MIRROR FOCUS

ಹಠ ಬಿಡದ ಕೆ ಎಸ್‌ ಈಶ್ವರಪ್ಪ | ಬಂಡಾಯವೆದ್ದ ಈಶ್ವರಪ್ಪ ಅವರನ್ನು ಉಚ್ಚಾಟಿಸಿದ ಬಿಜೆಪಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಶಿವಮೊಗ್ಗದಲ್ಲಿ (Shivamogga) ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಈಶ್ವರಪ್ಪ ಅವರನ್ನು ಬಿಜೆಪಿಯು (BJP) ಪಕ್ಷದಿಂದ ಉಚ್ಚಾಟನೆ ಮಾಡಿದೆ.

Advertisement
Advertisement

K S ಈಶ್ವರಪ್ಪ(K S Eshwarappa) ಮತ್ತು ಯಡಿಯೂರಪ್ಪ(B S Yadyurappa)ನವರ ನಡುವೆ ಭಿನ್ನಮತ, ಕೋಪತಾಪ ಇಂದು ನಿನ್ನೆಯದಲ್ಲ. ಇಬ್ಬರು ನಾಯಕರು ತಮ್ಮ ರಾಜಕೀಯ ವೃತ್ತಿ ಜೀವನದಲ್ಲಿ ಅದೆಷ್ಟೋ ಬಾರಿ ಮುನುಸಿಕೊಂಡಿದ್ದುಂಟು, ಒಂದಾಗಿದ್ದುಂಟು. ಯಾಕೆಂದರೆ, ಇವರಿಬ್ಬರ ನಡುವೆ ಮನಸ್ತಾಪ ಎದುರಾದಾಗ ಸಂಘ ಪರಿವಾರದ(RSS) ನಾಯಕರು ಮಧ್ಯಸ್ಥಿಕೆ ವಹಿಸಿ ಸರಿ ಮಾಡಿದ ಉದಾಹರಣೆಗಳೂ ಇವೆ. ಮಕ್ಕಳು ತನ್ನ ತಾಯಿಯ ಮೇಲೆ ಸಿಟ್ಟಾದರೆ ಅದೆಷ್ಟು ದಿನ? ಹಾಗೆಯೇ ಈಶ್ವರಪ್ಪನವರು ಇಂದಲ್ಲಾ ನಾಳೆ ಕೋಪ ಬಿಟ್ಟು ತಮ್ಮ ನಾಮಪತ್ರವನ್ನು ಹಿಂದಕ್ಕೆ ಪಡೆಯಬಹುದು ಎಂದೇ ವ್ಯಾಖ್ಯಾನಿಸಲಾಗಿತ್ತು. ಆದರೆ ಹಾಗಾಗಲಿಲ್ಲ.

ಪಕ್ಷದ ಸೂಚನೆಯನ್ನು ಧಿಕ್ಕರಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷಕ್ಕೆ ಮುಜುಗರ ತಂದಿದ್ದೀರಿ. ಆದ್ದರಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ನಾಮಪತ್ರ ಹಿಂದಕ್ಕೆ ಪಡೆಯುವಂತೆ ಬಿಜೆಪಿ ನಾಯಕರು ಈಶ್ವರಪ್ಪ ಅವರನ್ನು ಮನ ಒಲಿಸುವ ಪ್ರಯತ್ನ ಮಾಡಿದ್ದರು. ಆದರೆ ಈಶ್ವರಪ್ಪ ಕಣದಿಂದ ಹಿಂದಕ್ಕೆ ಸರಿಲಿಲ್ಲ. ಇಂದು ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿತ್ತು. ಇಂದು ನಾಮಪತ್ರವನ್ನು ಹಿಂದಕ್ಕೆ ಪಡೆಯದ ಕಾರಣ ಬಿಜೆಪಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ. ಮೋದಿ ಅಲ್ಲ ಬ್ರಹ್ಮ ಬಂದರೂ ಚುನಾವಣೆಯಲ್ಲಿಸ್ಪರ್ಧೆ ಮಾಡುವುದು ಖಚಿತ ಎಂದು ನಾಮಪತ್ರ ಹಿಂದೆ ಪಡೆಯದ ಈಶ್ವರಪ್ಪ.

ಕೆಎಸ್‌ ಈಶ್ವರಪ್ಪ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಹಿಂದಕ್ಕೆ ಸರಿಸುವ ನಿಟ್ಟಿನಲ್ಲಿ ಸಾಕಷ್ಟು ಸಭೆಗಳು ನಡೆದವು. ಹಿರಿಯ ಮುಖಂಡರು ಮಾತನಾಡಿದರು. ಆದರೂ, ಈಶ್ವರಪ್ಪ ಚುನಾವಣೆ ಸ್ಪರ್ಧೆ ಮಾಡುತ್ತೇನೆ ಎಂದು ಪಣತೊಟ್ಟರು. ಕರ್ನಾಟಕದಲ್ಲಿ ನಡೆಯುವ 2 ನೇ ಹಂತದ ಚುನಾವಣೆಯ ನಾಮಪತ್ರ ಹಿಂಪಡೆಯುವ ದಿನಾಂಕ ಏಪ್ರಿಲ್‌ 22 ಆಗಿತ್ತು. ಆದರೆ, ಈಶ್ವರಪ್ಪ ನಾಮಪತ್ರ ಹಿಂಪಡೆಯದ ಹಿನ್ನೆಲೆ ಪಕ್ಷದಿಂದ ಹೊರ ಹಾಕಲಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ

ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…

6 hours ago

ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…

6 hours ago

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…

6 hours ago

ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ

ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ  ಮೂರು ದಿನಗಳ…

7 hours ago

ಸುಳ್ಯದಲ್ಲಿ ಜೇನು ಚಾಕಲೇಟ್ ಬಿಡುಗಡೆ | ಜೇನಿನಿಂದಲೇ ಚಾಕಲೇಟ್ ಉತ್ತಮ ಬೆಳವಣಿಗೆ – ಶೋಭಾ ಕರಂದ್ಲಾಜೆ

ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…

7 hours ago

ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ

24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

13 hours ago