ಸುದ್ದಿಗಳು

ಕೇರಳಕ್ಕಿಂತ ಕರ್ನಾಟಕವೇ ಬೆಸ್ಟ್ ಈಗ…! | ಕೇರಳದಲ್ಲಿ ಪೆಟ್ರೋಲ್ ಕರ್ನಾಟಕಕ್ಕಿಂತ ದುಬಾರಿ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇಂಧನ ಬೆಲೆ ಒಂದು ರೂಪಾಯಿ ಹೆಚ್ಚಾದರೂ ಏರಿಕೆ ಬಗ್ಗೆ ದೇಶಕ್ಕೆ ದೇಶವೇ ಚರ್ಚೆ ನಡೆಸುತ್ತದೆ. ಕಾರಣ ಇಷ್ಟೇ,  ಜಗತ್ತಿನಾದ್ಯಂತ ಅದರ ಮೇಲಿರುವ ಅವಲಂಬನೆ ಹೆಚ್ಚು. ತೈಲ ಬೆಲೆ ಆಧಾರದಲ್ಲಿಯೇ ಎಲ್ಲವೂ ದುಬಾರಿಯಾಗುತ್ತದೆ. ಇದೀಗ ಗಡಿಭಾಗದಲ್ಲಿ ಪೆಟ್ರೋಲ್ ಕಾರಣದಿಂದ ಕೇರಳದಿಂದ ಕರ್ನಾಟಕಕ್ಕೆ ಸಾರ್ವಜನಿಕರು ಆಗಮಿಸುತ್ತಿದ್ದಾರೆ.

Advertisement
Advertisement

ಕೇರಳದಲ್ಲಿ ಪೆಟ್ರೋಲ್ ದರ ಕರ್ನಾಟಕಕ್ಕಿಂತ ಭಾರೀ ಹೆಚ್ಚು. ಕೇರಳ ಸರ್ಕಾರ ಸೆಸ್ ದರ ಹೆಚ್ಚಿಸಿದ ಕಾರಣ ಕೇರಳದಲ್ಲಿ  ಪೆಟ್ರೊಲ್ ದರ ಹಿಗ್ಗಾಮುಗ್ಗಾ ಏರಿಕೆಯಾಗಿದೆ. ಕರ್ನಾಟಕಕ್ಕಿಂತ ಕೇರಳದಲ್ಲಿ ಪೆಟ್ರೋಲ್ ದರ 7 ರೂಪಾಯಿ ಹೆಚ್ಚಿದೆ. ಅದೇ ರೀತಿ ಡೀಸೆಲ್ ದರ 10 ರೂಪಾಯಿ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ಲೀಟರ್​ಗೆ 108.48 ರೂಪಾಯಿ ಆಗಿದ್ದರೆ. ಡೀಸೆಲ್ ಗೆ 97.40 ರೂಪಾಯಿಯಾಗಿದೆ. ಆದರೆ ಕರ್ನಾಟಕದ ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು ಪೆಟ್ರೋಲ್ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ.

ಅದೇ ರೀತಿ ಮಂಗಳೂರಿನಲ್ಲಿ ಪೆಟ್ರೋಲ್ ಬೆಲೆ 101.48 ರೂಪಾಯಿಯಾಗಿದೆ. ಹೀಗಾಗಿ ಕೇರಳ ರಾಜ್ಯಕ್ಕಿಂತ 7 ರೂಪಾಯಿ ಕಡಿಮೆ ಬೆಲೆಗೆ ಪೆಟ್ರೋಲ್ ದೊರೆಯುತ್ತಿದೆ. ಇದೇ ಕಾರಣಕ್ಕೆ ಕೇರಳದ ಗಡಿಭಾಗಗಳಿಂದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ತುಂಬಿಸಿಕೊಳ್ಳಲು ಕರ್ನಾಟಕಕ್ಕೆ ಸಾರ್ವಜನಿಕರು ಆಗಮಿಸುತ್ತಿದ್ದಾರೆ. ಒಟ್ಟಾರೆ ಪೆಟ್ರೋಲ್, ಡೀಸೆಲ್ ದರಕ್ಕೆ ಹೋಲಿಸಿದರೆ ನಮ್ಮ ನೆರೆಯ ಕೇರಳಕ್ಕಿಂತ ಕರ್ನಾಟಕವೇ ಬೆಸ್ಟ್ ಎಂಬುದು ಅಂಕಿ ಅಂಶಗಳಿಂದ ಬಹಿರಂಗವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ

"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…

5 hours ago

ಮದುವೆಯ ವಿಳಂಬಕ್ಕೆ ಈ ಕಾರಣವೂ ಇರಬಹುದು..! ಪರಿಹಾರ ಕ್ರಮಗಳು ಇಲ್ಲಿದೆ ನೋಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

1 day ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

1 day ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

1 day ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago