ಬೆಳ್ಳಾರೆಯ ಮುಕ್ಕೂರು ನೇಸರ ಯುವಕ ಮಂಡಲ ಹತ್ತನೇ ವರ್ಷಾಚರಣೆ-ದಶಪ್ರಣತಿ ಪ್ರಯುಕ್ತ ಪ್ರಗತಿಪರ ಕೃಷಿಕ ಮೋಹನ ಬೈಪಾಡಿತ್ತಾಯ ಅವರ ಕೃಷಿ ಕ್ಷೇತ್ರದ ಸಹಯೋಗದೊಂದಿಗೆ ಜ.4 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯ ತನಕ ಕಾಳುಮೆಣಸು, ಕಾಫಿ ಗಿಡ ಕೃಷಿ ಮತ್ತು ನಿರ್ವಹಣೆ ಹಾಗೂ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ , ಮಣ್ಣಿನ ಪೋಷಕಾಂಶಗಳ ಬಗ್ಗೆ ಮಾಹಿತಿ ಕಾರ್ಯಾಗಾರವು ಮೇಲಿನ ಮುಕ್ಕೂರು ಮೋಹನ ಬೈಪಾಡಿತ್ತಾಯ ಅವರ ಕೃಷಿ ಕ್ಷೇತ್ರದಲ್ಲಿ ನಡೆಯಲಿದೆ.
ಸಂಪನ್ಮೂಲ ವ್ಯಕ್ತಿಗಳಾಗಿ ಐಸಿಎಆರ್-ಡಿಸಿಆರ್ ಪುತ್ತೂರು ಇದರ ನಿವೃತ್ತ ಪ್ರಧಾನ ವಿಜ್ಞಾನಿ ಡಾ.ಎನ್ ಯದುಕುಮಾರ್, ವಿಟ್ಲ ಸಿಪಿಸಿಆರ್ ಐ ಹಿರಿಯ ವಿಜ್ಞಾನಿ ಡಾ.ನಾಗರಾಜ, ಪ್ರಗತಿಪರ ಕೃಷಿಕರಾದ ಸುರೇಶ್ ಬಲ್ನಾಡು, ಚಂದ್ರಶೇಖರ ತಾಳ್ತಜೆ, ಭ್ಲೂಮ್ ಬಯೋಟೆಕ್ ಸಂಸ್ಥಾಪಕ ಸುಹಾಸ್ ಮೋಹನ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕೃಷಿಕ ಬಂಧುಗಳಿಗೆ ಉಪಹಾರ, ಊಟದ ವ್ಯವಸ್ಥೆ ಇರಲಿದೆ. ಕೃಷಿಕರಿಗೆ ಮುಕ್ತ ಪ್ರವೇಶವಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…