ಬೆಳಗಾವಿ ಜಿಲ್ಲೆಯ ಮಂಗವಾತಿ ಗ್ರಾಮದಲ್ಲಿ ಸಾಲಭಾದೆ ತಾಳಲಾರದೇ ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ ಸಂದರ್ಭ ಜನರು ಬುದ್ದಿವಾದ ಹೇಳಿದ್ದರು, ಇದಕ್ಕೆ ಗೌರವಿಸಿ ಆತ್ಮಹತ್ಯೆ ನಿರ್ಧಾರ ಕೈಬಿಟ್ಟು ಟವರಿನಿಂದ ಇಳಿಯುವಾಗ ಆಯತಪ್ಪಿ ಕೆಳಗೆ ಬಿದ್ದು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ.
ಮಂಗವಾತಿ ಗ್ರಾಮದ ನಿವಾಸಿ ಸಂಜಯ್ ಕಲಗೌಡ ಪಾಟೀಲ್(35) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಖಾಸಗಿ ಹಾಗೂ ಬ್ಯಾಂಕ್ ಗಳು ಸೇರಿದಂತೆ ಹಲವಾರು ಸಾಲ ಮಾಡಿಕೊಂಡಿದ್ದು, ಸಾಲಗಾರರ ಕಾಟ ತಾಳಲಾರದೇ ಆತ್ಮಹತ್ಯೆಗೆ ಶರಣಾಗಲು ಮೊಬೈಲ್ ಟವರ್ ಏರಿದ್ದಾನೆ. ಈ ವೇಳೆಗೆ ಸ್ಥಳೀಯರು ಬುದ್ದಿ ಮಾತು ಹೇಳಿದ್ದಾರೆ. ಸಾಯುವುದು ಪರಿಹಾರವಲ್ಲ ಎಂದು ಬುದ್ದಿವಾದ ಹೇಳಿದ್ದಾರೆ. ಹೀಗಾಗಿ ಈ ಮಾತುಗಳಿಂದ ಜ್ಞಾನೋದಯವಾಗಿ ಸಾಯುವ ನಿರ್ಧಾರದಿಂದ ಹೊರಬಂದ. ಹೀಗಾಗಿ ಟವರ್ನಿಂದ ಕೆಳಗೆ ಇಳಿಯುವಾಗ ಆಯತಪ್ಪಿ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಗ್ರಾಮಸ್ಥರು ಆಸ್ಪತ್ರೆಗೆ ಕರೆದೊಯ್ದರೂ, ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…