ಟವರ್‌ ಏರಿ ಆತ್ಮಹತ್ಯೆಗೆ ಯತ್ನ | ಜನರ ಬುದ್ದಿವಾದಕ್ಕೆ ಶರಣಾಗಿ ಕೆಳಗಿಳಿಯುವ ಯತ್ನ | ಕೊನೆಗೂ ಆಯತಪ್ಪಿ ಬಿದ್ದು ಮೃತಪಟ್ಟ…! |

October 13, 2022
2:14 PM
Advertisement

ಬೆಳಗಾವಿ  ಜಿಲ್ಲೆಯ ಮಂಗವಾತಿ ಗ್ರಾಮದಲ್ಲಿ ಸಾಲಭಾದೆ ತಾಳಲಾರದೇ ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ ಸಂದರ್ಭ ಜನರು ಬುದ್ದಿವಾದ ಹೇಳಿದ್ದರು, ಇದಕ್ಕೆ ಗೌರವಿಸಿ ಆತ್ಮಹತ್ಯೆ ನಿರ್ಧಾರ ಕೈಬಿಟ್ಟು ಟವರಿನಿಂದ ಇಳಿಯುವಾಗ ಆಯತಪ್ಪಿ ಕೆಳಗೆ ಬಿದ್ದು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ.

Advertisement

ಮಂಗವಾತಿ ಗ್ರಾಮದ ನಿವಾಸಿ ಸಂಜಯ್ ಕಲಗೌಡ ಪಾಟೀಲ್(35) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಖಾಸಗಿ ಹಾಗೂ ಬ್ಯಾಂಕ್ ಗಳು ಸೇರಿದಂತೆ ಹಲವಾರು ಸಾಲ ಮಾಡಿಕೊಂಡಿದ್ದು, ಸಾಲಗಾರರ ಕಾಟ ತಾಳಲಾರದೇ ಆತ್ಮಹತ್ಯೆಗೆ ಶರಣಾಗಲು ಮೊಬೈಲ್ ಟವರ್ ಏರಿದ್ದಾನೆ. ಈ ವೇಳೆಗೆ ಸ್ಥಳೀಯರು ಬುದ್ದಿ ಮಾತು ಹೇಳಿದ್ದಾರೆ. ಸಾಯುವುದು  ಪರಿಹಾರವಲ್ಲ ಎಂದು ಬುದ್ದಿವಾದ ಹೇಳಿದ್ದಾರೆ. ಹೀಗಾಗಿ ಈ ಮಾತುಗಳಿಂದ ಜ್ಞಾನೋದಯವಾಗಿ  ಸಾಯುವ ನಿರ್ಧಾರದಿಂದ ಹೊರಬಂದ. ಹೀಗಾಗಿ ಟವರ್​ನಿಂದ ಕೆಳಗೆ ಇಳಿಯುವಾಗ ಆಯತಪ್ಪಿ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಗ್ರಾಮಸ್ಥರು ಆಸ್ಪತ್ರೆಗೆ ಕರೆದೊಯ್ದರೂ, ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದೇಶಕ್ಕೆ ಒಂದೇ ಗ್ಯಾರಂಟಿ ಅದು ಮೋದಿ ಗ್ಯಾರಂಟಿ : #ModiKiGuarantee ಫುಲ್‌ ಟ್ರೆಂಡ್‌ : ಡಿ.6 ರಂದು INDIA ಮೈತ್ರಿಕೂಟದ ಸಭೆಗೆ ಕಾಂಗ್ರೆಸ್ ಕರೆ
December 3, 2023
1:16 PM
by: The Rural Mirror ಸುದ್ದಿಜಾಲ
ಭೋಪಾಲ್‌ ಅನಿಲ ದುರಂತ : 39 ವರ್ಷ ಕಳೆದರು ಇನ್ನೂ ಮಾಸಿಲ್ಲ ನೆನಪು : ಚುನಾವಣಾ ಫಲಿತಾಂಶದ ಹೊತ್ತಿನಲ್ಲಿ ಸಿಎಂ ಶ್ರದ್ಧಾಂಜಲಿ ಸಲ್ಲಿಕೆ
December 3, 2023
12:36 PM
by: The Rural Mirror ಸುದ್ದಿಜಾಲ
ಅಗೋಚರ ಶಕ್ತಿ ಇದೆಯಾ..? ಅಥವಾ ಇಲ್ಲವಾ..? ಹಾಗಾದರೆ ಆ ಮಗುವನ್ನು ಕಾಪಾಡಿದ್ದು ಏನು..? ಸಮಯ ಪ್ರಜ್ಞೆಯಾ..?
December 3, 2023
12:20 PM
by: The Rural Mirror ಸುದ್ದಿಜಾಲ
ಸುನಾಮಿ ಭೀತಿಗೆ ನಲುಗಿದ್ದ ಫಿಲಿಪಿನ್ಸ್‌ನಲ್ಲಿ ಭಯೋತ್ಪಾದಕರ ದಾಳಿ : ಕ್ರೈಸ್ತರ ಸಾಮೂಹಿಕ ಪ್ರಾರ್ಥನೆ ವೇಳೆ ಘಟನೆ
December 3, 2023
12:07 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror