ಸುದ್ದಿಗಳು

ಪೆರಾಜೆ ಕಲ್ಲಿನ ಗಣಿಗಾರಿಕೆ | ಸ್ಪೋಟಕ ಬಳಸದೇ ಗಣಿಗಾರಿಕೆಗೆ ಸೂಚನೆ | ಪೆರಾಜೆ ಶಾಸ್ತಾವು ದೇವಳದಲ್ಲಿ ಸಾರ್ವಜನಿಕರಿಂದ ಪೂಜೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪೆರಾಜೆ ಕಲ್ಲಿನ ಗಣಿಗಾರಿಕೆ- ಸ್ಪೋಟಕ ಬಳಸದೇ ಗಣಿಗಾರಿಕೆ ನಡೆಸುವಂತೆ ಸೂಚನೆ ಹಿನ್ನಲೆಯಲ್ಲಿ ಪೆರಾಜೆ ಶ್ರೀ ಶಾಸ್ತಾವು ದೇವಳದಲ್ಲಿ ಸಾರ್ವಜನಿಕರಿಂದ ವಿಶೇಷ ಪೂಜೆ ನಡೆಯಿತು.

Advertisement

ಪೆರಾಜೆ ಗ್ರಾಮದ ಅಮಚೂರುನಲ್ಲಿ ಕಲ್ಲಿನ ಗಣಿಗಾರಿಕೆ ಹಲವಾರು ವರ್ಷಗಳಿಂದ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಕಳೆದ ವರ್ಷದಲ್ಲಿ ಹಲವಾರು ಬಾರೀ ಭೂಕಂಪಗಳು ಸಂಭವಿಸಿದರಿಂದ ಸಾರ್ವಜನಿಕಕರು ಸ್ಪೋಟಕ ಬಳಸದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ, ಆಗಿನ ಶಾಸಕ ಬೋಪಯ್ಯ ಅವರಿಗೆ ದೂರು ಸಲ್ಲಿಸಲಾಗಿತ್ತು. ಆದರೂ ಕ್ರಮಕೈಗೊಂಡಿಲ್ಲ. ಇದೀಗ ಈಗಿನ ಶಾಸಕರಾದ ಪೊನ್ನಣ್ಣ ಅವರಿಗೆ ಸ್ಥಳೀಯರು ಮತ್ತು ಸಾರ್ವಜನಿಕರು ಮನವರಿಕೆ ಮಾಡಿ, ಮನವಿ ಸಲ್ಲಿಸಲಾಗಿದ್ದು, ಕೂಡಲೇ ಮನವಿಗೆ ಸ್ಪಂದಿಸಿದ ಶಾಸಕರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸ್ಥಳಪರಿಶೀಲನೆ ನಡೆಸಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ ಕೂಡಲೇ ಇಲಾಖೆಯ ಅಧಿಕಾರಿ ಪರಿಶೀಲನೆ ನಡೆಸಿ, ಸ್ಪೋಟಕ ಬಳಸದೆ, ಮಾನವ ಶ್ರಮದ ಮೂಲಕ ಗಣಿಗಾರಿಕೆ ನಡೆಸುವಂತೆ ಗಣಿಗಾರಿಕೆಯ ಪಾಲುದಾರರಿಗೆ ನೋಟಿಸ್ ನೀಡಲಾಗಿದೆ.

ತಪ್ಪಿದಲ್ಲಿ ಕೆ.ಎಂ.ಎಂ.ಸಿ.ಆರ್ 1994 ರ ನಿಯಮಾನುಸಾರ ಕಾನೂನು ಕ್ರಮಕೈಗೊಳ್ಳುವುದಾಗಿ ಕೊಡಗು ಗಣಿ ಮತ್ತು ಭೂವಿಜ್ಞಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನಲೆಯಲ್ಲಿ ಪೆರಾಜೆ ಶ್ರೀಶಾಸ್ತಾವು ದೇವಳದಲ್ಲಿ ಸ್ಥಳೀಯ ರು ಮತ್ತು ಸಾರ್ವಜನಿಕರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿದ್ಯಾರ್ಥಿಗಳ ಓದಿನ ವಿಷಯದ ಆಯ್ಕೆ ಹೇಗಿರಬೇಕು..?

ಹಲವಾರು ವಿದ್ಯಾರ್ಥಿಗಳಿಗೆ, ಪೋಷಕರಿಗೆ ತಮ್ಮ ಮಕ್ಕಳು ಎಸ್‌ಎಸ್‌ ಎಲ್‌ಸಿ , ಪಿಯುಸಿ ಆದ…

5 minutes ago

ರೈತರು ಗಮನಿಸಿ | ಭತ್ತದ ಬೆಳೆಗೆ ಫಸಲ್‌ ಭಿಮಾ ಯೋಜನೆ ವಿಮಾ ಪ್ರೀಮಿಯಂ ಪಾವತಿ ಪ್ರಾರಂಭ

ಭತ್ತದ ಬೆಳೆ ಬೆಳೆಯುವ ರೈತರಿಗೆ ಪ್ರಧಾನಮಂತ್ರಿ ಫಸಲ್‌ ಭಿಮಾ ಯೋಜನೆಯ ವಿಮಾ ಪ್ರೀಮಿಯಂ…

19 minutes ago

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ…

32 minutes ago

ಪ್ಲೈಓವರ್‌ ನಿರ್ಮಾಣದ ಬಳಿಕ ಹೇಗಿದೆ ಕಲ್ಲಡ್ಕ..?

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಪ್ಲೈಓವರ್‌ ಮೂಲಕ ವಾಹನ ಓಡಾಟ ಆರಂಭವಾಗಿದೆ. ಹೀಗಾಗಿ…

52 minutes ago

ಗೇರು ವಾಣಿಜ್ಯ ಬೆಳೆ ಗ್ರಾಮೀಣ ಭಾಗದ ರೈತರ ಮೂಲಸಂಪತ್ತು

‌ ಗೇರು ಒಂದು ವಾಣಿಜ್ಯ ಬೆಳೆಯಾಗಿದ್ದು ಇದು ಗ್ರಾಮೀಣ ಭಾಗದ ರೈತರ ಮೂಲಸಂಪತ್ತು.…

1 hour ago

ಅಮರನಾಥ ಯಾತ್ರೆ ಹಿನ್ನೆಲೆ | ಜುಲೈ 1 ರಿಂದ ಆಗಸ್ಟ್  ತಿಂಗಳವರೆಗೆ ಅಮರನಾಥ ಹಾರಾಟ ನಿಷೇಧ ವಲಯ

ಜಮ್ಮು - ಕಾಶ್ಮೀರ ಸರ್ಕಾರ ಅಮರನಾಥ ಗುಹೆ ದೇಗುಲಕ್ಕೆ ಹೋಗುವ ಎಲ್ಲಾ ಮಾರ್ಗಗಳನ್ನು…

7 hours ago