Advertisement
MIRROR FOCUS

ಕಂಪೌಂಡ್‌ ವಾಲಿನಲ್ಲಿ ಕಾಳುಮೆಣಸು ಕೃಷಿ | ನಗರದಲ್ಲಿ ಕಾಳುಮೆಣಸು ಸ್ವಾವಲಂಬನೆ |

Share

ಈಗ ಹಲವು ಕಡೆ ಕಾಳುಮೆಣಸು ಬೆಳೆಯುವ ವಿವಿಧ ಪ್ರಯತ್ನಗಳ ಬಗ್ಗೆ ಚರ್ಚೆಯಾಗುತ್ತಿದೆ. ಈ ನಡುವೆ ನಗರ ಪ್ರದೇಶದಲ್ಲೂ ಮನೆ ಬಳಕೆಗೆ ಅಗತ್ಯವಿದ್ದಷ್ಟು ಕಾಳುಮೆಣಸು ಹೇಗೆ ಬೆಳೆಯಬಹುದು ಎನ್ನುವುದು ಕೂಡಾ ಆಸಕ್ತಿಯ ವಿಷಯ. ಇದನ್ನು ಬ್ಯಾಂಕ್‌ ಉದ್ಯೋಗಿ, ಪುತ್ತೂರಿನ ವಿಶ್ವಾಸ್‌ ಸುಬ್ರಹ್ಮಣ್ಯ ಅವರು ಮಾಡಿದ್ದಾರೆ. ತಮ್ಮ ಮನೆಗೆ ಅಗತ್ಯ ಇರುವಷ್ಟು ಕಾಳುಮೆಣಸು ಬೆಳೆಯುತ್ತಿದ್ದಾರೆ.…..ಮುಂದೆ ಓದಿ….

Advertisement
Advertisement
Advertisement

ವಿಶ್ವಾಸ್‌ ಸುಬ್ರಹ್ಮಣ್ಯ ಅವರು ಪುತ್ತೂರಿನಲ್ಲಿ ಮನೆ ನಿರ್ಮಾಣದ ಮಾಡಿದ ಬಳಿಕ ಮನೆಯ ಪಕ್ಕದ ಕಂಪೌಂಡ್‌ ವಾಲ್‌ಗೆ ಸುಮಾರು 10 ವರ್ಷಗಳ ಹಿಂದೆ ಕಾಳುಮೆಣಸು ಬಳ್ಳಿ ಬಿಟ್ಟಿದ್ದರು. ಅದಾಗಿ 3-4 ವರ್ಷಗಳ ಬಳಿಕ ಕಾಳುಮೆಣಸು ಕೊಯ್ಲು ಆರಂಭವಾಗಿದೆ, ಗೋಡೆಯ ತುಂಬೆಲ್ಲಾ ಕಾಳುಮೆಣಸು ಬಳ್ಳಿ ಹಬ್ಬುತ್ತಾ ಸಾಗಿದೆ. ಬಹುದೊಡ್ಡ ಆರೈಕೆ ಮಾಡುತ್ತಿಲ್ಲ ಎನ್ನುವ ವಿಶ್ವಾಸ್‌ ಕೃಷ್ಣ ಅವರು, ವರ್ಷಕ್ಕೊಂದು ಬಾರಿ ಸಾವಯವ ಗೊಬ್ಬರ ನೀಡುತ್ತೇವೆ. ಒಂದೆರಡು ಬಳ್ಳಿ ಅಂದು ನಾಟಿ ಮಾಡಿದ್ದು, ಈಗ ಅದು ಇಡೀ ಗೋಡೆ ತುಂಬಾ ವ್ಯಾಪಿಸಿದೆ, ಸದ್ಯ  5 ಕೆಜಿಯಷ್ಟು ಕಾಳುಮೆಣಸು ಲಭ್ಯವಾಗುತ್ತದೆ. ನಮ್ಮ ಮನೆ ಬಳಕೆಗೆ ಸಾಕಾಗುತ್ತದೆ ಎನ್ನುತ್ತಾರೆ ವಿಶ್ವಾಸ್‌ ಸುಬ್ರಹ್ಮಣ್ಯ. ಯಾವುದೇ ಔಷಧಿ ಸಿಂಪಡಣೆ ಮಾಡುತ್ತಿಲ್ಲ, ರೋಗವೂ ಕಡಿಮೆ ಎಂದು ಹೇಳುತ್ತಾರೆ.

Advertisement

ನಗರ ಪ್ರದೇಶದಲ್ಲಿ ಗೋಡೆಯ ಅಲಂಕಾರಕ್ಕೂ ಕಾಳುಮೆಣಸು ಬಳ್ಳಿಯ ಮಾದರಿ ಆದರೆ, ಮನೆ ಉಪಯೋಗಕ್ಕೆ ಕಾಳುಮೆಣಸು ಕೂಡಾ ಲಭ್ಯವಾದಂತಾಗುತ್ತದೆ. ಈ ಮೂಲಕ ಕಾಳುಮೆಣಸು ಸ್ವಾವಲಂಬನೆಯ ಮಾದರಿಯನ್ನು ವಿಶ್ವಾಸ್‌ ಸುಬ್ರಹ್ಮಣ್ಯ ತೋರಿಸಿದ್ದಾರೆ.

Advertisement

Vishwas subrahmanya from Puttur has set a model in urban households by successfully growing a pepper vine on the compound wall of his residence.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಹಿಳೆಯರಿಗೆ ಕೌಶಲ್ಯ ತರಬೇತಿ ಕಾರ್ಯಾಗಾರ | ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಹೇಗೆ..?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಂಪುರ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಭಾರತೀಯ…

7 hours ago

ಭೂಮಿ ಹುಣ್ಣಿಮೆ | ಅನ್ನದಾತರಿಂದ ಹೊಲ ಗದ್ದೆಗಳಲ್ಲಿ ವಿಶೇಷ ಪೂಜೆ |

ಹೊಲದಲ್ಲಿ ಇರುವ ಪೈರನ್ನು ಗರ್ಭವತಿ ಎಂದು ಕಲ್ಪಿಸಿಕೊಂಡು ಈ ವಿಶಿಷ್ಟ ಆಚರಣೆ ಭೂಮಿ…

7 hours ago

ಕೊಪ್ಪಳದಲ್ಲಿ ಮಳೆಯಿಂದ ದ್ರಾಕ್ಷಿ ಬೆಳೆ ನಾಶ | ಸಂಕಷ್ಟಕ್ಕೆ ಸಿಲುಕಿದ ರೈತರು

ಐದು ಎಕರೆಯಲ್ಲಿ ದ್ರಾಕ್ಷಿ ಬೆಳೆದಿದ್ದು, ಅತಿಯಾದ ಮಳೆಯಿಂದ ಫಸಲು ನಾಶವಾಗಿದೆ ಎನ್ನುತ್ತಾರೆ ರೈತ…

7 hours ago

6 ಜಿ ತಂತ್ರಜ್ಞಾನದತ್ತ ಮುನ್ನುಗ್ಗುತ್ತಿರುವ ಭಾರತ | ಹಳ್ಳಿಗಳಿಗೂ ವೇಗ ಇಂಟರ್ನೆಟ್‌ ಏಕೆ ಅಗತ್ಯ..? | ಬಿಎಸ್‌ಎನ್‌ಎಲ್‌ ಒಳಗೆ ಕೆಲಸ ಹೇಗೆ ನಡೆಯುತ್ತಿದೆ…?

ಭಾರತದಲ್ಲಿ ಮೊಬೈಲ್ ಸಂಪರ್ಕಗಳು 904 ಮಿಲಿಯನ್‌ನಿಂದ 1.16 ಬಿಲಿಯನ್‌ಗೆ ಏರಿದೆ, ಬ್ರಾಡ್‌ಬ್ಯಾಂಡ್ ಬಳಕೆದಾರರು…

8 hours ago

ಹೋಬಳಿಗೊಂದು ವಸತಿ ಶಾಲೆ ನಿರ್ಮಿಸಲು ಸರ್ಕಾರದ ನಿರ್ಧಾರ

ಹೋಬಳಿಗೊಂದು ವಸತಿ ಶಾಲೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. …

17 hours ago

ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವ | ಸಹಸ್ರಾರು ಯಾತ್ರಾರ್ಥಿಗಳಿಂದ ಪುಣ್ಯಸ್ನಾನ

ಕೊಡಗು ಜಿಲ್ಲೆಯ ತಲಕಾವೇರಿ ಕ್ಷೇತ್ರದಲ್ಲಿ ಇಂದು ಬೆಳಗ್ಗೆ 7.40 ಸುಮಾರಿಗೆ ಸರಿಯಾಗಿ ಕಾವೇರಿ…

19 hours ago