ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ₹ 8, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ₹ 6 ರಷ್ಟು ಕಡಿತಗೊಳಿಸಿದೆ. ಇದು ಪೆಟ್ರೋಲ್ ಬೆಲೆಯನ್ನು ಪ್ರತೀ ಲೀಟರ್ ಗೆ 9.5 ರೂ ಹಾಗೂ ಡೀಸೆಲ್ ಬೆಲೆಯನ್ನು ಪ್ರತೀ ಲೀಟರ್ ಗೆ 7 ರೂ ಗಳಷ್ಟು ಕಡಿಮೆ ಮಾಡುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಈ ವರ್ಷ, ನಾವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಅನಿಲ ಸಿಲಿಂಡರ್ ಗೆ (12 ಸಿಲಿಂಡರ್ಗಳವರೆಗೆ) 200 ರೂ.ಗಳ ಸಬ್ಸಿಡಿಯನ್ನು ನೀಡುತ್ತೇವೆ ಎಂದು ಹಣಕಾಸು ಸಚಿವರು ಘೋಷಿಸಿದರು.
ಹೆಚ್ಚಿನ ಆಮದು ಅವಲಂಬನೆಯನ್ನು ಹೊಂದಿರುವ ಪ್ಲಾಸ್ಟಿಕ್ ಉತ್ಪನ್ನಗಳ ಕಚ್ಚಾ ವಸ್ತುಗಳು ಮತ್ತು ಮಧ್ಯವರ್ತಿಗಳ ಮೇಲಿನ ಕಸ್ಟಮ್ ಸುಂಕವನ್ನು ಕಡಿತಗೊಳಿಸುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ‘ನಮ್ಮ ಆಮದು ಅವಲಂಬನೆ ಹೆಚ್ಚಿರುವ ಪ್ಲಾಸ್ಟಿಕ್ ಉತ್ಪನ್ನಗಳಿಗೆ ಕಚ್ಚಾ ವಸ್ತುಗಳು ಮತ್ತು ಮಧ್ಯವರ್ತಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸಹ ನಾವು ಕಡಿಮೆ ಮಾಡುತ್ತಿದ್ದೇವೆ. ಉಕ್ಕಿನ ಕೆಲವು ಕಚ್ಚಾ ವಸ್ತುಗಳ ಮೇಲಿನ ಆಮದು ಸುಂಕವನ್ನು ಕಡಿಮೆ ಮಾಡಲಾಗುತ್ತದೆ. ಕೆಲವು ಉಕ್ಕಿನ ಉತ್ಪನ್ನಗಳ ಮೇಲೆ ರಫ್ತು ಸುಂಕವನ್ನು ವಿಧಿಸಲಾಗುವುದು’ ಎಂದು ಅವರು ಹೇಳಿದರು.ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…