ಪೆರಾಜೆ ಕಲ್ಲಿನ ಗಣಿಗಾರಿಕೆ | ಸ್ಪೋಟಕ ಬಳಸದೇ ಗಣಿಗಾರಿಕೆಗೆ ಸೂಚನೆ | ಪೆರಾಜೆ ಶಾಸ್ತಾವು ದೇವಳದಲ್ಲಿ ಸಾರ್ವಜನಿಕರಿಂದ ಪೂಜೆ |

September 24, 2023
7:33 PM
ಸ್ಪೋಟಕ ಬಳಸದೇ ಗಣಿಗಾರಿಕೆ ನಡೆಸುವಂತೆ ಸೂಚನೆ ಹಿನ್ನಲೆಯಲ್ಲಿ ಪೆರಾಜೆ ಶ್ರೀ ಶಾಸ್ತಾವು ದೇವಳದಲ್ಲಿ ಸಾರ್ವಜನಿಕರಿಂದ ವಿಶೇಷ ಪೂಜೆ ನಡೆಯಿತು.

ಪೆರಾಜೆ ಕಲ್ಲಿನ ಗಣಿಗಾರಿಕೆ- ಸ್ಪೋಟಕ ಬಳಸದೇ ಗಣಿಗಾರಿಕೆ ನಡೆಸುವಂತೆ ಸೂಚನೆ ಹಿನ್ನಲೆಯಲ್ಲಿ ಪೆರಾಜೆ ಶ್ರೀ ಶಾಸ್ತಾವು ದೇವಳದಲ್ಲಿ ಸಾರ್ವಜನಿಕರಿಂದ ವಿಶೇಷ ಪೂಜೆ ನಡೆಯಿತು.

ಪೆರಾಜೆ ಗ್ರಾಮದ ಅಮಚೂರುನಲ್ಲಿ ಕಲ್ಲಿನ ಗಣಿಗಾರಿಕೆ ಹಲವಾರು ವರ್ಷಗಳಿಂದ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಕಳೆದ ವರ್ಷದಲ್ಲಿ ಹಲವಾರು ಬಾರೀ ಭೂಕಂಪಗಳು ಸಂಭವಿಸಿದರಿಂದ ಸಾರ್ವಜನಿಕಕರು ಸ್ಪೋಟಕ ಬಳಸದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ, ಆಗಿನ ಶಾಸಕ ಬೋಪಯ್ಯ ಅವರಿಗೆ ದೂರು ಸಲ್ಲಿಸಲಾಗಿತ್ತು. ಆದರೂ ಕ್ರಮಕೈಗೊಂಡಿಲ್ಲ. ಇದೀಗ ಈಗಿನ ಶಾಸಕರಾದ ಪೊನ್ನಣ್ಣ ಅವರಿಗೆ ಸ್ಥಳೀಯರು ಮತ್ತು ಸಾರ್ವಜನಿಕರು ಮನವರಿಕೆ ಮಾಡಿ, ಮನವಿ ಸಲ್ಲಿಸಲಾಗಿದ್ದು, ಕೂಡಲೇ ಮನವಿಗೆ ಸ್ಪಂದಿಸಿದ ಶಾಸಕರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸ್ಥಳಪರಿಶೀಲನೆ ನಡೆಸಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ ಕೂಡಲೇ ಇಲಾಖೆಯ ಅಧಿಕಾರಿ ಪರಿಶೀಲನೆ ನಡೆಸಿ, ಸ್ಪೋಟಕ ಬಳಸದೆ, ಮಾನವ ಶ್ರಮದ ಮೂಲಕ ಗಣಿಗಾರಿಕೆ ನಡೆಸುವಂತೆ ಗಣಿಗಾರಿಕೆಯ ಪಾಲುದಾರರಿಗೆ ನೋಟಿಸ್ ನೀಡಲಾಗಿದೆ.

ತಪ್ಪಿದಲ್ಲಿ ಕೆ.ಎಂ.ಎಂ.ಸಿ.ಆರ್ 1994 ರ ನಿಯಮಾನುಸಾರ ಕಾನೂನು ಕ್ರಮಕೈಗೊಳ್ಳುವುದಾಗಿ ಕೊಡಗು ಗಣಿ ಮತ್ತು ಭೂವಿಜ್ಞಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನಲೆಯಲ್ಲಿ ಪೆರಾಜೆ ಶ್ರೀಶಾಸ್ತಾವು ದೇವಳದಲ್ಲಿ ಸ್ಥಳೀಯ ರು ಮತ್ತು ಸಾರ್ವಜನಿಕರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ
April 18, 2026
10:06 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!
April 18, 2026
1:37 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!
April 18, 2026
7:28 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ
April 18, 2026
7:22 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror