ದೇಶದಾದ್ಯಂತ ಪಿಎಫ್ಐ ನಿಷೇಧ ಮಾಡಲಾಗಿದೆ. ಹೀಗೆ ನಿಷೇಧ ಮಾಡುವ ಮುನ್ನ ಎನ್ ಐ ಎ ಅಧಿಕಾರಿಗಳು ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿರುವ ಹಾಗೂ ಈಗಲೂ ಮಾಹಿತಿ ಸಂಗ್ರಹಿಸುತ್ತಿರುವ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕರಿಗೆ ಪಿಎಫ್ಐ “ಟೆರರ್” ಟ್ರೈನಿಂಗ್ ನೀಡಲಾಗುತ್ತಿತ್ತು ಎಂಬ ಮಾಹಿತಿ ತಿಳಿದುಬಂದಿದೆ.
ಬಂಟ್ವಾಳ, ಪುತ್ತೂರು, ಸುಳ್ಯದ ಕೆಲ ಅಜ್ಞಾತ ಪ್ರದೇಶಗಳಲ್ಲಿ ಟ್ರೈನಿಂಗ್ ಕೊಡಲಾಗುತ್ತಿತ್ತು. ಇದಕ್ಕೆ ಪೂರಕವಾಗಿ ನಿಷೇಧಿತ ಸೆಟಲೈಟ್ ಫೋನು ಕಾರ್ಯಾಚರಿಸುತ್ತಿರುವ ಬಗ್ಗೆ ಈ ಹಿಂದೆಯೇ ಹಲವು ಬಾರಿ ಪೊಲೀಸರು ಎಚ್ಚರಿಸಿದ್ದರು.ಈ ಬಗ್ಗೆ ತನಿಖೆಯನ್ನೂ ನಡೆಸುತ್ತಿದ್ದರು. ಬಂಟ್ವಾಳ ತಾಲೂಕಿನ ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯುನಿಟಿ ಹಾಲ್ ಬಗ್ಗೆಯೂ ತನಿಖೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು 2007 ರಿಂದಲೇ ತರಬೇತಿ ಆರಂಭವಾಗಿದ್ದು ಈವರೆಗೂ ಸಾವಿರಾರು ಯುವಕರಿಗೆ ಟ್ರೈನಿಂಗ್ ನೀಡಿದ್ದಾರೆ ಎನ್ನುವುದು ಸದ್ಯದ ಮಾಹಿತಿ. ಈ ಬಗ್ಗೆ ಆಯೂಬ್ ಅಗ್ನಾಡಿ ಎಂಬ ಟ್ರಸ್ಟಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…