ಬೆಳಗಾವಿ ಜಿಲ್ಲೆಯ ಮಂಗವಾತಿ ಗ್ರಾಮದಲ್ಲಿ ಸಾಲಭಾದೆ ತಾಳಲಾರದೇ ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ ಸಂದರ್ಭ ಜನರು ಬುದ್ದಿವಾದ ಹೇಳಿದ್ದರು, ಇದಕ್ಕೆ ಗೌರವಿಸಿ ಆತ್ಮಹತ್ಯೆ ನಿರ್ಧಾರ ಕೈಬಿಟ್ಟು ಟವರಿನಿಂದ ಇಳಿಯುವಾಗ ಆಯತಪ್ಪಿ ಕೆಳಗೆ ಬಿದ್ದು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ.
ಮಂಗವಾತಿ ಗ್ರಾಮದ ನಿವಾಸಿ ಸಂಜಯ್ ಕಲಗೌಡ ಪಾಟೀಲ್(35) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಖಾಸಗಿ ಹಾಗೂ ಬ್ಯಾಂಕ್ ಗಳು ಸೇರಿದಂತೆ ಹಲವಾರು ಸಾಲ ಮಾಡಿಕೊಂಡಿದ್ದು, ಸಾಲಗಾರರ ಕಾಟ ತಾಳಲಾರದೇ ಆತ್ಮಹತ್ಯೆಗೆ ಶರಣಾಗಲು ಮೊಬೈಲ್ ಟವರ್ ಏರಿದ್ದಾನೆ. ಈ ವೇಳೆಗೆ ಸ್ಥಳೀಯರು ಬುದ್ದಿ ಮಾತು ಹೇಳಿದ್ದಾರೆ. ಸಾಯುವುದು ಪರಿಹಾರವಲ್ಲ ಎಂದು ಬುದ್ದಿವಾದ ಹೇಳಿದ್ದಾರೆ. ಹೀಗಾಗಿ ಈ ಮಾತುಗಳಿಂದ ಜ್ಞಾನೋದಯವಾಗಿ ಸಾಯುವ ನಿರ್ಧಾರದಿಂದ ಹೊರಬಂದ. ಹೀಗಾಗಿ ಟವರ್ನಿಂದ ಕೆಳಗೆ ಇಳಿಯುವಾಗ ಆಯತಪ್ಪಿ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಗ್ರಾಮಸ್ಥರು ಆಸ್ಪತ್ರೆಗೆ ಕರೆದೊಯ್ದರೂ, ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…