ಪೆರಾಜೆ ಕಲ್ಲಿನ ಗಣಿಗಾರಿಕೆ- ಸ್ಪೋಟಕ ಬಳಸದೇ ಗಣಿಗಾರಿಕೆ ನಡೆಸುವಂತೆ ಸೂಚನೆ ಹಿನ್ನಲೆಯಲ್ಲಿ ಪೆರಾಜೆ ಶ್ರೀ ಶಾಸ್ತಾವು ದೇವಳದಲ್ಲಿ ಸಾರ್ವಜನಿಕರಿಂದ ವಿಶೇಷ ಪೂಜೆ ನಡೆಯಿತು.
ಪೆರಾಜೆ ಗ್ರಾಮದ ಅಮಚೂರುನಲ್ಲಿ ಕಲ್ಲಿನ ಗಣಿಗಾರಿಕೆ ಹಲವಾರು ವರ್ಷಗಳಿಂದ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಕಳೆದ ವರ್ಷದಲ್ಲಿ ಹಲವಾರು ಬಾರೀ ಭೂಕಂಪಗಳು ಸಂಭವಿಸಿದರಿಂದ ಸಾರ್ವಜನಿಕಕರು ಸ್ಪೋಟಕ ಬಳಸದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ, ಆಗಿನ ಶಾಸಕ ಬೋಪಯ್ಯ ಅವರಿಗೆ ದೂರು ಸಲ್ಲಿಸಲಾಗಿತ್ತು. ಆದರೂ ಕ್ರಮಕೈಗೊಂಡಿಲ್ಲ. ಇದೀಗ ಈಗಿನ ಶಾಸಕರಾದ ಪೊನ್ನಣ್ಣ ಅವರಿಗೆ ಸ್ಥಳೀಯರು ಮತ್ತು ಸಾರ್ವಜನಿಕರು ಮನವರಿಕೆ ಮಾಡಿ, ಮನವಿ ಸಲ್ಲಿಸಲಾಗಿದ್ದು, ಕೂಡಲೇ ಮನವಿಗೆ ಸ್ಪಂದಿಸಿದ ಶಾಸಕರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸ್ಥಳಪರಿಶೀಲನೆ ನಡೆಸಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ ಕೂಡಲೇ ಇಲಾಖೆಯ ಅಧಿಕಾರಿ ಪರಿಶೀಲನೆ ನಡೆಸಿ, ಸ್ಪೋಟಕ ಬಳಸದೆ, ಮಾನವ ಶ್ರಮದ ಮೂಲಕ ಗಣಿಗಾರಿಕೆ ನಡೆಸುವಂತೆ ಗಣಿಗಾರಿಕೆಯ ಪಾಲುದಾರರಿಗೆ ನೋಟಿಸ್ ನೀಡಲಾಗಿದೆ.
ತಪ್ಪಿದಲ್ಲಿ ಕೆ.ಎಂ.ಎಂ.ಸಿ.ಆರ್ 1994 ರ ನಿಯಮಾನುಸಾರ ಕಾನೂನು ಕ್ರಮಕೈಗೊಳ್ಳುವುದಾಗಿ ಕೊಡಗು ಗಣಿ ಮತ್ತು ಭೂವಿಜ್ಞಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನಲೆಯಲ್ಲಿ ಪೆರಾಜೆ ಶ್ರೀಶಾಸ್ತಾವು ದೇವಳದಲ್ಲಿ ಸ್ಥಳೀಯ ರು ಮತ್ತು ಸಾರ್ವಜನಿಕರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…