ಪೆರಾಜೆ ಕಲ್ಲಿನ ಗಣಿಗಾರಿಕೆ | ಸ್ಪೋಟಕ ಬಳಸದೇ ಗಣಿಗಾರಿಕೆಗೆ ಸೂಚನೆ | ಪೆರಾಜೆ ಶಾಸ್ತಾವು ದೇವಳದಲ್ಲಿ ಸಾರ್ವಜನಿಕರಿಂದ ಪೂಜೆ |

September 24, 2023
7:33 PM
ಸ್ಪೋಟಕ ಬಳಸದೇ ಗಣಿಗಾರಿಕೆ ನಡೆಸುವಂತೆ ಸೂಚನೆ ಹಿನ್ನಲೆಯಲ್ಲಿ ಪೆರಾಜೆ ಶ್ರೀ ಶಾಸ್ತಾವು ದೇವಳದಲ್ಲಿ ಸಾರ್ವಜನಿಕರಿಂದ ವಿಶೇಷ ಪೂಜೆ ನಡೆಯಿತು.

ಪೆರಾಜೆ ಕಲ್ಲಿನ ಗಣಿಗಾರಿಕೆ- ಸ್ಪೋಟಕ ಬಳಸದೇ ಗಣಿಗಾರಿಕೆ ನಡೆಸುವಂತೆ ಸೂಚನೆ ಹಿನ್ನಲೆಯಲ್ಲಿ ಪೆರಾಜೆ ಶ್ರೀ ಶಾಸ್ತಾವು ದೇವಳದಲ್ಲಿ ಸಾರ್ವಜನಿಕರಿಂದ ವಿಶೇಷ ಪೂಜೆ ನಡೆಯಿತು.

ಪೆರಾಜೆ ಗ್ರಾಮದ ಅಮಚೂರುನಲ್ಲಿ ಕಲ್ಲಿನ ಗಣಿಗಾರಿಕೆ ಹಲವಾರು ವರ್ಷಗಳಿಂದ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಕಳೆದ ವರ್ಷದಲ್ಲಿ ಹಲವಾರು ಬಾರೀ ಭೂಕಂಪಗಳು ಸಂಭವಿಸಿದರಿಂದ ಸಾರ್ವಜನಿಕಕರು ಸ್ಪೋಟಕ ಬಳಸದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ, ಆಗಿನ ಶಾಸಕ ಬೋಪಯ್ಯ ಅವರಿಗೆ ದೂರು ಸಲ್ಲಿಸಲಾಗಿತ್ತು. ಆದರೂ ಕ್ರಮಕೈಗೊಂಡಿಲ್ಲ. ಇದೀಗ ಈಗಿನ ಶಾಸಕರಾದ ಪೊನ್ನಣ್ಣ ಅವರಿಗೆ ಸ್ಥಳೀಯರು ಮತ್ತು ಸಾರ್ವಜನಿಕರು ಮನವರಿಕೆ ಮಾಡಿ, ಮನವಿ ಸಲ್ಲಿಸಲಾಗಿದ್ದು, ಕೂಡಲೇ ಮನವಿಗೆ ಸ್ಪಂದಿಸಿದ ಶಾಸಕರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸ್ಥಳಪರಿಶೀಲನೆ ನಡೆಸಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ ಕೂಡಲೇ ಇಲಾಖೆಯ ಅಧಿಕಾರಿ ಪರಿಶೀಲನೆ ನಡೆಸಿ, ಸ್ಪೋಟಕ ಬಳಸದೆ, ಮಾನವ ಶ್ರಮದ ಮೂಲಕ ಗಣಿಗಾರಿಕೆ ನಡೆಸುವಂತೆ ಗಣಿಗಾರಿಕೆಯ ಪಾಲುದಾರರಿಗೆ ನೋಟಿಸ್ ನೀಡಲಾಗಿದೆ.

ತಪ್ಪಿದಲ್ಲಿ ಕೆ.ಎಂ.ಎಂ.ಸಿ.ಆರ್ 1994 ರ ನಿಯಮಾನುಸಾರ ಕಾನೂನು ಕ್ರಮಕೈಗೊಳ್ಳುವುದಾಗಿ ಕೊಡಗು ಗಣಿ ಮತ್ತು ಭೂವಿಜ್ಞಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನಲೆಯಲ್ಲಿ ಪೆರಾಜೆ ಶ್ರೀಶಾಸ್ತಾವು ದೇವಳದಲ್ಲಿ ಸ್ಥಳೀಯ ರು ಮತ್ತು ಸಾರ್ವಜನಿಕರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror