Advertisement
ಸುದ್ದಿಗಳು

ಪೆರಾಜೆ ಕಲ್ಲಿನ ಗಣಿಗಾರಿಕೆ | ಸ್ಪೋಟಕ ಬಳಸದೇ ಗಣಿಗಾರಿಕೆಗೆ ಸೂಚನೆ | ಪೆರಾಜೆ ಶಾಸ್ತಾವು ದೇವಳದಲ್ಲಿ ಸಾರ್ವಜನಿಕರಿಂದ ಪೂಜೆ |

Share

ಪೆರಾಜೆ ಕಲ್ಲಿನ ಗಣಿಗಾರಿಕೆ- ಸ್ಪೋಟಕ ಬಳಸದೇ ಗಣಿಗಾರಿಕೆ ನಡೆಸುವಂತೆ ಸೂಚನೆ ಹಿನ್ನಲೆಯಲ್ಲಿ ಪೆರಾಜೆ ಶ್ರೀ ಶಾಸ್ತಾವು ದೇವಳದಲ್ಲಿ ಸಾರ್ವಜನಿಕರಿಂದ ವಿಶೇಷ ಪೂಜೆ ನಡೆಯಿತು.

ಪೆರಾಜೆ ಗ್ರಾಮದ ಅಮಚೂರುನಲ್ಲಿ ಕಲ್ಲಿನ ಗಣಿಗಾರಿಕೆ ಹಲವಾರು ವರ್ಷಗಳಿಂದ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಕಳೆದ ವರ್ಷದಲ್ಲಿ ಹಲವಾರು ಬಾರೀ ಭೂಕಂಪಗಳು ಸಂಭವಿಸಿದರಿಂದ ಸಾರ್ವಜನಿಕಕರು ಸ್ಪೋಟಕ ಬಳಸದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ, ಆಗಿನ ಶಾಸಕ ಬೋಪಯ್ಯ ಅವರಿಗೆ ದೂರು ಸಲ್ಲಿಸಲಾಗಿತ್ತು. ಆದರೂ ಕ್ರಮಕೈಗೊಂಡಿಲ್ಲ. ಇದೀಗ ಈಗಿನ ಶಾಸಕರಾದ ಪೊನ್ನಣ್ಣ ಅವರಿಗೆ ಸ್ಥಳೀಯರು ಮತ್ತು ಸಾರ್ವಜನಿಕರು ಮನವರಿಕೆ ಮಾಡಿ, ಮನವಿ ಸಲ್ಲಿಸಲಾಗಿದ್ದು, ಕೂಡಲೇ ಮನವಿಗೆ ಸ್ಪಂದಿಸಿದ ಶಾಸಕರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸ್ಥಳಪರಿಶೀಲನೆ ನಡೆಸಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ ಕೂಡಲೇ ಇಲಾಖೆಯ ಅಧಿಕಾರಿ ಪರಿಶೀಲನೆ ನಡೆಸಿ, ಸ್ಪೋಟಕ ಬಳಸದೆ, ಮಾನವ ಶ್ರಮದ ಮೂಲಕ ಗಣಿಗಾರಿಕೆ ನಡೆಸುವಂತೆ ಗಣಿಗಾರಿಕೆಯ ಪಾಲುದಾರರಿಗೆ ನೋಟಿಸ್ ನೀಡಲಾಗಿದೆ.

ತಪ್ಪಿದಲ್ಲಿ ಕೆ.ಎಂ.ಎಂ.ಸಿ.ಆರ್ 1994 ರ ನಿಯಮಾನುಸಾರ ಕಾನೂನು ಕ್ರಮಕೈಗೊಳ್ಳುವುದಾಗಿ ಕೊಡಗು ಗಣಿ ಮತ್ತು ಭೂವಿಜ್ಞಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನಲೆಯಲ್ಲಿ ಪೆರಾಜೆ ಶ್ರೀಶಾಸ್ತಾವು ದೇವಳದಲ್ಲಿ ಸ್ಥಳೀಯ ರು ಮತ್ತು ಸಾರ್ವಜನಿಕರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

34 minutes ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

1 hour ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

14 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

23 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

1 day ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

2 days ago