ಬೆಳ್ಳಾರೆಯ ಮುಕ್ಕೂರು ನೇಸರ ಯುವಕ ಮಂಡಲ ಹತ್ತನೇ ವರ್ಷಾಚರಣೆ-ದಶಪ್ರಣತಿ ಪ್ರಯುಕ್ತ ಪ್ರಗತಿಪರ ಕೃಷಿಕ ಮೋಹನ ಬೈಪಾಡಿತ್ತಾಯ ಅವರ ಕೃಷಿ ಕ್ಷೇತ್ರದ ಸಹಯೋಗದೊಂದಿಗೆ ಜ.4 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯ ತನಕ ಕಾಳುಮೆಣಸು, ಕಾಫಿ ಗಿಡ ಕೃಷಿ ಮತ್ತು ನಿರ್ವಹಣೆ ಹಾಗೂ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ , ಮಣ್ಣಿನ ಪೋಷಕಾಂಶಗಳ ಬಗ್ಗೆ ಮಾಹಿತಿ ಕಾರ್ಯಾಗಾರವು ಮೇಲಿನ ಮುಕ್ಕೂರು ಮೋಹನ ಬೈಪಾಡಿತ್ತಾಯ ಅವರ ಕೃಷಿ ಕ್ಷೇತ್ರದಲ್ಲಿ ನಡೆಯಲಿದೆ.
ಸಂಪನ್ಮೂಲ ವ್ಯಕ್ತಿಗಳಾಗಿ ಐಸಿಎಆರ್-ಡಿಸಿಆರ್ ಪುತ್ತೂರು ಇದರ ನಿವೃತ್ತ ಪ್ರಧಾನ ವಿಜ್ಞಾನಿ ಡಾ.ಎನ್ ಯದುಕುಮಾರ್, ವಿಟ್ಲ ಸಿಪಿಸಿಆರ್ ಐ ಹಿರಿಯ ವಿಜ್ಞಾನಿ ಡಾ.ನಾಗರಾಜ, ಪ್ರಗತಿಪರ ಕೃಷಿಕರಾದ ಸುರೇಶ್ ಬಲ್ನಾಡು, ಚಂದ್ರಶೇಖರ ತಾಳ್ತಜೆ, ಭ್ಲೂಮ್ ಬಯೋಟೆಕ್ ಸಂಸ್ಥಾಪಕ ಸುಹಾಸ್ ಮೋಹನ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕೃಷಿಕ ಬಂಧುಗಳಿಗೆ ಉಪಹಾರ, ಊಟದ ವ್ಯವಸ್ಥೆ ಇರಲಿದೆ. ಕೃಷಿಕರಿಗೆ ಮುಕ್ತ ಪ್ರವೇಶವಿದೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…