ದೇಶದಾದ್ಯಂತ ಪಿಎಫ್ಐ ನಿಷೇಧ ಮಾಡಲಾಗಿದೆ. ಹೀಗೆ ನಿಷೇಧ ಮಾಡುವ ಮುನ್ನ ಎನ್ ಐ ಎ ಅಧಿಕಾರಿಗಳು ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿರುವ ಹಾಗೂ ಈಗಲೂ ಮಾಹಿತಿ ಸಂಗ್ರಹಿಸುತ್ತಿರುವ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕರಿಗೆ ಪಿಎಫ್ಐ “ಟೆರರ್” ಟ್ರೈನಿಂಗ್ ನೀಡಲಾಗುತ್ತಿತ್ತು ಎಂಬ ಮಾಹಿತಿ ತಿಳಿದುಬಂದಿದೆ.
ಬಂಟ್ವಾಳ, ಪುತ್ತೂರು, ಸುಳ್ಯದ ಕೆಲ ಅಜ್ಞಾತ ಪ್ರದೇಶಗಳಲ್ಲಿ ಟ್ರೈನಿಂಗ್ ಕೊಡಲಾಗುತ್ತಿತ್ತು. ಇದಕ್ಕೆ ಪೂರಕವಾಗಿ ನಿಷೇಧಿತ ಸೆಟಲೈಟ್ ಫೋನು ಕಾರ್ಯಾಚರಿಸುತ್ತಿರುವ ಬಗ್ಗೆ ಈ ಹಿಂದೆಯೇ ಹಲವು ಬಾರಿ ಪೊಲೀಸರು ಎಚ್ಚರಿಸಿದ್ದರು.ಈ ಬಗ್ಗೆ ತನಿಖೆಯನ್ನೂ ನಡೆಸುತ್ತಿದ್ದರು. ಬಂಟ್ವಾಳ ತಾಲೂಕಿನ ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯುನಿಟಿ ಹಾಲ್ ಬಗ್ಗೆಯೂ ತನಿಖೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು 2007 ರಿಂದಲೇ ತರಬೇತಿ ಆರಂಭವಾಗಿದ್ದು ಈವರೆಗೂ ಸಾವಿರಾರು ಯುವಕರಿಗೆ ಟ್ರೈನಿಂಗ್ ನೀಡಿದ್ದಾರೆ ಎನ್ನುವುದು ಸದ್ಯದ ಮಾಹಿತಿ. ಈ ಬಗ್ಗೆ ಆಯೂಬ್ ಅಗ್ನಾಡಿ ಎಂಬ ಟ್ರಸ್ಟಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…