ಪೆರಾಜೆ ಕಲ್ಲಿನ ಗಣಿಗಾರಿಕೆ- ಸ್ಪೋಟಕ ಬಳಸದೇ ಗಣಿಗಾರಿಕೆ ನಡೆಸುವಂತೆ ಸೂಚನೆ ಹಿನ್ನಲೆಯಲ್ಲಿ ಪೆರಾಜೆ ಶ್ರೀ ಶಾಸ್ತಾವು ದೇವಳದಲ್ಲಿ ಸಾರ್ವಜನಿಕರಿಂದ ವಿಶೇಷ ಪೂಜೆ ನಡೆಯಿತು.
ಪೆರಾಜೆ ಗ್ರಾಮದ ಅಮಚೂರುನಲ್ಲಿ ಕಲ್ಲಿನ ಗಣಿಗಾರಿಕೆ ಹಲವಾರು ವರ್ಷಗಳಿಂದ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಕಳೆದ ವರ್ಷದಲ್ಲಿ ಹಲವಾರು ಬಾರೀ ಭೂಕಂಪಗಳು ಸಂಭವಿಸಿದರಿಂದ ಸಾರ್ವಜನಿಕಕರು ಸ್ಪೋಟಕ ಬಳಸದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ, ಆಗಿನ ಶಾಸಕ ಬೋಪಯ್ಯ ಅವರಿಗೆ ದೂರು ಸಲ್ಲಿಸಲಾಗಿತ್ತು. ಆದರೂ ಕ್ರಮಕೈಗೊಂಡಿಲ್ಲ. ಇದೀಗ ಈಗಿನ ಶಾಸಕರಾದ ಪೊನ್ನಣ್ಣ ಅವರಿಗೆ ಸ್ಥಳೀಯರು ಮತ್ತು ಸಾರ್ವಜನಿಕರು ಮನವರಿಕೆ ಮಾಡಿ, ಮನವಿ ಸಲ್ಲಿಸಲಾಗಿದ್ದು, ಕೂಡಲೇ ಮನವಿಗೆ ಸ್ಪಂದಿಸಿದ ಶಾಸಕರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸ್ಥಳಪರಿಶೀಲನೆ ನಡೆಸಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ ಕೂಡಲೇ ಇಲಾಖೆಯ ಅಧಿಕಾರಿ ಪರಿಶೀಲನೆ ನಡೆಸಿ, ಸ್ಪೋಟಕ ಬಳಸದೆ, ಮಾನವ ಶ್ರಮದ ಮೂಲಕ ಗಣಿಗಾರಿಕೆ ನಡೆಸುವಂತೆ ಗಣಿಗಾರಿಕೆಯ ಪಾಲುದಾರರಿಗೆ ನೋಟಿಸ್ ನೀಡಲಾಗಿದೆ.
ತಪ್ಪಿದಲ್ಲಿ ಕೆ.ಎಂ.ಎಂ.ಸಿ.ಆರ್ 1994 ರ ನಿಯಮಾನುಸಾರ ಕಾನೂನು ಕ್ರಮಕೈಗೊಳ್ಳುವುದಾಗಿ ಕೊಡಗು ಗಣಿ ಮತ್ತು ಭೂವಿಜ್ಞಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನಲೆಯಲ್ಲಿ ಪೆರಾಜೆ ಶ್ರೀಶಾಸ್ತಾವು ದೇವಳದಲ್ಲಿ ಸ್ಥಳೀಯ ರು ಮತ್ತು ಸಾರ್ವಜನಿಕರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…