ಬೆಳಗಾವಿ ಜಿಲ್ಲೆಯ ಮಂಗವಾತಿ ಗ್ರಾಮದಲ್ಲಿ ಸಾಲಭಾದೆ ತಾಳಲಾರದೇ ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ ಸಂದರ್ಭ ಜನರು ಬುದ್ದಿವಾದ ಹೇಳಿದ್ದರು, ಇದಕ್ಕೆ ಗೌರವಿಸಿ ಆತ್ಮಹತ್ಯೆ ನಿರ್ಧಾರ ಕೈಬಿಟ್ಟು ಟವರಿನಿಂದ ಇಳಿಯುವಾಗ ಆಯತಪ್ಪಿ ಕೆಳಗೆ ಬಿದ್ದು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ.
ಮಂಗವಾತಿ ಗ್ರಾಮದ ನಿವಾಸಿ ಸಂಜಯ್ ಕಲಗೌಡ ಪಾಟೀಲ್(35) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಖಾಸಗಿ ಹಾಗೂ ಬ್ಯಾಂಕ್ ಗಳು ಸೇರಿದಂತೆ ಹಲವಾರು ಸಾಲ ಮಾಡಿಕೊಂಡಿದ್ದು, ಸಾಲಗಾರರ ಕಾಟ ತಾಳಲಾರದೇ ಆತ್ಮಹತ್ಯೆಗೆ ಶರಣಾಗಲು ಮೊಬೈಲ್ ಟವರ್ ಏರಿದ್ದಾನೆ. ಈ ವೇಳೆಗೆ ಸ್ಥಳೀಯರು ಬುದ್ದಿ ಮಾತು ಹೇಳಿದ್ದಾರೆ. ಸಾಯುವುದು ಪರಿಹಾರವಲ್ಲ ಎಂದು ಬುದ್ದಿವಾದ ಹೇಳಿದ್ದಾರೆ. ಹೀಗಾಗಿ ಈ ಮಾತುಗಳಿಂದ ಜ್ಞಾನೋದಯವಾಗಿ ಸಾಯುವ ನಿರ್ಧಾರದಿಂದ ಹೊರಬಂದ. ಹೀಗಾಗಿ ಟವರ್ನಿಂದ ಕೆಳಗೆ ಇಳಿಯುವಾಗ ಆಯತಪ್ಪಿ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಗ್ರಾಮಸ್ಥರು ಆಸ್ಪತ್ರೆಗೆ ಕರೆದೊಯ್ದರೂ, ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…