ಬೆಳಗಾವಿ ಜಿಲ್ಲೆಯ ಮಂಗವಾತಿ ಗ್ರಾಮದಲ್ಲಿ ಸಾಲಭಾದೆ ತಾಳಲಾರದೇ ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ ಸಂದರ್ಭ ಜನರು ಬುದ್ದಿವಾದ ಹೇಳಿದ್ದರು, ಇದಕ್ಕೆ ಗೌರವಿಸಿ ಆತ್ಮಹತ್ಯೆ ನಿರ್ಧಾರ ಕೈಬಿಟ್ಟು ಟವರಿನಿಂದ ಇಳಿಯುವಾಗ ಆಯತಪ್ಪಿ ಕೆಳಗೆ ಬಿದ್ದು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ.
ಮಂಗವಾತಿ ಗ್ರಾಮದ ನಿವಾಸಿ ಸಂಜಯ್ ಕಲಗೌಡ ಪಾಟೀಲ್(35) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಖಾಸಗಿ ಹಾಗೂ ಬ್ಯಾಂಕ್ ಗಳು ಸೇರಿದಂತೆ ಹಲವಾರು ಸಾಲ ಮಾಡಿಕೊಂಡಿದ್ದು, ಸಾಲಗಾರರ ಕಾಟ ತಾಳಲಾರದೇ ಆತ್ಮಹತ್ಯೆಗೆ ಶರಣಾಗಲು ಮೊಬೈಲ್ ಟವರ್ ಏರಿದ್ದಾನೆ. ಈ ವೇಳೆಗೆ ಸ್ಥಳೀಯರು ಬುದ್ದಿ ಮಾತು ಹೇಳಿದ್ದಾರೆ. ಸಾಯುವುದು ಪರಿಹಾರವಲ್ಲ ಎಂದು ಬುದ್ದಿವಾದ ಹೇಳಿದ್ದಾರೆ. ಹೀಗಾಗಿ ಈ ಮಾತುಗಳಿಂದ ಜ್ಞಾನೋದಯವಾಗಿ ಸಾಯುವ ನಿರ್ಧಾರದಿಂದ ಹೊರಬಂದ. ಹೀಗಾಗಿ ಟವರ್ನಿಂದ ಕೆಳಗೆ ಇಳಿಯುವಾಗ ಆಯತಪ್ಪಿ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಗ್ರಾಮಸ್ಥರು ಆಸ್ಪತ್ರೆಗೆ ಕರೆದೊಯ್ದರೂ, ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…