Advertisement
ಸುದ್ದಿಗಳು

41,000 ಟನ್‌ ಕಾಳುಮೆಣಸು ರಫ್ತು ಮಾಡಿದ ವಿಯೆಟ್ನಾಂ | ಜಾಗತಿಕ ಕಾಳುಮೆಣಸು ಮಾರುಕಟ್ಟೆ ಚೇತರಿಸಿಕೊಳ್ಳುವ ಸೂಚನೆ ನೀಡಿದ ವಿಯೆಟ್ನಾಂ |

Share

ಕಳೆದ ಎರಡು ತಿಂಗಳಲ್ಲಿ 129 ಮಿಲಿಯನ್ ಡಾಲರ್ ಮೌಲ್ಯದ 41,000 ಟನ್ ಕಾಳುಮೆಣಸನ್ನು‌ ವಿಯೆಟ್ನಾಂ ರಫ್ತು ಮಾಡಿದೆ. ಜಾಗತಿಕವಾಗಿ ಕಾಳುಮೆಣಸಿಗೆ ಬೇಡಿಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕಾಳುಮೆಣಸಿನ  ಮಾರುಕಟ್ಟೆ ಚೇತರಿಕೆ ಕಾಣುವ ನಿರೀಕ್ಷೆ ಇದೆ ಎಂದಿ ವಿಯೆಟ್ನಾಂ ಹೇಳಿದೆ.

ವಿಯೆಟ್ನಾಂ ಈ ವರ್ಷದ ಮೊದಲ ಎರಡು ತಿಂಗಳಲ್ಲಿ 129 ಮಿಲಿಯನ್ ಡಾಲರ್ ಮೌಲ್ಯದ 41,000 ಟನ್ ಕಾಳುಮೆಣಸನ್ನು ರಫ್ತು ಮಾಡಿದೆ. ರಪ್ತು ಮಾಡಿರುವ ಪ್ರಮಾಣದಲ್ಲಿ ಕಳೆದ ವರ್ಷಕ್ಕಿಂದ 35% ಹೆಚ್ಚಾಗಿದೆ, ಆದರೆ ಮೌಲ್ಯದ ಆಧಾರದಲ್ಲಿ 7.4% ಕಡಿಮೆಯಾಗಿದೆ ಎಂದು ವಿಯೆಟ್ನಾಂ ಆಮದು-ರಫ್ತು ಸಚಿವಾಲಯ ಹೇಳಿದೆ. ಈಗ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆ ಚೇತರಿಕೆ ಕಾಣಲಿದೆ ಎಂದು ಮುನ್ಸೂಚನೆ ನೀಡಿದೆ.

ವಿಯೆಟ್ನಾಂ ಮಾರುಕಟ್ಟೆಗೆ ಸಂಬಂಧಿಸಿದಂತೆ, ಚೀನಾ ಮಾರುಕಟ್ಟೆಯಿಂದ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಫೆಬ್ರವರಿಯಲ್ಲಿ ಕಪ್ಪು ಮತ್ತು ಬಿಳಿ ಕಾಳುಮೆಣಸಿನ ಬೆಲೆಗಳು ತೀವ್ರವಾಗಿ ಹೆಚ್ಚಿವೆ. ಹೀಗಾಗಿ ಬೇಡಿಕೆಯ ಆಧಾರದಲ್ಲಿ ಧಾರಣೆಯೂ ಉತ್ತಮವಾಗುತ್ತಿದೆ. ಇದುವರೆಗೆ ಧಾರಣೆಗಿಂತ ಇನ್ನು ಹೆಚ್ಚಿನ ಧಾರಣೆ ಸಿಗಬಹುದು ಎಂದು ಹೇಳಿದೆ.

ಆಮದುದಾರರಿಂದ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಜಾಗತಿಕ ಮೆಣಸು ಮಾರುಕಟ್ಟೆ ಚೇತರಿಸಿಕೊಳ್ಳುವ ಮುನ್ಸೂಚನೆ ಇದೆ ಎಂದು ವಿಯೆಟ್ನಾಂ ಸಚಿವಾಲಯ ಹೇಳಿದೆ. ಹೀಗಾಗಿ ಜಾಗತಿಕ ಮಾರುಕಟ್ಟೆ ಹೊಂದಿರುವ ಕಾಳುಮೆಣಸು ಧಾರಣೆ ಭಾರತದಲ್ಲೂ ಸ್ವಲ್ಪ ಪ್ರಮಾಣದಲ್ಲಿ ಏರಿಕೆ ಕಾಣುವ ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

13 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

3 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago