ಸುದ್ದಿಗಳು

ಕೇರಳಕ್ಕಿಂತ ಕರ್ನಾಟಕವೇ ಬೆಸ್ಟ್ ಈಗ…! | ಕೇರಳದಲ್ಲಿ ಪೆಟ್ರೋಲ್ ಕರ್ನಾಟಕಕ್ಕಿಂತ ದುಬಾರಿ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇಂಧನ ಬೆಲೆ ಒಂದು ರೂಪಾಯಿ ಹೆಚ್ಚಾದರೂ ಏರಿಕೆ ಬಗ್ಗೆ ದೇಶಕ್ಕೆ ದೇಶವೇ ಚರ್ಚೆ ನಡೆಸುತ್ತದೆ. ಕಾರಣ ಇಷ್ಟೇ,  ಜಗತ್ತಿನಾದ್ಯಂತ ಅದರ ಮೇಲಿರುವ ಅವಲಂಬನೆ ಹೆಚ್ಚು. ತೈಲ ಬೆಲೆ ಆಧಾರದಲ್ಲಿಯೇ ಎಲ್ಲವೂ ದುಬಾರಿಯಾಗುತ್ತದೆ. ಇದೀಗ ಗಡಿಭಾಗದಲ್ಲಿ ಪೆಟ್ರೋಲ್ ಕಾರಣದಿಂದ ಕೇರಳದಿಂದ ಕರ್ನಾಟಕಕ್ಕೆ ಸಾರ್ವಜನಿಕರು ಆಗಮಿಸುತ್ತಿದ್ದಾರೆ.

Advertisement
Advertisement

ಕೇರಳದಲ್ಲಿ ಪೆಟ್ರೋಲ್ ದರ ಕರ್ನಾಟಕಕ್ಕಿಂತ ಭಾರೀ ಹೆಚ್ಚು. ಕೇರಳ ಸರ್ಕಾರ ಸೆಸ್ ದರ ಹೆಚ್ಚಿಸಿದ ಕಾರಣ ಕೇರಳದಲ್ಲಿ  ಪೆಟ್ರೊಲ್ ದರ ಹಿಗ್ಗಾಮುಗ್ಗಾ ಏರಿಕೆಯಾಗಿದೆ. ಕರ್ನಾಟಕಕ್ಕಿಂತ ಕೇರಳದಲ್ಲಿ ಪೆಟ್ರೋಲ್ ದರ 7 ರೂಪಾಯಿ ಹೆಚ್ಚಿದೆ. ಅದೇ ರೀತಿ ಡೀಸೆಲ್ ದರ 10 ರೂಪಾಯಿ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ಲೀಟರ್​ಗೆ 108.48 ರೂಪಾಯಿ ಆಗಿದ್ದರೆ. ಡೀಸೆಲ್ ಗೆ 97.40 ರೂಪಾಯಿಯಾಗಿದೆ. ಆದರೆ ಕರ್ನಾಟಕದ ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು ಪೆಟ್ರೋಲ್ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ.

ಅದೇ ರೀತಿ ಮಂಗಳೂರಿನಲ್ಲಿ ಪೆಟ್ರೋಲ್ ಬೆಲೆ 101.48 ರೂಪಾಯಿಯಾಗಿದೆ. ಹೀಗಾಗಿ ಕೇರಳ ರಾಜ್ಯಕ್ಕಿಂತ 7 ರೂಪಾಯಿ ಕಡಿಮೆ ಬೆಲೆಗೆ ಪೆಟ್ರೋಲ್ ದೊರೆಯುತ್ತಿದೆ. ಇದೇ ಕಾರಣಕ್ಕೆ ಕೇರಳದ ಗಡಿಭಾಗಗಳಿಂದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ತುಂಬಿಸಿಕೊಳ್ಳಲು ಕರ್ನಾಟಕಕ್ಕೆ ಸಾರ್ವಜನಿಕರು ಆಗಮಿಸುತ್ತಿದ್ದಾರೆ. ಒಟ್ಟಾರೆ ಪೆಟ್ರೋಲ್, ಡೀಸೆಲ್ ದರಕ್ಕೆ ಹೋಲಿಸಿದರೆ ನಮ್ಮ ನೆರೆಯ ಕೇರಳಕ್ಕಿಂತ ಕರ್ನಾಟಕವೇ ಬೆಸ್ಟ್ ಎಂಬುದು ಅಂಕಿ ಅಂಶಗಳಿಂದ ಬಹಿರಂಗವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

40 minutes ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

5 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

13 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

14 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

14 hours ago