಬದಲಿಗೆ ಗಿಡಗಳನ್ನು ಉಡುಗೊರೆಯಾಗಿ ನೀಡಿ ಎಂದು ಮನವಿ ಮಾಡಿದರು.

ಪರಿಸರ ಸಮಸ್ಯೆ, ಹವಾಮಾನ ಬದಲಾವಣೆಯನ್ನು ಪರಿಹರಿಸಲು ಈ ವಿನೂತನ ಅಭಿಯಾನವು  ಕ್ರಾಂತಿಯಾಗಬೇಕು, 2036 ರ ವೇಳೆಗೆ ಒಡಿಶಾ ತನ್ನ ಹಿಂದಿನ ಪರಿಸರದ ಸ್ಥಿತಿಗೆ ಮರಳಬೇಕಿದೆ. ಹೀಗಾಗಿ ಗಿಡ ನೆಡಲು ಜನರನ್ನು ಒಳಗೊಂಡ ಆಂದೋಲನವಾಗಿ ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಒಡಿಶಾದ ಬಕುಲ್ ಪೌಂಡೇಶನ್‌ ಕಳೆದ 15 ವರ್ಷಗಳಿಂದ “ನನ್ನ ಮರ ಅಭಿಯಾನ”ವನ್ನು ನಡೆಸುತ್ತಿದೆ. ಪೌಂಡೇಶನ್‌ ನಡೆಸಿದ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

6 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

11 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

16 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

2 days ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

2 days ago