ಟವರ್‌ ಏರಿ ಆತ್ಮಹತ್ಯೆಗೆ ಯತ್ನ | ಜನರ ಬುದ್ದಿವಾದಕ್ಕೆ ಶರಣಾಗಿ ಕೆಳಗಿಳಿಯುವ ಯತ್ನ | ಕೊನೆಗೂ ಆಯತಪ್ಪಿ ಬಿದ್ದು ಮೃತಪಟ್ಟ…! |

October 13, 2022
2:14 PM

ಬೆಳಗಾವಿ  ಜಿಲ್ಲೆಯ ಮಂಗವಾತಿ ಗ್ರಾಮದಲ್ಲಿ ಸಾಲಭಾದೆ ತಾಳಲಾರದೇ ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ ಸಂದರ್ಭ ಜನರು ಬುದ್ದಿವಾದ ಹೇಳಿದ್ದರು, ಇದಕ್ಕೆ ಗೌರವಿಸಿ ಆತ್ಮಹತ್ಯೆ ನಿರ್ಧಾರ ಕೈಬಿಟ್ಟು ಟವರಿನಿಂದ ಇಳಿಯುವಾಗ ಆಯತಪ್ಪಿ ಕೆಳಗೆ ಬಿದ್ದು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ.

ಮಂಗವಾತಿ ಗ್ರಾಮದ ನಿವಾಸಿ ಸಂಜಯ್ ಕಲಗೌಡ ಪಾಟೀಲ್(35) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಖಾಸಗಿ ಹಾಗೂ ಬ್ಯಾಂಕ್ ಗಳು ಸೇರಿದಂತೆ ಹಲವಾರು ಸಾಲ ಮಾಡಿಕೊಂಡಿದ್ದು, ಸಾಲಗಾರರ ಕಾಟ ತಾಳಲಾರದೇ ಆತ್ಮಹತ್ಯೆಗೆ ಶರಣಾಗಲು ಮೊಬೈಲ್ ಟವರ್ ಏರಿದ್ದಾನೆ. ಈ ವೇಳೆಗೆ ಸ್ಥಳೀಯರು ಬುದ್ದಿ ಮಾತು ಹೇಳಿದ್ದಾರೆ. ಸಾಯುವುದು  ಪರಿಹಾರವಲ್ಲ ಎಂದು ಬುದ್ದಿವಾದ ಹೇಳಿದ್ದಾರೆ. ಹೀಗಾಗಿ ಈ ಮಾತುಗಳಿಂದ ಜ್ಞಾನೋದಯವಾಗಿ  ಸಾಯುವ ನಿರ್ಧಾರದಿಂದ ಹೊರಬಂದ. ಹೀಗಾಗಿ ಟವರ್​ನಿಂದ ಕೆಳಗೆ ಇಳಿಯುವಾಗ ಆಯತಪ್ಪಿ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಗ್ರಾಮಸ್ಥರು ಆಸ್ಪತ್ರೆಗೆ ಕರೆದೊಯ್ದರೂ, ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror