ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ₹ 8, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ₹ 6 ರಷ್ಟು ಕಡಿತಗೊಳಿಸಿದೆ. ಇದು ಪೆಟ್ರೋಲ್ ಬೆಲೆಯನ್ನು ಪ್ರತೀ ಲೀಟರ್ ಗೆ 9.5 ರೂ ಹಾಗೂ ಡೀಸೆಲ್ ಬೆಲೆಯನ್ನು ಪ್ರತೀ ಲೀಟರ್ ಗೆ 7 ರೂ ಗಳಷ್ಟು ಕಡಿಮೆ ಮಾಡುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಈ ವರ್ಷ, ನಾವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಅನಿಲ ಸಿಲಿಂಡರ್ ಗೆ (12 ಸಿಲಿಂಡರ್ಗಳವರೆಗೆ) 200 ರೂ.ಗಳ ಸಬ್ಸಿಡಿಯನ್ನು ನೀಡುತ್ತೇವೆ ಎಂದು ಹಣಕಾಸು ಸಚಿವರು ಘೋಷಿಸಿದರು.
ಹೆಚ್ಚಿನ ಆಮದು ಅವಲಂಬನೆಯನ್ನು ಹೊಂದಿರುವ ಪ್ಲಾಸ್ಟಿಕ್ ಉತ್ಪನ್ನಗಳ ಕಚ್ಚಾ ವಸ್ತುಗಳು ಮತ್ತು ಮಧ್ಯವರ್ತಿಗಳ ಮೇಲಿನ ಕಸ್ಟಮ್ ಸುಂಕವನ್ನು ಕಡಿತಗೊಳಿಸುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ‘ನಮ್ಮ ಆಮದು ಅವಲಂಬನೆ ಹೆಚ್ಚಿರುವ ಪ್ಲಾಸ್ಟಿಕ್ ಉತ್ಪನ್ನಗಳಿಗೆ ಕಚ್ಚಾ ವಸ್ತುಗಳು ಮತ್ತು ಮಧ್ಯವರ್ತಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸಹ ನಾವು ಕಡಿಮೆ ಮಾಡುತ್ತಿದ್ದೇವೆ. ಉಕ್ಕಿನ ಕೆಲವು ಕಚ್ಚಾ ವಸ್ತುಗಳ ಮೇಲಿನ ಆಮದು ಸುಂಕವನ್ನು ಕಡಿಮೆ ಮಾಡಲಾಗುತ್ತದೆ. ಕೆಲವು ಉಕ್ಕಿನ ಉತ್ಪನ್ನಗಳ ಮೇಲೆ ರಫ್ತು ಸುಂಕವನ್ನು ವಿಧಿಸಲಾಗುವುದು’ ಎಂದು ಅವರು ಹೇಳಿದರು.ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…
ಕಸ್ಟಮ್ಸ್ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…