ಈಗ ಹಲವು ಕಡೆ ಕಾಳುಮೆಣಸು ಬೆಳೆಯುವ ವಿವಿಧ ಪ್ರಯತ್ನಗಳ ಬಗ್ಗೆ ಚರ್ಚೆಯಾಗುತ್ತಿದೆ. ಈ ನಡುವೆ ನಗರ ಪ್ರದೇಶದಲ್ಲೂ ಮನೆ ಬಳಕೆಗೆ ಅಗತ್ಯವಿದ್ದಷ್ಟು ಕಾಳುಮೆಣಸು ಹೇಗೆ ಬೆಳೆಯಬಹುದು ಎನ್ನುವುದು ಕೂಡಾ ಆಸಕ್ತಿಯ ವಿಷಯ. ಇದನ್ನು ಬ್ಯಾಂಕ್ ಉದ್ಯೋಗಿ, ಪುತ್ತೂರಿನ ವಿಶ್ವಾಸ್ ಸುಬ್ರಹ್ಮಣ್ಯ ಅವರು ಮಾಡಿದ್ದಾರೆ. ತಮ್ಮ ಮನೆಗೆ ಅಗತ್ಯ ಇರುವಷ್ಟು ಕಾಳುಮೆಣಸು ಬೆಳೆಯುತ್ತಿದ್ದಾರೆ.…..ಮುಂದೆ ಓದಿ….
ವಿಶ್ವಾಸ್ ಸುಬ್ರಹ್ಮಣ್ಯ ಅವರು ಪುತ್ತೂರಿನಲ್ಲಿ ಮನೆ ನಿರ್ಮಾಣದ ಮಾಡಿದ ಬಳಿಕ ಮನೆಯ ಪಕ್ಕದ ಕಂಪೌಂಡ್ ವಾಲ್ಗೆ ಸುಮಾರು 10 ವರ್ಷಗಳ ಹಿಂದೆ ಕಾಳುಮೆಣಸು ಬಳ್ಳಿ ಬಿಟ್ಟಿದ್ದರು. ಅದಾಗಿ 3-4 ವರ್ಷಗಳ ಬಳಿಕ ಕಾಳುಮೆಣಸು ಕೊಯ್ಲು ಆರಂಭವಾಗಿದೆ, ಗೋಡೆಯ ತುಂಬೆಲ್ಲಾ ಕಾಳುಮೆಣಸು ಬಳ್ಳಿ ಹಬ್ಬುತ್ತಾ ಸಾಗಿದೆ. ಬಹುದೊಡ್ಡ ಆರೈಕೆ ಮಾಡುತ್ತಿಲ್ಲ ಎನ್ನುವ ವಿಶ್ವಾಸ್ ಕೃಷ್ಣ ಅವರು, ವರ್ಷಕ್ಕೊಂದು ಬಾರಿ ಸಾವಯವ ಗೊಬ್ಬರ ನೀಡುತ್ತೇವೆ. ಒಂದೆರಡು ಬಳ್ಳಿ ಅಂದು ನಾಟಿ ಮಾಡಿದ್ದು, ಈಗ ಅದು ಇಡೀ ಗೋಡೆ ತುಂಬಾ ವ್ಯಾಪಿಸಿದೆ, ಸದ್ಯ 5 ಕೆಜಿಯಷ್ಟು ಕಾಳುಮೆಣಸು ಲಭ್ಯವಾಗುತ್ತದೆ. ನಮ್ಮ ಮನೆ ಬಳಕೆಗೆ ಸಾಕಾಗುತ್ತದೆ ಎನ್ನುತ್ತಾರೆ ವಿಶ್ವಾಸ್ ಸುಬ್ರಹ್ಮಣ್ಯ. ಯಾವುದೇ ಔಷಧಿ ಸಿಂಪಡಣೆ ಮಾಡುತ್ತಿಲ್ಲ, ರೋಗವೂ ಕಡಿಮೆ ಎಂದು ಹೇಳುತ್ತಾರೆ.
ನಗರ ಪ್ರದೇಶದಲ್ಲಿ ಗೋಡೆಯ ಅಲಂಕಾರಕ್ಕೂ ಕಾಳುಮೆಣಸು ಬಳ್ಳಿಯ ಮಾದರಿ ಆದರೆ, ಮನೆ ಉಪಯೋಗಕ್ಕೆ ಕಾಳುಮೆಣಸು ಕೂಡಾ ಲಭ್ಯವಾದಂತಾಗುತ್ತದೆ. ಈ ಮೂಲಕ ಕಾಳುಮೆಣಸು ಸ್ವಾವಲಂಬನೆಯ ಮಾದರಿಯನ್ನು ವಿಶ್ವಾಸ್ ಸುಬ್ರಹ್ಮಣ್ಯ ತೋರಿಸಿದ್ದಾರೆ.
Vishwas subrahmanya from Puttur has set a model in urban households by successfully growing a pepper vine on the compound wall of his residence.
ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…
ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಸ್ತೆಯ ಗುಂಡಿಗಳಲ್ಲಿ ನೀರಿನ ಅಂಶ ಇರುವಾಗಲೂ ರಸ್ತೆ ತೇಪೆ ಕೆಲಸ ಮಾಡಬಹುದು ಹಾಗೂ…
2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…
ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…