Advertisement
MIRROR FOCUS

ಕಂಪೌಂಡ್‌ ವಾಲಿನಲ್ಲಿ ಕಾಳುಮೆಣಸು ಕೃಷಿ | ನಗರದಲ್ಲಿ ಕಾಳುಮೆಣಸು ಸ್ವಾವಲಂಬನೆ |

Share

ಈಗ ಹಲವು ಕಡೆ ಕಾಳುಮೆಣಸು ಬೆಳೆಯುವ ವಿವಿಧ ಪ್ರಯತ್ನಗಳ ಬಗ್ಗೆ ಚರ್ಚೆಯಾಗುತ್ತಿದೆ. ಈ ನಡುವೆ ನಗರ ಪ್ರದೇಶದಲ್ಲೂ ಮನೆ ಬಳಕೆಗೆ ಅಗತ್ಯವಿದ್ದಷ್ಟು ಕಾಳುಮೆಣಸು ಹೇಗೆ ಬೆಳೆಯಬಹುದು ಎನ್ನುವುದು ಕೂಡಾ ಆಸಕ್ತಿಯ ವಿಷಯ. ಇದನ್ನು ಬ್ಯಾಂಕ್‌ ಉದ್ಯೋಗಿ, ಪುತ್ತೂರಿನ ವಿಶ್ವಾಸ್‌ ಸುಬ್ರಹ್ಮಣ್ಯ ಅವರು ಮಾಡಿದ್ದಾರೆ. ತಮ್ಮ ಮನೆಗೆ ಅಗತ್ಯ ಇರುವಷ್ಟು ಕಾಳುಮೆಣಸು ಬೆಳೆಯುತ್ತಿದ್ದಾರೆ.…..ಮುಂದೆ ಓದಿ….

ವಿಶ್ವಾಸ್‌ ಸುಬ್ರಹ್ಮಣ್ಯ ಅವರು ಪುತ್ತೂರಿನಲ್ಲಿ ಮನೆ ನಿರ್ಮಾಣದ ಮಾಡಿದ ಬಳಿಕ ಮನೆಯ ಪಕ್ಕದ ಕಂಪೌಂಡ್‌ ವಾಲ್‌ಗೆ ಸುಮಾರು 10 ವರ್ಷಗಳ ಹಿಂದೆ ಕಾಳುಮೆಣಸು ಬಳ್ಳಿ ಬಿಟ್ಟಿದ್ದರು. ಅದಾಗಿ 3-4 ವರ್ಷಗಳ ಬಳಿಕ ಕಾಳುಮೆಣಸು ಕೊಯ್ಲು ಆರಂಭವಾಗಿದೆ, ಗೋಡೆಯ ತುಂಬೆಲ್ಲಾ ಕಾಳುಮೆಣಸು ಬಳ್ಳಿ ಹಬ್ಬುತ್ತಾ ಸಾಗಿದೆ. ಬಹುದೊಡ್ಡ ಆರೈಕೆ ಮಾಡುತ್ತಿಲ್ಲ ಎನ್ನುವ ವಿಶ್ವಾಸ್‌ ಕೃಷ್ಣ ಅವರು, ವರ್ಷಕ್ಕೊಂದು ಬಾರಿ ಸಾವಯವ ಗೊಬ್ಬರ ನೀಡುತ್ತೇವೆ. ಒಂದೆರಡು ಬಳ್ಳಿ ಅಂದು ನಾಟಿ ಮಾಡಿದ್ದು, ಈಗ ಅದು ಇಡೀ ಗೋಡೆ ತುಂಬಾ ವ್ಯಾಪಿಸಿದೆ, ಸದ್ಯ  5 ಕೆಜಿಯಷ್ಟು ಕಾಳುಮೆಣಸು ಲಭ್ಯವಾಗುತ್ತದೆ. ನಮ್ಮ ಮನೆ ಬಳಕೆಗೆ ಸಾಕಾಗುತ್ತದೆ ಎನ್ನುತ್ತಾರೆ ವಿಶ್ವಾಸ್‌ ಸುಬ್ರಹ್ಮಣ್ಯ. ಯಾವುದೇ ಔಷಧಿ ಸಿಂಪಡಣೆ ಮಾಡುತ್ತಿಲ್ಲ, ರೋಗವೂ ಕಡಿಮೆ ಎಂದು ಹೇಳುತ್ತಾರೆ.

ನಗರ ಪ್ರದೇಶದಲ್ಲಿ ಗೋಡೆಯ ಅಲಂಕಾರಕ್ಕೂ ಕಾಳುಮೆಣಸು ಬಳ್ಳಿಯ ಮಾದರಿ ಆದರೆ, ಮನೆ ಉಪಯೋಗಕ್ಕೆ ಕಾಳುಮೆಣಸು ಕೂಡಾ ಲಭ್ಯವಾದಂತಾಗುತ್ತದೆ. ಈ ಮೂಲಕ ಕಾಳುಮೆಣಸು ಸ್ವಾವಲಂಬನೆಯ ಮಾದರಿಯನ್ನು ವಿಶ್ವಾಸ್‌ ಸುಬ್ರಹ್ಮಣ್ಯ ತೋರಿಸಿದ್ದಾರೆ.

Vishwas subrahmanya from Puttur has set a model in urban households by successfully growing a pepper vine on the compound wall of his residence.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

4 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

16 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

18 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

23 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

2 days ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

2 days ago