Advertisement
Opinion

#PesticidesEffect | ಅರಣ್ಯಾಧಿಕಾರಿ ಯೋಗೇಶ್ ನಾಯ್ಕ್ ಬಲಿ ಪಡೆದ ಕಳೆನಾಶಕ ಅಂತಿಂಥ ವಿಷವಲ್ಲ| ರೈತರೇ ಕಳೆನಾಶಕ ಬಳಕೆ ಕಡಿಮೆ ಮಾಡೋಣ… |

Share

ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಬಾಡ ಗ್ರಾಮದ ಉಪ ವಲಯ ಅರಣ್ಯಾಧಿಕಾರಿ ಯೋಗೇಶನಾಯ್ಕ ಅವರನ್ನು ಬಲಿ ಪಡೆದ Paraquat Dichloride ಕಳೆನಾಶಕ #PesticidesEffect ಅದೆಷ್ಟು ಘೋರ ವಿಷ #poision ಗೊತ್ತ? ಇದುವರೆಗೂ ಈ ವಿಷಕ್ಕೆ ಔಷಧಿಯನ್ನೇ ಕಂಡು ಹಿಡಿಯಲಾಗಿಲ್ಲ!.  ಈ ಬಗ್ಗೆ ನಾಗರಾಜ್ ಬೆಳ್ಳೂರು ಅವರು ಸವಿವರವಾಗಿ ಬರೆದಿದ್ದಾರೆ. ಹಾಗೆ ಇಂತಹ ಔಷಧಿಗಳನ್ನು ಬಳಸುತ್ತಿರುವ ಕೃಷಿಕರು, ರೈತರು ದಯವಿಟ್ಟು ಈ ಬಗ್ಗೆ ಗಮನಹರಿಸಿ.

Paraquat Dichloride ಎಂಬ ರಾಸಾಯನಿಕ ಸಂಯೋಜನೆಯಿಂದ ಕೂಡಿದ ಈ ಕಳೆನಾಶಕವನ್ನು ಈಗಾಗಲೇ ಅನೇಕ ದೇಶಗಳು ನಿಷೇಧಿಸಿವೆ. Gramoxone, Firestorm, Helmquat, Parazone Uniquat All clear Milquat Sabaa Kapiq ಇತ್ಯಾದಿ ಬ್ರಾಂಡ್ ಹೆಸರಿನಿಂದ ಹತ್ತಾರು ಕಂಪನಿಗಳು ಈ ವಿಷವನ್ನು ನಮ್ಮ ದೇಶದಲ್ಲಿ ಉತ್ಪಾದಿಸುತ್ತಿವೆ.

ಇದೊಂದು ಸಂಪರ್ಕ ಕಳೆನಾಶಕ (Contact Herbicide) ಅಂದರೆ, ಕಳೆನಾಶಕ ಸಿಂಪಡಿಸಿದ ಸಸ್ಯದ ಭಾಗಗಳಿಗೆ ಮಾತ್ರ ಪರಿಣಾಮ ಬೀರುತ್ತದೆ, ಬೇರೆ ಭಾಗಗಳಿಗೆ ಪರಿಣಾಮ ಬೀರುವುದಿಲ್ಲ,ಆದರೆ ಮನುಷ್ಯನ ದೇಹ ಹೊಕ್ಕರೆ ಎಲ್ಲಾ ಅಂಗಗಳಿಗೂ ವ್ಯಾಪಿಸಿ ಸಾವು ತರುತ್ತದೆ. ಬಹಳ ಆತಂಕದ ಸಂಗತಿ ಎಂದರೆ ಈ ಘನಘೋರ ವಿಷಕ್ಕೆ ಇದುವರೆಗೂ ಪ್ರತ್ಯೌಷಧ(Antidote) ಲಭ್ಯವಿಲ್ಲ! ಕೇವಲ ಒಂದೆರಡು ಮಿಲಿ ಕಳೆನಾಶಕ ದೇಹ ಸೇರಿದರೂ ಸಾವು ಖಚಿತ.

 

ಶುಂಠಿ ಬೆಳೆಯಿಂದ ಹಿಡಿದು ಅನೇಕ ಬೆಳೆಗಳಲ್ಲಿ ಕಳೆಗಳನ್ನು ಕೊಲ್ಲಲು ವ್ಯಾಪಕವಾಗಿ ಇದನ್ನು ಬಳಸುತ್ತಾರೆ, ಒಂದೆರಡು ಹನಿ ವಿಷ ದೇಹ ಸೇರಿದರೂ ಬಹು ಅಂಗಾಂಗಗಳು ವೈಫಲ್ಯ ಉಂಟಾಗಿ ಸಾವು ಸಂಭವಿಸಬಹುದು, ಪಾರ್ಕಿನ್ಸನ್ ನಂತಹ ಕಾಯಿಲೆಗಳಿಗೂ ಆಹ್ವಾನ ನೀಡಬಹುದು.ರೈತರು ಇದನ್ನು ಉಪಯೋಗಿಸುವಾಗ ಸುರಕ್ಷಿತ ವಿಧಾನ ಅನುಸರಿಸಿ ಬಳಸಬೇಕು.ಸಿಂಪಡಿಸುವ ಸಮಯದಲ್ಲಿ ಯಾವುದೇ ಕಾರಣಕ್ಕೂ ಆಹಾರ ನೀರನ್ನು ಸೇವಿಸಬಾರದು. ದೇಹಗಳಲ್ಲಿ ಗಾಯಗಳಿದ್ದರೆ ಕಳೆನಾಶಕದ ಸಂಪರ್ಕಕ್ಕೆ ಬರಲೇಬಾರದು. ಔಷಧಿಯೇ ಇಲ್ಲದ ಈ ವಿಷ ನಮ್ಮ ಜೀವಜಾಲದಲ್ಲಿ ಕಬಂಧ ಬಾಹುಗಳನ್ನು ಚಾಚುತ್ತಲೇ ಇದೆ.

ಬರಹ :
ನಾಗರಾಜ್ ಬೆಳ್ಳೂರು
Nisarga Conservation Trust
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

3 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

5 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

14 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

14 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

14 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

19 hours ago