Advertisement
MIRROR FOCUS

ಹಠ ಬಿಡದ ಕೆ ಎಸ್‌ ಈಶ್ವರಪ್ಪ | ಬಂಡಾಯವೆದ್ದ ಈಶ್ವರಪ್ಪ ಅವರನ್ನು ಉಚ್ಚಾಟಿಸಿದ ಬಿಜೆಪಿ |

Share

ಶಿವಮೊಗ್ಗದಲ್ಲಿ (Shivamogga) ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಈಶ್ವರಪ್ಪ ಅವರನ್ನು ಬಿಜೆಪಿಯು (BJP) ಪಕ್ಷದಿಂದ ಉಚ್ಚಾಟನೆ ಮಾಡಿದೆ.

K S ಈಶ್ವರಪ್ಪ(K S Eshwarappa) ಮತ್ತು ಯಡಿಯೂರಪ್ಪ(B S Yadyurappa)ನವರ ನಡುವೆ ಭಿನ್ನಮತ, ಕೋಪತಾಪ ಇಂದು ನಿನ್ನೆಯದಲ್ಲ. ಇಬ್ಬರು ನಾಯಕರು ತಮ್ಮ ರಾಜಕೀಯ ವೃತ್ತಿ ಜೀವನದಲ್ಲಿ ಅದೆಷ್ಟೋ ಬಾರಿ ಮುನುಸಿಕೊಂಡಿದ್ದುಂಟು, ಒಂದಾಗಿದ್ದುಂಟು. ಯಾಕೆಂದರೆ, ಇವರಿಬ್ಬರ ನಡುವೆ ಮನಸ್ತಾಪ ಎದುರಾದಾಗ ಸಂಘ ಪರಿವಾರದ(RSS) ನಾಯಕರು ಮಧ್ಯಸ್ಥಿಕೆ ವಹಿಸಿ ಸರಿ ಮಾಡಿದ ಉದಾಹರಣೆಗಳೂ ಇವೆ. ಮಕ್ಕಳು ತನ್ನ ತಾಯಿಯ ಮೇಲೆ ಸಿಟ್ಟಾದರೆ ಅದೆಷ್ಟು ದಿನ? ಹಾಗೆಯೇ ಈಶ್ವರಪ್ಪನವರು ಇಂದಲ್ಲಾ ನಾಳೆ ಕೋಪ ಬಿಟ್ಟು ತಮ್ಮ ನಾಮಪತ್ರವನ್ನು ಹಿಂದಕ್ಕೆ ಪಡೆಯಬಹುದು ಎಂದೇ ವ್ಯಾಖ್ಯಾನಿಸಲಾಗಿತ್ತು. ಆದರೆ ಹಾಗಾಗಲಿಲ್ಲ.

ಪಕ್ಷದ ಸೂಚನೆಯನ್ನು ಧಿಕ್ಕರಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷಕ್ಕೆ ಮುಜುಗರ ತಂದಿದ್ದೀರಿ. ಆದ್ದರಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ನಾಮಪತ್ರ ಹಿಂದಕ್ಕೆ ಪಡೆಯುವಂತೆ ಬಿಜೆಪಿ ನಾಯಕರು ಈಶ್ವರಪ್ಪ ಅವರನ್ನು ಮನ ಒಲಿಸುವ ಪ್ರಯತ್ನ ಮಾಡಿದ್ದರು. ಆದರೆ ಈಶ್ವರಪ್ಪ ಕಣದಿಂದ ಹಿಂದಕ್ಕೆ ಸರಿಲಿಲ್ಲ. ಇಂದು ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿತ್ತು. ಇಂದು ನಾಮಪತ್ರವನ್ನು ಹಿಂದಕ್ಕೆ ಪಡೆಯದ ಕಾರಣ ಬಿಜೆಪಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ. ಮೋದಿ ಅಲ್ಲ ಬ್ರಹ್ಮ ಬಂದರೂ ಚುನಾವಣೆಯಲ್ಲಿಸ್ಪರ್ಧೆ ಮಾಡುವುದು ಖಚಿತ ಎಂದು ನಾಮಪತ್ರ ಹಿಂದೆ ಪಡೆಯದ ಈಶ್ವರಪ್ಪ.

ಕೆಎಸ್‌ ಈಶ್ವರಪ್ಪ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಹಿಂದಕ್ಕೆ ಸರಿಸುವ ನಿಟ್ಟಿನಲ್ಲಿ ಸಾಕಷ್ಟು ಸಭೆಗಳು ನಡೆದವು. ಹಿರಿಯ ಮುಖಂಡರು ಮಾತನಾಡಿದರು. ಆದರೂ, ಈಶ್ವರಪ್ಪ ಚುನಾವಣೆ ಸ್ಪರ್ಧೆ ಮಾಡುತ್ತೇನೆ ಎಂದು ಪಣತೊಟ್ಟರು. ಕರ್ನಾಟಕದಲ್ಲಿ ನಡೆಯುವ 2 ನೇ ಹಂತದ ಚುನಾವಣೆಯ ನಾಮಪತ್ರ ಹಿಂಪಡೆಯುವ ದಿನಾಂಕ ಏಪ್ರಿಲ್‌ 22 ಆಗಿತ್ತು. ಆದರೆ, ಈಶ್ವರಪ್ಪ ನಾಮಪತ್ರ ಹಿಂಪಡೆಯದ ಹಿನ್ನೆಲೆ ಪಕ್ಷದಿಂದ ಹೊರ ಹಾಕಲಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

42 minutes ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 hour ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 hour ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

11 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

17 hours ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

18 hours ago