Advertisement
ಸುದ್ದಿಗಳು

ಕೇರಳಕ್ಕಿಂತ ಕರ್ನಾಟಕವೇ ಬೆಸ್ಟ್ ಈಗ…! | ಕೇರಳದಲ್ಲಿ ಪೆಟ್ರೋಲ್ ಕರ್ನಾಟಕಕ್ಕಿಂತ ದುಬಾರಿ…! |

Share

ಇಂಧನ ಬೆಲೆ ಒಂದು ರೂಪಾಯಿ ಹೆಚ್ಚಾದರೂ ಏರಿಕೆ ಬಗ್ಗೆ ದೇಶಕ್ಕೆ ದೇಶವೇ ಚರ್ಚೆ ನಡೆಸುತ್ತದೆ. ಕಾರಣ ಇಷ್ಟೇ,  ಜಗತ್ತಿನಾದ್ಯಂತ ಅದರ ಮೇಲಿರುವ ಅವಲಂಬನೆ ಹೆಚ್ಚು. ತೈಲ ಬೆಲೆ ಆಧಾರದಲ್ಲಿಯೇ ಎಲ್ಲವೂ ದುಬಾರಿಯಾಗುತ್ತದೆ. ಇದೀಗ ಗಡಿಭಾಗದಲ್ಲಿ ಪೆಟ್ರೋಲ್ ಕಾರಣದಿಂದ ಕೇರಳದಿಂದ ಕರ್ನಾಟಕಕ್ಕೆ ಸಾರ್ವಜನಿಕರು ಆಗಮಿಸುತ್ತಿದ್ದಾರೆ.

ಕೇರಳದಲ್ಲಿ ಪೆಟ್ರೋಲ್ ದರ ಕರ್ನಾಟಕಕ್ಕಿಂತ ಭಾರೀ ಹೆಚ್ಚು. ಕೇರಳ ಸರ್ಕಾರ ಸೆಸ್ ದರ ಹೆಚ್ಚಿಸಿದ ಕಾರಣ ಕೇರಳದಲ್ಲಿ  ಪೆಟ್ರೊಲ್ ದರ ಹಿಗ್ಗಾಮುಗ್ಗಾ ಏರಿಕೆಯಾಗಿದೆ. ಕರ್ನಾಟಕಕ್ಕಿಂತ ಕೇರಳದಲ್ಲಿ ಪೆಟ್ರೋಲ್ ದರ 7 ರೂಪಾಯಿ ಹೆಚ್ಚಿದೆ. ಅದೇ ರೀತಿ ಡೀಸೆಲ್ ದರ 10 ರೂಪಾಯಿ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ಲೀಟರ್​ಗೆ 108.48 ರೂಪಾಯಿ ಆಗಿದ್ದರೆ. ಡೀಸೆಲ್ ಗೆ 97.40 ರೂಪಾಯಿಯಾಗಿದೆ. ಆದರೆ ಕರ್ನಾಟಕದ ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು ಪೆಟ್ರೋಲ್ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ.

ಅದೇ ರೀತಿ ಮಂಗಳೂರಿನಲ್ಲಿ ಪೆಟ್ರೋಲ್ ಬೆಲೆ 101.48 ರೂಪಾಯಿಯಾಗಿದೆ. ಹೀಗಾಗಿ ಕೇರಳ ರಾಜ್ಯಕ್ಕಿಂತ 7 ರೂಪಾಯಿ ಕಡಿಮೆ ಬೆಲೆಗೆ ಪೆಟ್ರೋಲ್ ದೊರೆಯುತ್ತಿದೆ. ಇದೇ ಕಾರಣಕ್ಕೆ ಕೇರಳದ ಗಡಿಭಾಗಗಳಿಂದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ತುಂಬಿಸಿಕೊಳ್ಳಲು ಕರ್ನಾಟಕಕ್ಕೆ ಸಾರ್ವಜನಿಕರು ಆಗಮಿಸುತ್ತಿದ್ದಾರೆ. ಒಟ್ಟಾರೆ ಪೆಟ್ರೋಲ್, ಡೀಸೆಲ್ ದರಕ್ಕೆ ಹೋಲಿಸಿದರೆ ನಮ್ಮ ನೆರೆಯ ಕೇರಳಕ್ಕಿಂತ ಕರ್ನಾಟಕವೇ ಬೆಸ್ಟ್ ಎಂಬುದು ಅಂಕಿ ಅಂಶಗಳಿಂದ ಬಹಿರಂಗವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

2 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

2 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago