Opinion

#PesticidesEffect | ಅರಣ್ಯಾಧಿಕಾರಿ ಯೋಗೇಶ್ ನಾಯ್ಕ್ ಬಲಿ ಪಡೆದ ಕಳೆನಾಶಕ ಅಂತಿಂಥ ವಿಷವಲ್ಲ| ರೈತರೇ ಕಳೆನಾಶಕ ಬಳಕೆ ಕಡಿಮೆ ಮಾಡೋಣ… |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಬಾಡ ಗ್ರಾಮದ ಉಪ ವಲಯ ಅರಣ್ಯಾಧಿಕಾರಿ ಯೋಗೇಶನಾಯ್ಕ ಅವರನ್ನು ಬಲಿ ಪಡೆದ Paraquat Dichloride ಕಳೆನಾಶಕ #PesticidesEffect ಅದೆಷ್ಟು ಘೋರ ವಿಷ #poision ಗೊತ್ತ? ಇದುವರೆಗೂ ಈ ವಿಷಕ್ಕೆ ಔಷಧಿಯನ್ನೇ ಕಂಡು ಹಿಡಿಯಲಾಗಿಲ್ಲ!.  ಈ ಬಗ್ಗೆ ನಾಗರಾಜ್ ಬೆಳ್ಳೂರು ಅವರು ಸವಿವರವಾಗಿ ಬರೆದಿದ್ದಾರೆ. ಹಾಗೆ ಇಂತಹ ಔಷಧಿಗಳನ್ನು ಬಳಸುತ್ತಿರುವ ಕೃಷಿಕರು, ರೈತರು ದಯವಿಟ್ಟು ಈ ಬಗ್ಗೆ ಗಮನಹರಿಸಿ.

Advertisement

Paraquat Dichloride ಎಂಬ ರಾಸಾಯನಿಕ ಸಂಯೋಜನೆಯಿಂದ ಕೂಡಿದ ಈ ಕಳೆನಾಶಕವನ್ನು ಈಗಾಗಲೇ ಅನೇಕ ದೇಶಗಳು ನಿಷೇಧಿಸಿವೆ. Gramoxone, Firestorm, Helmquat, Parazone Uniquat All clear Milquat Sabaa Kapiq ಇತ್ಯಾದಿ ಬ್ರಾಂಡ್ ಹೆಸರಿನಿಂದ ಹತ್ತಾರು ಕಂಪನಿಗಳು ಈ ವಿಷವನ್ನು ನಮ್ಮ ದೇಶದಲ್ಲಿ ಉತ್ಪಾದಿಸುತ್ತಿವೆ.

ಇದೊಂದು ಸಂಪರ್ಕ ಕಳೆನಾಶಕ (Contact Herbicide) ಅಂದರೆ, ಕಳೆನಾಶಕ ಸಿಂಪಡಿಸಿದ ಸಸ್ಯದ ಭಾಗಗಳಿಗೆ ಮಾತ್ರ ಪರಿಣಾಮ ಬೀರುತ್ತದೆ, ಬೇರೆ ಭಾಗಗಳಿಗೆ ಪರಿಣಾಮ ಬೀರುವುದಿಲ್ಲ,ಆದರೆ ಮನುಷ್ಯನ ದೇಹ ಹೊಕ್ಕರೆ ಎಲ್ಲಾ ಅಂಗಗಳಿಗೂ ವ್ಯಾಪಿಸಿ ಸಾವು ತರುತ್ತದೆ. ಬಹಳ ಆತಂಕದ ಸಂಗತಿ ಎಂದರೆ ಈ ಘನಘೋರ ವಿಷಕ್ಕೆ ಇದುವರೆಗೂ ಪ್ರತ್ಯೌಷಧ(Antidote) ಲಭ್ಯವಿಲ್ಲ! ಕೇವಲ ಒಂದೆರಡು ಮಿಲಿ ಕಳೆನಾಶಕ ದೇಹ ಸೇರಿದರೂ ಸಾವು ಖಚಿತ.

 

ಶುಂಠಿ ಬೆಳೆಯಿಂದ ಹಿಡಿದು ಅನೇಕ ಬೆಳೆಗಳಲ್ಲಿ ಕಳೆಗಳನ್ನು ಕೊಲ್ಲಲು ವ್ಯಾಪಕವಾಗಿ ಇದನ್ನು ಬಳಸುತ್ತಾರೆ, ಒಂದೆರಡು ಹನಿ ವಿಷ ದೇಹ ಸೇರಿದರೂ ಬಹು ಅಂಗಾಂಗಗಳು ವೈಫಲ್ಯ ಉಂಟಾಗಿ ಸಾವು ಸಂಭವಿಸಬಹುದು, ಪಾರ್ಕಿನ್ಸನ್ ನಂತಹ ಕಾಯಿಲೆಗಳಿಗೂ ಆಹ್ವಾನ ನೀಡಬಹುದು.ರೈತರು ಇದನ್ನು ಉಪಯೋಗಿಸುವಾಗ ಸುರಕ್ಷಿತ ವಿಧಾನ ಅನುಸರಿಸಿ ಬಳಸಬೇಕು.ಸಿಂಪಡಿಸುವ ಸಮಯದಲ್ಲಿ ಯಾವುದೇ ಕಾರಣಕ್ಕೂ ಆಹಾರ ನೀರನ್ನು ಸೇವಿಸಬಾರದು. ದೇಹಗಳಲ್ಲಿ ಗಾಯಗಳಿದ್ದರೆ ಕಳೆನಾಶಕದ ಸಂಪರ್ಕಕ್ಕೆ ಬರಲೇಬಾರದು. ಔಷಧಿಯೇ ಇಲ್ಲದ ಈ ವಿಷ ನಮ್ಮ ಜೀವಜಾಲದಲ್ಲಿ ಕಬಂಧ ಬಾಹುಗಳನ್ನು ಚಾಚುತ್ತಲೇ ಇದೆ.

ಬರಹ :
ನಾಗರಾಜ್ ಬೆಳ್ಳೂರು
Nisarga Conservation Trust
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

2 hours ago

ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್

ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…

2 hours ago

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

9 hours ago

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…

16 hours ago

ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ

ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ…

16 hours ago

ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ

ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ…

16 hours ago