Advertisement
MIRROR FOCUS

ಕಂಪೌಂಡ್‌ ವಾಲಿನಲ್ಲಿ ಕಾಳುಮೆಣಸು ಕೃಷಿ | ನಗರದಲ್ಲಿ ಕಾಳುಮೆಣಸು ಸ್ವಾವಲಂಬನೆ |

Share

ಈಗ ಹಲವು ಕಡೆ ಕಾಳುಮೆಣಸು ಬೆಳೆಯುವ ವಿವಿಧ ಪ್ರಯತ್ನಗಳ ಬಗ್ಗೆ ಚರ್ಚೆಯಾಗುತ್ತಿದೆ. ಈ ನಡುವೆ ನಗರ ಪ್ರದೇಶದಲ್ಲೂ ಮನೆ ಬಳಕೆಗೆ ಅಗತ್ಯವಿದ್ದಷ್ಟು ಕಾಳುಮೆಣಸು ಹೇಗೆ ಬೆಳೆಯಬಹುದು ಎನ್ನುವುದು ಕೂಡಾ ಆಸಕ್ತಿಯ ವಿಷಯ. ಇದನ್ನು ಬ್ಯಾಂಕ್‌ ಉದ್ಯೋಗಿ, ಪುತ್ತೂರಿನ ವಿಶ್ವಾಸ್‌ ಸುಬ್ರಹ್ಮಣ್ಯ ಅವರು ಮಾಡಿದ್ದಾರೆ. ತಮ್ಮ ಮನೆಗೆ ಅಗತ್ಯ ಇರುವಷ್ಟು ಕಾಳುಮೆಣಸು ಬೆಳೆಯುತ್ತಿದ್ದಾರೆ.…..ಮುಂದೆ ಓದಿ….

ವಿಶ್ವಾಸ್‌ ಸುಬ್ರಹ್ಮಣ್ಯ ಅವರು ಪುತ್ತೂರಿನಲ್ಲಿ ಮನೆ ನಿರ್ಮಾಣದ ಮಾಡಿದ ಬಳಿಕ ಮನೆಯ ಪಕ್ಕದ ಕಂಪೌಂಡ್‌ ವಾಲ್‌ಗೆ ಸುಮಾರು 10 ವರ್ಷಗಳ ಹಿಂದೆ ಕಾಳುಮೆಣಸು ಬಳ್ಳಿ ಬಿಟ್ಟಿದ್ದರು. ಅದಾಗಿ 3-4 ವರ್ಷಗಳ ಬಳಿಕ ಕಾಳುಮೆಣಸು ಕೊಯ್ಲು ಆರಂಭವಾಗಿದೆ, ಗೋಡೆಯ ತುಂಬೆಲ್ಲಾ ಕಾಳುಮೆಣಸು ಬಳ್ಳಿ ಹಬ್ಬುತ್ತಾ ಸಾಗಿದೆ. ಬಹುದೊಡ್ಡ ಆರೈಕೆ ಮಾಡುತ್ತಿಲ್ಲ ಎನ್ನುವ ವಿಶ್ವಾಸ್‌ ಕೃಷ್ಣ ಅವರು, ವರ್ಷಕ್ಕೊಂದು ಬಾರಿ ಸಾವಯವ ಗೊಬ್ಬರ ನೀಡುತ್ತೇವೆ. ಒಂದೆರಡು ಬಳ್ಳಿ ಅಂದು ನಾಟಿ ಮಾಡಿದ್ದು, ಈಗ ಅದು ಇಡೀ ಗೋಡೆ ತುಂಬಾ ವ್ಯಾಪಿಸಿದೆ, ಸದ್ಯ  5 ಕೆಜಿಯಷ್ಟು ಕಾಳುಮೆಣಸು ಲಭ್ಯವಾಗುತ್ತದೆ. ನಮ್ಮ ಮನೆ ಬಳಕೆಗೆ ಸಾಕಾಗುತ್ತದೆ ಎನ್ನುತ್ತಾರೆ ವಿಶ್ವಾಸ್‌ ಸುಬ್ರಹ್ಮಣ್ಯ. ಯಾವುದೇ ಔಷಧಿ ಸಿಂಪಡಣೆ ಮಾಡುತ್ತಿಲ್ಲ, ರೋಗವೂ ಕಡಿಮೆ ಎಂದು ಹೇಳುತ್ತಾರೆ.

ನಗರ ಪ್ರದೇಶದಲ್ಲಿ ಗೋಡೆಯ ಅಲಂಕಾರಕ್ಕೂ ಕಾಳುಮೆಣಸು ಬಳ್ಳಿಯ ಮಾದರಿ ಆದರೆ, ಮನೆ ಉಪಯೋಗಕ್ಕೆ ಕಾಳುಮೆಣಸು ಕೂಡಾ ಲಭ್ಯವಾದಂತಾಗುತ್ತದೆ. ಈ ಮೂಲಕ ಕಾಳುಮೆಣಸು ಸ್ವಾವಲಂಬನೆಯ ಮಾದರಿಯನ್ನು ವಿಶ್ವಾಸ್‌ ಸುಬ್ರಹ್ಮಣ್ಯ ತೋರಿಸಿದ್ದಾರೆ.

Vishwas subrahmanya from Puttur has set a model in urban households by successfully growing a pepper vine on the compound wall of his residence.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

4 hours ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

5 hours ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

5 hours ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

5 hours ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

14 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

18 hours ago