Advertisement
MIRROR FOCUS

#BlackPepper | ಕಾಳುಮೆಣಸು ಧಾರಣೆ ಏರಿಕೆ | 500+ ಧಾರಣೆಗೆ ಕಾಳುಮೆಣಸು ಖರೀದಿ | ಏಕೆ ಬೇಡಿಕೆ ಹೆಚ್ಚಾಯ್ತು… ? | ಹೇಗಿದೆ ಮಾರುಕಟ್ಟೆ ಟ್ರೆಂಡ್…?‌ |

Share

ಅನೇಕ ಸಮಯಗಳ ಬಳಿಕ ಕಾಳುಮೆಣಸು ಧಾರಣೆಯಲ್ಲಿ ಚೇತರಿಕೆ ಕಾಣುತ್ತಿದೆ. ವಾರದಿಂದ ವಾರಕ್ಕೆ ಧಾರಣೆಯಲ್ಲಿ  ಏರಿಕೆ ಕಾಣುತ್ತಿದೆ. ಇದೀಗ 530 ರೂಪಾಯಿವರೆಗೂ ಖರೀದಿ ನಡೆದಿದೆ. 

ಕಳೆದ ಅನೇಕ ವರ್ಷಗಳಿಂದ ಕಾಳುಮೆಣಸು ಧಾರಣೆ ಏರಿಕೆ ಕಾಣಲಿಲ್ಲ. 450 ರೂಪಾಯಿ ಆಸುಪಾಸಿನಲ್ಲಿ ಕಾಳುಮೆಣಸು ಧಾರಣೆ ಸ್ಥಿರವಾಗಿತ್ತು. ಇದೀಗ ಕಳೆದ ಒಂದು ತಿಂಗಳಿನಿಂದ ಕಾಳುಮೆಣಸು ಧಾರಣೆ ಚೇತರಿಕೆ ಕಾಣುತ್ತಿತ್ತು. ಈಗ 500 + ಧಾರಣೆಯ ಮೂಲಕ ಮತ್ತೆ ಕೃಷಿಕರ ಗಮನ ಸೆಳೆದಿದೆ. ಕೆಲವು ವರ್ಷಗಳ ಹಿಂದೆ 700 ರೂಪಾಯಿವರೆಗೂ ತಲಪಿದ್ದ ಧಾರಣೆಯ ಮೂಲಕ ಕೃಷಿಕರ ಕಪ್ಪುಚಿನ್ನ ಎಂದೇ ಗುರುತಿಸಿಕೊಂಡಿತ್ತು. ಅದಾಗಿ ಇಳಿಕೆಯಾದ ಮಾರುಕಟ್ಟೆ ಚೇತರಿಕೆ ಕಂಡಿರಲಿಲ್ಲ. ಇದೀಗ ಮತ್ತೆ ಚೇತರಿಕೆ ಕಾಣುತ್ತಿದೆ.

ಸದ್ಯದ ಮಾರುಕಟ್ಟೆ ಮಾಹಿತಿ ಪ್ರಕಾರ, ಮಾರುಕಟ್ಟೆಯಲ್ಲಿ ಕಾಳುಮೆಣಸು ಕೊರತೆ ಕಂಡುಬಂದಿದೆ. ವಿದೇಶಗಳಲ್ಲೂ ಏರುಗತಿಯ ಮಾರುಕಟ್ಟೆ ವಾತಾವರಣ ಇದೆ. ವಿಯೆಟ್ನಾಂನಂತಹ ದೇಶದಲ್ಲಿ ಕೂಡಾ ಕಾಳುಮೆಣಸು ಬೇಡಿಕೆ ಶುರುವಾಗಿದೆ. ಧಾರಣೆ ಇಳಿಕೆಯ ಕಾರಣದಿಂದ ದೇಶೀಯ ಮಾರುಕಟ್ಟೆಯಲ್ಲಿ ಕೃಷಿಕರು ಕಾಳುಮೆಣಸು ಮಾರುಕಟ್ಟೆಗೆ ಬಿಡುತ್ತಿರಲಿಲ್ಲ. ದಾಸ್ತಾನು ಇರಿಸಿಕೊಂಡರೆ, ಅಲ್ಪಸ್ವಲ್ಪ ಪ್ರಮಾಣದಲ್ಲಿ ಕೃಷಿಕರು ಕಾಳುಮೆಣಸು ಮಾರುಕಟ್ಟೆಗೆ ಬಿಡುತ್ತಿದ್ದರು.

ದೇಶದ ಕಾಳುಮೆಣಸು ಉತ್ಪಾದನೆ 70 ಸಾವಿರ ಟನ್‌ ಇದೆ. ಆದರೆ ಅದರಲ್ಲಿ ಕರ್ನಾಟಕದ ಉತ್ಪಾದನೆಯೇ 33 ಸಾವಿರ ಟನ್‌.  ಕೇರಳದಲ್ಲಿ 28 ಸಾವಿರ ಟನ್‌ ಬೆಳೆಯಲಾಗುತ್ತದೆ. ಕಾಳುಮೆಣಸನ್ನು ಭಾರತದಲ್ಲಿ ಪ್ರಮುಖವಾಗಿ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ, ಒಡಿಶಾ, ಮಹಾರಾಷ್ಟ್ರ, ಗೋವಾ, ಅಸ್ಸಾಂ, ಮೇಘಾಲಯ ಹಾಗೂ ತ್ರಿಪುರಾಗಳಲ್ಲಿ ಬೆಳೆಯಲಾಗುತ್ತದೆ. ಈಚೆಗೆ ಧಾರಣೆ ಹಾಗೂ ರೋಗದ ಸಮಸ್ಯೆಯಿಂದ ಕಾಳುಮೆಣಸು ಗಿಡ ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ.

ಇದೀಗ ಔಷಧಿ ಸಹಿತ ಸಾಂಬಾರ ವಸ್ತುವಾಗಿ ಕಾಳುಮೆಣಸು ಮತ್ತೆ ಬೇಡಿಕೆ ಶುರುವಾಗಿದೆ. ಪ್ರತೀ ಕೆಜಿಗೆ 500 ರೂಪಾಯಿ ತಲುಪಿದರೂ ಮಾರುಕಟ್ಟೆಗೆ ಕಾಳುಮೆಣಸು ಪ್ರವೇಶವಾಗುತ್ತಿಲ್ಲ. ಹೀಗಾಗಿ ಧಾರಣೆ ಏರಿಕೆಯ ಹಾದಿಯಲ್ಲಿ ಸಾಗುತ್ತಿದೆ. ಇದೇ ವೇಳೆ ಕಾಳುಮೆಣಸು ಬೆಳೆಯಲ್ಲೂ ಕೊರತೆ ಇದೆ. ಹೀಗಾಗಿ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದೆ.

Advertisement

ಕಳೆದ ಬೆಳೆಯಲ್ಲೂ ಕಾಳುಮೆಣಸು ಇಳುವರಿ ಕೊರತೆಯಾಗಿತ್ತು. ಈ ಬಾರಿ ಕೂಡಾ ಸುಮಾರು 5-8 ಸಾವಿರ ಟನ್‌ ಕಾಳುಮೆಣಸು ಕೊರತೆ ಉಂಟಾಗಿದೆ. ವಿದೇಶಗಳಲ್ಲಿ ಕೂಡಾ ಕಾಳುಮೆಣಸು ಇಳುವರಿಯಲ್ಲಿ  ಕೊರತೆ ಕಂಡುಬಂದಿದೆ. ಮುಂದಿನ ಋತುವಿನಲ್ಲಿ ಇಂಡೋನೇಷ್ಯಾದಲ್ಲಿ ಬೆಳೆ ಕಡಿಮೆ ಆಗಲಿದೆ ಎಂದು ಅಂದಾಜಿಸಲಾಗಿದೆ.  ಜಾಗತಿಕ ಬೆಲೆಗಳು ಸಹ ಏರಿಕೆಯ ಸಾಧ್ಯತೆಯಿದೆ. ಆದರೆ ವಿಯೆಟ್ನಾಂನಲ್ಲಿ ಕಾಳುಮೆಣಸು ಉತ್ಪಾದನೆಯು ಕಳೆದ ವರ್ಷ 1.30 ಲಕ್ಷ ಟನ್‌ಗೆ ಹತ್ತಿರದಲ್ಲಿದೆ ಎಂದು ಅಂದಾಜಿಸಲಾಗಿದೆ.

ಹೀಗಾಗಿ ಸದ್ಯ ಕಾಳುಮೆಣಸು ದರ ಏರಿಕೆಯ ನಿರೀಕ್ಷೆ ಇದೆ. ಆದರೆ ಇದೇ ಟ್ರೆಂಡ್‌ ಮುಂದುವರಿಯುವ ಲಕ್ಷಣಗಳ ಬಗ್ಗೆ ಕಾಳುಮೆಣಸು ಮಾರುಕಟ್ಟೆ ವಲಯವು ಯಾವ ಸ್ಪಷ್ಟತೆಯನ್ನೂ ನೀಡುವುದಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಗುಡ್ಡಗಾಡು ಪ್ರದೇಶಗಳ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಗೆ ದೊಡ್ಡ ಸವಾಲು | ಮಧ್ಯವರ್ತಿಗಳ ಅವಲಂಬನೆ ಕಡಿಮೆ ಮಾಡಲು ರೈತರ ಹೊಸ ಮಾರ್ಗ

ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…

9 hours ago

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

16 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

20 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

22 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

1 day ago