Advertisement
MIRROR FOCUS

2025 ರಲ್ಲಿ ಗಿಡಗಳನ್ನು ಉಡುಗೊರೆಯಾಗಿ ನೀಡಿ | ಅಭಿಯಾನ ನಡೆಸಲು ಒಡಿಶಾ ಸಚಿವರ ಮನವಿ |

Share

ಹವಾಮಾನ ಬದಲಾವಣೆ ಇಂದು ಬಹುದೊಡ್ಡ ಸವಾಲಾಗಿದೆ. ಹವಾಮಾನ ಸುಸ್ಥಿರವಾದ ಸ್ಥಿತಿಗೆ ಬರಲು ಪರಿಸರ ಉಳಿವು-ರಕ್ಷಣೆ ಅಗತ್ಯ ಇದೆ. ಹೀಗಾಗಿ ಎಲ್ಲಾ ಕಾರ್ಯಕ್ರಮಗಳಲ್ಲಿ ಉಡುಗೊರೆಯಾಗಿ ಹೂಗುಚ್ಛದ ಬದಲಾಗಿ ಗಿಡಗಳನ್ನು ನೀಡಬೇಕು. 2025 ರಲ್ಲಿ ಇದೊಂದು ಅಭಿಯಾನವಾಗಬೇಕು ಎಂದು ಒಡಿಶಾದ ಅರಣ್ಯ ಮತ್ತು ಪರಿಸರ ಸಚಿವ ಗಣೇಶ್ ರಾಮ್ ಸಿಂಗ್ಖುಂಟಿಯಾ ಹೇಳಿದ್ದಾರೆ.…..ಮುಂದೆ ಓದಿ….

ಹೊಸ ವರ್ಷ ಅಂದರೆ 2025 ರಲ್ಲಿ ಉಡುಗೊರೆಯಾಗಿ ಗಿಡಗಳನ್ನು ನೀಡುವಂತೆ ಜನರಿಗೆ ಮನವಿ ಮಾಡಿದ ಸಚಿವರು, ಪರಿಸರ ಬಿಕ್ಕಟ್ಟನ್ನು ಪರಿಹರಿಸಲು ಈ ವಿನೂತನ ಅಭಿಯಾನವು ನಡೆದು ಇಡೀ ದೇಶದಲ್ಲಿ ಇದೊಂದು  ಕ್ರಾಂತಿಯಾಗಬೇಕು ಎಂದು ಸಚಿವರು ಅಭಿಪ್ರಾಯಪಟ್ಟರು. ಹಸಿರು ಮತ್ತು ಸುಸ್ಥಿರ ಪರಿಸರ ನಿರ್ಮಾಣಕ್ಕೆ ಜನರ ಸಹಭಾಗಿತ್ವ ಅಗತ್ಯವಾಗಿದೆ. ಇದಕ್ಕಾಗಿ   ಹೊಸ ವರ್ಷದ ಸಂದರ್ಭದಲ್ಲಿ ಹೂಗುಚ್ಛಗಳ ಬದಲಿಗೆ ಗಿಡಗಳನ್ನು ಉಡುಗೊರೆಯಾಗಿ ನೀಡಿ ಎಂದು ಮನವಿ ಮಾಡಿದರು.

ಪರಿಸರ ಸಮಸ್ಯೆ, ಹವಾಮಾನ ಬದಲಾವಣೆಯನ್ನು ಪರಿಹರಿಸಲು ಈ ವಿನೂತನ ಅಭಿಯಾನವು  ಕ್ರಾಂತಿಯಾಗಬೇಕು, 2036 ರ ವೇಳೆಗೆ ಒಡಿಶಾ ತನ್ನ ಹಿಂದಿನ ಪರಿಸರದ ಸ್ಥಿತಿಗೆ ಮರಳಬೇಕಿದೆ. ಹೀಗಾಗಿ ಗಿಡ ನೆಡಲು ಜನರನ್ನು ಒಳಗೊಂಡ ಆಂದೋಲನವಾಗಿ ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಒಡಿಶಾದ ಬಕುಲ್ ಪೌಂಡೇಶನ್‌ ಕಳೆದ 15 ವರ್ಷಗಳಿಂದ “ನನ್ನ ಮರ ಅಭಿಯಾನ”ವನ್ನು ನಡೆಸುತ್ತಿದೆ. ಪೌಂಡೇಶನ್‌ ನಡೆಸಿದ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

10 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

14 hours ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

23 hours ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

23 hours ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

23 hours ago

ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ

ಡ್ರ್ಯಾಗನ್‌ ಫ್ರೂಟ್‌ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…

23 hours ago