Advertisement
ಸುದ್ದಿಗಳು

ಕೇರಳಕ್ಕಿಂತ ಕರ್ನಾಟಕವೇ ಬೆಸ್ಟ್ ಈಗ…! | ಕೇರಳದಲ್ಲಿ ಪೆಟ್ರೋಲ್ ಕರ್ನಾಟಕಕ್ಕಿಂತ ದುಬಾರಿ…! |

Share

ಇಂಧನ ಬೆಲೆ ಒಂದು ರೂಪಾಯಿ ಹೆಚ್ಚಾದರೂ ಏರಿಕೆ ಬಗ್ಗೆ ದೇಶಕ್ಕೆ ದೇಶವೇ ಚರ್ಚೆ ನಡೆಸುತ್ತದೆ. ಕಾರಣ ಇಷ್ಟೇ,  ಜಗತ್ತಿನಾದ್ಯಂತ ಅದರ ಮೇಲಿರುವ ಅವಲಂಬನೆ ಹೆಚ್ಚು. ತೈಲ ಬೆಲೆ ಆಧಾರದಲ್ಲಿಯೇ ಎಲ್ಲವೂ ದುಬಾರಿಯಾಗುತ್ತದೆ. ಇದೀಗ ಗಡಿಭಾಗದಲ್ಲಿ ಪೆಟ್ರೋಲ್ ಕಾರಣದಿಂದ ಕೇರಳದಿಂದ ಕರ್ನಾಟಕಕ್ಕೆ ಸಾರ್ವಜನಿಕರು ಆಗಮಿಸುತ್ತಿದ್ದಾರೆ.

ಕೇರಳದಲ್ಲಿ ಪೆಟ್ರೋಲ್ ದರ ಕರ್ನಾಟಕಕ್ಕಿಂತ ಭಾರೀ ಹೆಚ್ಚು. ಕೇರಳ ಸರ್ಕಾರ ಸೆಸ್ ದರ ಹೆಚ್ಚಿಸಿದ ಕಾರಣ ಕೇರಳದಲ್ಲಿ  ಪೆಟ್ರೊಲ್ ದರ ಹಿಗ್ಗಾಮುಗ್ಗಾ ಏರಿಕೆಯಾಗಿದೆ. ಕರ್ನಾಟಕಕ್ಕಿಂತ ಕೇರಳದಲ್ಲಿ ಪೆಟ್ರೋಲ್ ದರ 7 ರೂಪಾಯಿ ಹೆಚ್ಚಿದೆ. ಅದೇ ರೀತಿ ಡೀಸೆಲ್ ದರ 10 ರೂಪಾಯಿ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ಲೀಟರ್​ಗೆ 108.48 ರೂಪಾಯಿ ಆಗಿದ್ದರೆ. ಡೀಸೆಲ್ ಗೆ 97.40 ರೂಪಾಯಿಯಾಗಿದೆ. ಆದರೆ ಕರ್ನಾಟಕದ ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು ಪೆಟ್ರೋಲ್ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ.

ಅದೇ ರೀತಿ ಮಂಗಳೂರಿನಲ್ಲಿ ಪೆಟ್ರೋಲ್ ಬೆಲೆ 101.48 ರೂಪಾಯಿಯಾಗಿದೆ. ಹೀಗಾಗಿ ಕೇರಳ ರಾಜ್ಯಕ್ಕಿಂತ 7 ರೂಪಾಯಿ ಕಡಿಮೆ ಬೆಲೆಗೆ ಪೆಟ್ರೋಲ್ ದೊರೆಯುತ್ತಿದೆ. ಇದೇ ಕಾರಣಕ್ಕೆ ಕೇರಳದ ಗಡಿಭಾಗಗಳಿಂದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ತುಂಬಿಸಿಕೊಳ್ಳಲು ಕರ್ನಾಟಕಕ್ಕೆ ಸಾರ್ವಜನಿಕರು ಆಗಮಿಸುತ್ತಿದ್ದಾರೆ. ಒಟ್ಟಾರೆ ಪೆಟ್ರೋಲ್, ಡೀಸೆಲ್ ದರಕ್ಕೆ ಹೋಲಿಸಿದರೆ ನಮ್ಮ ನೆರೆಯ ಕೇರಳಕ್ಕಿಂತ ಕರ್ನಾಟಕವೇ ಬೆಸ್ಟ್ ಎಂಬುದು ಅಂಕಿ ಅಂಶಗಳಿಂದ ಬಹಿರಂಗವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

21 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

23 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago