Advertisement
MIRROR FOCUS

ಕಂಪೌಂಡ್‌ ವಾಲಿನಲ್ಲಿ ಕಾಳುಮೆಣಸು ಕೃಷಿ | ನಗರದಲ್ಲಿ ಕಾಳುಮೆಣಸು ಸ್ವಾವಲಂಬನೆ |

Share

ಈಗ ಹಲವು ಕಡೆ ಕಾಳುಮೆಣಸು ಬೆಳೆಯುವ ವಿವಿಧ ಪ್ರಯತ್ನಗಳ ಬಗ್ಗೆ ಚರ್ಚೆಯಾಗುತ್ತಿದೆ. ಈ ನಡುವೆ ನಗರ ಪ್ರದೇಶದಲ್ಲೂ ಮನೆ ಬಳಕೆಗೆ ಅಗತ್ಯವಿದ್ದಷ್ಟು ಕಾಳುಮೆಣಸು ಹೇಗೆ ಬೆಳೆಯಬಹುದು ಎನ್ನುವುದು ಕೂಡಾ ಆಸಕ್ತಿಯ ವಿಷಯ. ಇದನ್ನು ಬ್ಯಾಂಕ್‌ ಉದ್ಯೋಗಿ, ಪುತ್ತೂರಿನ ವಿಶ್ವಾಸ್‌ ಸುಬ್ರಹ್ಮಣ್ಯ ಅವರು ಮಾಡಿದ್ದಾರೆ. ತಮ್ಮ ಮನೆಗೆ ಅಗತ್ಯ ಇರುವಷ್ಟು ಕಾಳುಮೆಣಸು ಬೆಳೆಯುತ್ತಿದ್ದಾರೆ.…..ಮುಂದೆ ಓದಿ….

ವಿಶ್ವಾಸ್‌ ಸುಬ್ರಹ್ಮಣ್ಯ ಅವರು ಪುತ್ತೂರಿನಲ್ಲಿ ಮನೆ ನಿರ್ಮಾಣದ ಮಾಡಿದ ಬಳಿಕ ಮನೆಯ ಪಕ್ಕದ ಕಂಪೌಂಡ್‌ ವಾಲ್‌ಗೆ ಸುಮಾರು 10 ವರ್ಷಗಳ ಹಿಂದೆ ಕಾಳುಮೆಣಸು ಬಳ್ಳಿ ಬಿಟ್ಟಿದ್ದರು. ಅದಾಗಿ 3-4 ವರ್ಷಗಳ ಬಳಿಕ ಕಾಳುಮೆಣಸು ಕೊಯ್ಲು ಆರಂಭವಾಗಿದೆ, ಗೋಡೆಯ ತುಂಬೆಲ್ಲಾ ಕಾಳುಮೆಣಸು ಬಳ್ಳಿ ಹಬ್ಬುತ್ತಾ ಸಾಗಿದೆ. ಬಹುದೊಡ್ಡ ಆರೈಕೆ ಮಾಡುತ್ತಿಲ್ಲ ಎನ್ನುವ ವಿಶ್ವಾಸ್‌ ಕೃಷ್ಣ ಅವರು, ವರ್ಷಕ್ಕೊಂದು ಬಾರಿ ಸಾವಯವ ಗೊಬ್ಬರ ನೀಡುತ್ತೇವೆ. ಒಂದೆರಡು ಬಳ್ಳಿ ಅಂದು ನಾಟಿ ಮಾಡಿದ್ದು, ಈಗ ಅದು ಇಡೀ ಗೋಡೆ ತುಂಬಾ ವ್ಯಾಪಿಸಿದೆ, ಸದ್ಯ  5 ಕೆಜಿಯಷ್ಟು ಕಾಳುಮೆಣಸು ಲಭ್ಯವಾಗುತ್ತದೆ. ನಮ್ಮ ಮನೆ ಬಳಕೆಗೆ ಸಾಕಾಗುತ್ತದೆ ಎನ್ನುತ್ತಾರೆ ವಿಶ್ವಾಸ್‌ ಸುಬ್ರಹ್ಮಣ್ಯ. ಯಾವುದೇ ಔಷಧಿ ಸಿಂಪಡಣೆ ಮಾಡುತ್ತಿಲ್ಲ, ರೋಗವೂ ಕಡಿಮೆ ಎಂದು ಹೇಳುತ್ತಾರೆ.

ನಗರ ಪ್ರದೇಶದಲ್ಲಿ ಗೋಡೆಯ ಅಲಂಕಾರಕ್ಕೂ ಕಾಳುಮೆಣಸು ಬಳ್ಳಿಯ ಮಾದರಿ ಆದರೆ, ಮನೆ ಉಪಯೋಗಕ್ಕೆ ಕಾಳುಮೆಣಸು ಕೂಡಾ ಲಭ್ಯವಾದಂತಾಗುತ್ತದೆ. ಈ ಮೂಲಕ ಕಾಳುಮೆಣಸು ಸ್ವಾವಲಂಬನೆಯ ಮಾದರಿಯನ್ನು ವಿಶ್ವಾಸ್‌ ಸುಬ್ರಹ್ಮಣ್ಯ ತೋರಿಸಿದ್ದಾರೆ.

Vishwas subrahmanya from Puttur has set a model in urban households by successfully growing a pepper vine on the compound wall of his residence.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

1 day ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

1 day ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago