ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಬಾಡ ಗ್ರಾಮದ ಉಪ ವಲಯ ಅರಣ್ಯಾಧಿಕಾರಿ ಯೋಗೇಶನಾಯ್ಕ ಅವರನ್ನು ಬಲಿ ಪಡೆದ Paraquat Dichloride ಕಳೆನಾಶಕ #PesticidesEffect ಅದೆಷ್ಟು ಘೋರ ವಿಷ #poision ಗೊತ್ತ? ಇದುವರೆಗೂ ಈ ವಿಷಕ್ಕೆ ಔಷಧಿಯನ್ನೇ ಕಂಡು ಹಿಡಿಯಲಾಗಿಲ್ಲ!. ಈ ಬಗ್ಗೆ ನಾಗರಾಜ್ ಬೆಳ್ಳೂರು ಅವರು ಸವಿವರವಾಗಿ ಬರೆದಿದ್ದಾರೆ. ಹಾಗೆ ಇಂತಹ ಔಷಧಿಗಳನ್ನು ಬಳಸುತ್ತಿರುವ ಕೃಷಿಕರು, ರೈತರು ದಯವಿಟ್ಟು ಈ ಬಗ್ಗೆ ಗಮನಹರಿಸಿ.
Paraquat Dichloride ಎಂಬ ರಾಸಾಯನಿಕ ಸಂಯೋಜನೆಯಿಂದ ಕೂಡಿದ ಈ ಕಳೆನಾಶಕವನ್ನು ಈಗಾಗಲೇ ಅನೇಕ ದೇಶಗಳು ನಿಷೇಧಿಸಿವೆ. Gramoxone, Firestorm, Helmquat, Parazone Uniquat All clear Milquat Sabaa Kapiq ಇತ್ಯಾದಿ ಬ್ರಾಂಡ್ ಹೆಸರಿನಿಂದ ಹತ್ತಾರು ಕಂಪನಿಗಳು ಈ ವಿಷವನ್ನು ನಮ್ಮ ದೇಶದಲ್ಲಿ ಉತ್ಪಾದಿಸುತ್ತಿವೆ.
ಇದೊಂದು ಸಂಪರ್ಕ ಕಳೆನಾಶಕ (Contact Herbicide) ಅಂದರೆ, ಕಳೆನಾಶಕ ಸಿಂಪಡಿಸಿದ ಸಸ್ಯದ ಭಾಗಗಳಿಗೆ ಮಾತ್ರ ಪರಿಣಾಮ ಬೀರುತ್ತದೆ, ಬೇರೆ ಭಾಗಗಳಿಗೆ ಪರಿಣಾಮ ಬೀರುವುದಿಲ್ಲ,ಆದರೆ ಮನುಷ್ಯನ ದೇಹ ಹೊಕ್ಕರೆ ಎಲ್ಲಾ ಅಂಗಗಳಿಗೂ ವ್ಯಾಪಿಸಿ ಸಾವು ತರುತ್ತದೆ. ಬಹಳ ಆತಂಕದ ಸಂಗತಿ ಎಂದರೆ ಈ ಘನಘೋರ ವಿಷಕ್ಕೆ ಇದುವರೆಗೂ ಪ್ರತ್ಯೌಷಧ(Antidote) ಲಭ್ಯವಿಲ್ಲ! ಕೇವಲ ಒಂದೆರಡು ಮಿಲಿ ಕಳೆನಾಶಕ ದೇಹ ಸೇರಿದರೂ ಸಾವು ಖಚಿತ.
ಶುಂಠಿ ಬೆಳೆಯಿಂದ ಹಿಡಿದು ಅನೇಕ ಬೆಳೆಗಳಲ್ಲಿ ಕಳೆಗಳನ್ನು ಕೊಲ್ಲಲು ವ್ಯಾಪಕವಾಗಿ ಇದನ್ನು ಬಳಸುತ್ತಾರೆ, ಒಂದೆರಡು ಹನಿ ವಿಷ ದೇಹ ಸೇರಿದರೂ ಬಹು ಅಂಗಾಂಗಗಳು ವೈಫಲ್ಯ ಉಂಟಾಗಿ ಸಾವು ಸಂಭವಿಸಬಹುದು, ಪಾರ್ಕಿನ್ಸನ್ ನಂತಹ ಕಾಯಿಲೆಗಳಿಗೂ ಆಹ್ವಾನ ನೀಡಬಹುದು.ರೈತರು ಇದನ್ನು ಉಪಯೋಗಿಸುವಾಗ ಸುರಕ್ಷಿತ ವಿಧಾನ ಅನುಸರಿಸಿ ಬಳಸಬೇಕು.ಸಿಂಪಡಿಸುವ ಸಮಯದಲ್ಲಿ ಯಾವುದೇ ಕಾರಣಕ್ಕೂ ಆಹಾರ ನೀರನ್ನು ಸೇವಿಸಬಾರದು. ದೇಹಗಳಲ್ಲಿ ಗಾಯಗಳಿದ್ದರೆ ಕಳೆನಾಶಕದ ಸಂಪರ್ಕಕ್ಕೆ ಬರಲೇಬಾರದು. ಔಷಧಿಯೇ ಇಲ್ಲದ ಈ ವಿಷ ನಮ್ಮ ಜೀವಜಾಲದಲ್ಲಿ ಕಬಂಧ ಬಾಹುಗಳನ್ನು ಚಾಚುತ್ತಲೇ ಇದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…