Advertisement
MIRROR FOCUS

#BlackPepper | ಕಾಳುಮೆಣಸು ಧಾರಣೆ ಏರಿಕೆ | 500+ ಧಾರಣೆಗೆ ಕಾಳುಮೆಣಸು ಖರೀದಿ | ಏಕೆ ಬೇಡಿಕೆ ಹೆಚ್ಚಾಯ್ತು… ? | ಹೇಗಿದೆ ಮಾರುಕಟ್ಟೆ ಟ್ರೆಂಡ್…?‌ |

Share

ಅನೇಕ ಸಮಯಗಳ ಬಳಿಕ ಕಾಳುಮೆಣಸು ಧಾರಣೆಯಲ್ಲಿ ಚೇತರಿಕೆ ಕಾಣುತ್ತಿದೆ. ವಾರದಿಂದ ವಾರಕ್ಕೆ ಧಾರಣೆಯಲ್ಲಿ  ಏರಿಕೆ ಕಾಣುತ್ತಿದೆ. ಇದೀಗ 530 ರೂಪಾಯಿವರೆಗೂ ಖರೀದಿ ನಡೆದಿದೆ. 

ಕಳೆದ ಅನೇಕ ವರ್ಷಗಳಿಂದ ಕಾಳುಮೆಣಸು ಧಾರಣೆ ಏರಿಕೆ ಕಾಣಲಿಲ್ಲ. 450 ರೂಪಾಯಿ ಆಸುಪಾಸಿನಲ್ಲಿ ಕಾಳುಮೆಣಸು ಧಾರಣೆ ಸ್ಥಿರವಾಗಿತ್ತು. ಇದೀಗ ಕಳೆದ ಒಂದು ತಿಂಗಳಿನಿಂದ ಕಾಳುಮೆಣಸು ಧಾರಣೆ ಚೇತರಿಕೆ ಕಾಣುತ್ತಿತ್ತು. ಈಗ 500 + ಧಾರಣೆಯ ಮೂಲಕ ಮತ್ತೆ ಕೃಷಿಕರ ಗಮನ ಸೆಳೆದಿದೆ. ಕೆಲವು ವರ್ಷಗಳ ಹಿಂದೆ 700 ರೂಪಾಯಿವರೆಗೂ ತಲಪಿದ್ದ ಧಾರಣೆಯ ಮೂಲಕ ಕೃಷಿಕರ ಕಪ್ಪುಚಿನ್ನ ಎಂದೇ ಗುರುತಿಸಿಕೊಂಡಿತ್ತು. ಅದಾಗಿ ಇಳಿಕೆಯಾದ ಮಾರುಕಟ್ಟೆ ಚೇತರಿಕೆ ಕಂಡಿರಲಿಲ್ಲ. ಇದೀಗ ಮತ್ತೆ ಚೇತರಿಕೆ ಕಾಣುತ್ತಿದೆ.

ಸದ್ಯದ ಮಾರುಕಟ್ಟೆ ಮಾಹಿತಿ ಪ್ರಕಾರ, ಮಾರುಕಟ್ಟೆಯಲ್ಲಿ ಕಾಳುಮೆಣಸು ಕೊರತೆ ಕಂಡುಬಂದಿದೆ. ವಿದೇಶಗಳಲ್ಲೂ ಏರುಗತಿಯ ಮಾರುಕಟ್ಟೆ ವಾತಾವರಣ ಇದೆ. ವಿಯೆಟ್ನಾಂನಂತಹ ದೇಶದಲ್ಲಿ ಕೂಡಾ ಕಾಳುಮೆಣಸು ಬೇಡಿಕೆ ಶುರುವಾಗಿದೆ. ಧಾರಣೆ ಇಳಿಕೆಯ ಕಾರಣದಿಂದ ದೇಶೀಯ ಮಾರುಕಟ್ಟೆಯಲ್ಲಿ ಕೃಷಿಕರು ಕಾಳುಮೆಣಸು ಮಾರುಕಟ್ಟೆಗೆ ಬಿಡುತ್ತಿರಲಿಲ್ಲ. ದಾಸ್ತಾನು ಇರಿಸಿಕೊಂಡರೆ, ಅಲ್ಪಸ್ವಲ್ಪ ಪ್ರಮಾಣದಲ್ಲಿ ಕೃಷಿಕರು ಕಾಳುಮೆಣಸು ಮಾರುಕಟ್ಟೆಗೆ ಬಿಡುತ್ತಿದ್ದರು.

ದೇಶದ ಕಾಳುಮೆಣಸು ಉತ್ಪಾದನೆ 70 ಸಾವಿರ ಟನ್‌ ಇದೆ. ಆದರೆ ಅದರಲ್ಲಿ ಕರ್ನಾಟಕದ ಉತ್ಪಾದನೆಯೇ 33 ಸಾವಿರ ಟನ್‌.  ಕೇರಳದಲ್ಲಿ 28 ಸಾವಿರ ಟನ್‌ ಬೆಳೆಯಲಾಗುತ್ತದೆ. ಕಾಳುಮೆಣಸನ್ನು ಭಾರತದಲ್ಲಿ ಪ್ರಮುಖವಾಗಿ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ, ಒಡಿಶಾ, ಮಹಾರಾಷ್ಟ್ರ, ಗೋವಾ, ಅಸ್ಸಾಂ, ಮೇಘಾಲಯ ಹಾಗೂ ತ್ರಿಪುರಾಗಳಲ್ಲಿ ಬೆಳೆಯಲಾಗುತ್ತದೆ. ಈಚೆಗೆ ಧಾರಣೆ ಹಾಗೂ ರೋಗದ ಸಮಸ್ಯೆಯಿಂದ ಕಾಳುಮೆಣಸು ಗಿಡ ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ.

ಇದೀಗ ಔಷಧಿ ಸಹಿತ ಸಾಂಬಾರ ವಸ್ತುವಾಗಿ ಕಾಳುಮೆಣಸು ಮತ್ತೆ ಬೇಡಿಕೆ ಶುರುವಾಗಿದೆ. ಪ್ರತೀ ಕೆಜಿಗೆ 500 ರೂಪಾಯಿ ತಲುಪಿದರೂ ಮಾರುಕಟ್ಟೆಗೆ ಕಾಳುಮೆಣಸು ಪ್ರವೇಶವಾಗುತ್ತಿಲ್ಲ. ಹೀಗಾಗಿ ಧಾರಣೆ ಏರಿಕೆಯ ಹಾದಿಯಲ್ಲಿ ಸಾಗುತ್ತಿದೆ. ಇದೇ ವೇಳೆ ಕಾಳುಮೆಣಸು ಬೆಳೆಯಲ್ಲೂ ಕೊರತೆ ಇದೆ. ಹೀಗಾಗಿ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದೆ.

ಕಳೆದ ಬೆಳೆಯಲ್ಲೂ ಕಾಳುಮೆಣಸು ಇಳುವರಿ ಕೊರತೆಯಾಗಿತ್ತು. ಈ ಬಾರಿ ಕೂಡಾ ಸುಮಾರು 5-8 ಸಾವಿರ ಟನ್‌ ಕಾಳುಮೆಣಸು ಕೊರತೆ ಉಂಟಾಗಿದೆ. ವಿದೇಶಗಳಲ್ಲಿ ಕೂಡಾ ಕಾಳುಮೆಣಸು ಇಳುವರಿಯಲ್ಲಿ  ಕೊರತೆ ಕಂಡುಬಂದಿದೆ. ಮುಂದಿನ ಋತುವಿನಲ್ಲಿ ಇಂಡೋನೇಷ್ಯಾದಲ್ಲಿ ಬೆಳೆ ಕಡಿಮೆ ಆಗಲಿದೆ ಎಂದು ಅಂದಾಜಿಸಲಾಗಿದೆ.  ಜಾಗತಿಕ ಬೆಲೆಗಳು ಸಹ ಏರಿಕೆಯ ಸಾಧ್ಯತೆಯಿದೆ. ಆದರೆ ವಿಯೆಟ್ನಾಂನಲ್ಲಿ ಕಾಳುಮೆಣಸು ಉತ್ಪಾದನೆಯು ಕಳೆದ ವರ್ಷ 1.30 ಲಕ್ಷ ಟನ್‌ಗೆ ಹತ್ತಿರದಲ್ಲಿದೆ ಎಂದು ಅಂದಾಜಿಸಲಾಗಿದೆ.

ಹೀಗಾಗಿ ಸದ್ಯ ಕಾಳುಮೆಣಸು ದರ ಏರಿಕೆಯ ನಿರೀಕ್ಷೆ ಇದೆ. ಆದರೆ ಇದೇ ಟ್ರೆಂಡ್‌ ಮುಂದುವರಿಯುವ ಲಕ್ಷಣಗಳ ಬಗ್ಗೆ ಕಾಳುಮೆಣಸು ಮಾರುಕಟ್ಟೆ ವಲಯವು ಯಾವ ಸ್ಪಷ್ಟತೆಯನ್ನೂ ನೀಡುವುದಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

6 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

6 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

8 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

11 hours ago