Advertisement
ಸುದ್ದಿಗಳು

ಟವರ್‌ ಏರಿ ಆತ್ಮಹತ್ಯೆಗೆ ಯತ್ನ | ಜನರ ಬುದ್ದಿವಾದಕ್ಕೆ ಶರಣಾಗಿ ಕೆಳಗಿಳಿಯುವ ಯತ್ನ | ಕೊನೆಗೂ ಆಯತಪ್ಪಿ ಬಿದ್ದು ಮೃತಪಟ್ಟ…! |

Share

ಬೆಳಗಾವಿ  ಜಿಲ್ಲೆಯ ಮಂಗವಾತಿ ಗ್ರಾಮದಲ್ಲಿ ಸಾಲಭಾದೆ ತಾಳಲಾರದೇ ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ ಸಂದರ್ಭ ಜನರು ಬುದ್ದಿವಾದ ಹೇಳಿದ್ದರು, ಇದಕ್ಕೆ ಗೌರವಿಸಿ ಆತ್ಮಹತ್ಯೆ ನಿರ್ಧಾರ ಕೈಬಿಟ್ಟು ಟವರಿನಿಂದ ಇಳಿಯುವಾಗ ಆಯತಪ್ಪಿ ಕೆಳಗೆ ಬಿದ್ದು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ.

Advertisement

ಮಂಗವಾತಿ ಗ್ರಾಮದ ನಿವಾಸಿ ಸಂಜಯ್ ಕಲಗೌಡ ಪಾಟೀಲ್(35) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಖಾಸಗಿ ಹಾಗೂ ಬ್ಯಾಂಕ್ ಗಳು ಸೇರಿದಂತೆ ಹಲವಾರು ಸಾಲ ಮಾಡಿಕೊಂಡಿದ್ದು, ಸಾಲಗಾರರ ಕಾಟ ತಾಳಲಾರದೇ ಆತ್ಮಹತ್ಯೆಗೆ ಶರಣಾಗಲು ಮೊಬೈಲ್ ಟವರ್ ಏರಿದ್ದಾನೆ. ಈ ವೇಳೆಗೆ ಸ್ಥಳೀಯರು ಬುದ್ದಿ ಮಾತು ಹೇಳಿದ್ದಾರೆ. ಸಾಯುವುದು  ಪರಿಹಾರವಲ್ಲ ಎಂದು ಬುದ್ದಿವಾದ ಹೇಳಿದ್ದಾರೆ. ಹೀಗಾಗಿ ಈ ಮಾತುಗಳಿಂದ ಜ್ಞಾನೋದಯವಾಗಿ  ಸಾಯುವ ನಿರ್ಧಾರದಿಂದ ಹೊರಬಂದ. ಹೀಗಾಗಿ ಟವರ್​ನಿಂದ ಕೆಳಗೆ ಇಳಿಯುವಾಗ ಆಯತಪ್ಪಿ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಗ್ರಾಮಸ್ಥರು ಆಸ್ಪತ್ರೆಗೆ ಕರೆದೊಯ್ದರೂ, ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

31 minutes ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

35 minutes ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

42 minutes ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

45 minutes ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

10 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

24 hours ago