Advertisement
MIRROR FOCUS

ಹಠ ಬಿಡದ ಕೆ ಎಸ್‌ ಈಶ್ವರಪ್ಪ | ಬಂಡಾಯವೆದ್ದ ಈಶ್ವರಪ್ಪ ಅವರನ್ನು ಉಚ್ಚಾಟಿಸಿದ ಬಿಜೆಪಿ |

Share

ಶಿವಮೊಗ್ಗದಲ್ಲಿ (Shivamogga) ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಈಶ್ವರಪ್ಪ ಅವರನ್ನು ಬಿಜೆಪಿಯು (BJP) ಪಕ್ಷದಿಂದ ಉಚ್ಚಾಟನೆ ಮಾಡಿದೆ.

K S ಈಶ್ವರಪ್ಪ(K S Eshwarappa) ಮತ್ತು ಯಡಿಯೂರಪ್ಪ(B S Yadyurappa)ನವರ ನಡುವೆ ಭಿನ್ನಮತ, ಕೋಪತಾಪ ಇಂದು ನಿನ್ನೆಯದಲ್ಲ. ಇಬ್ಬರು ನಾಯಕರು ತಮ್ಮ ರಾಜಕೀಯ ವೃತ್ತಿ ಜೀವನದಲ್ಲಿ ಅದೆಷ್ಟೋ ಬಾರಿ ಮುನುಸಿಕೊಂಡಿದ್ದುಂಟು, ಒಂದಾಗಿದ್ದುಂಟು. ಯಾಕೆಂದರೆ, ಇವರಿಬ್ಬರ ನಡುವೆ ಮನಸ್ತಾಪ ಎದುರಾದಾಗ ಸಂಘ ಪರಿವಾರದ(RSS) ನಾಯಕರು ಮಧ್ಯಸ್ಥಿಕೆ ವಹಿಸಿ ಸರಿ ಮಾಡಿದ ಉದಾಹರಣೆಗಳೂ ಇವೆ. ಮಕ್ಕಳು ತನ್ನ ತಾಯಿಯ ಮೇಲೆ ಸಿಟ್ಟಾದರೆ ಅದೆಷ್ಟು ದಿನ? ಹಾಗೆಯೇ ಈಶ್ವರಪ್ಪನವರು ಇಂದಲ್ಲಾ ನಾಳೆ ಕೋಪ ಬಿಟ್ಟು ತಮ್ಮ ನಾಮಪತ್ರವನ್ನು ಹಿಂದಕ್ಕೆ ಪಡೆಯಬಹುದು ಎಂದೇ ವ್ಯಾಖ್ಯಾನಿಸಲಾಗಿತ್ತು. ಆದರೆ ಹಾಗಾಗಲಿಲ್ಲ.

ಪಕ್ಷದ ಸೂಚನೆಯನ್ನು ಧಿಕ್ಕರಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷಕ್ಕೆ ಮುಜುಗರ ತಂದಿದ್ದೀರಿ. ಆದ್ದರಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ನಾಮಪತ್ರ ಹಿಂದಕ್ಕೆ ಪಡೆಯುವಂತೆ ಬಿಜೆಪಿ ನಾಯಕರು ಈಶ್ವರಪ್ಪ ಅವರನ್ನು ಮನ ಒಲಿಸುವ ಪ್ರಯತ್ನ ಮಾಡಿದ್ದರು. ಆದರೆ ಈಶ್ವರಪ್ಪ ಕಣದಿಂದ ಹಿಂದಕ್ಕೆ ಸರಿಲಿಲ್ಲ. ಇಂದು ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿತ್ತು. ಇಂದು ನಾಮಪತ್ರವನ್ನು ಹಿಂದಕ್ಕೆ ಪಡೆಯದ ಕಾರಣ ಬಿಜೆಪಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ. ಮೋದಿ ಅಲ್ಲ ಬ್ರಹ್ಮ ಬಂದರೂ ಚುನಾವಣೆಯಲ್ಲಿಸ್ಪರ್ಧೆ ಮಾಡುವುದು ಖಚಿತ ಎಂದು ನಾಮಪತ್ರ ಹಿಂದೆ ಪಡೆಯದ ಈಶ್ವರಪ್ಪ.

ಕೆಎಸ್‌ ಈಶ್ವರಪ್ಪ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಹಿಂದಕ್ಕೆ ಸರಿಸುವ ನಿಟ್ಟಿನಲ್ಲಿ ಸಾಕಷ್ಟು ಸಭೆಗಳು ನಡೆದವು. ಹಿರಿಯ ಮುಖಂಡರು ಮಾತನಾಡಿದರು. ಆದರೂ, ಈಶ್ವರಪ್ಪ ಚುನಾವಣೆ ಸ್ಪರ್ಧೆ ಮಾಡುತ್ತೇನೆ ಎಂದು ಪಣತೊಟ್ಟರು. ಕರ್ನಾಟಕದಲ್ಲಿ ನಡೆಯುವ 2 ನೇ ಹಂತದ ಚುನಾವಣೆಯ ನಾಮಪತ್ರ ಹಿಂಪಡೆಯುವ ದಿನಾಂಕ ಏಪ್ರಿಲ್‌ 22 ಆಗಿತ್ತು. ಆದರೆ, ಈಶ್ವರಪ್ಪ ನಾಮಪತ್ರ ಹಿಂಪಡೆಯದ ಹಿನ್ನೆಲೆ ಪಕ್ಷದಿಂದ ಹೊರ ಹಾಕಲಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…

36 minutes ago

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…

1 hour ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…

9 hours ago

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

13 hours ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

3 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago