Advertisement
MIRROR FOCUS

#RainRecord | ಈ ಬಾರಿ ಮಳೆ ಹೇಗಿದೆ ? | 5 ವರ್ಷಗಳಿಂದ ಮಳೆಯ ಬದಲಾವಣೆ ಹೇಗಾಗುತ್ತಿದೆ…?

Share

ಮಳೆ ಹೇಗೆ ? ಮೊನ್ನೆಯವರೆಗೆ ಮಳೆ ಕಡಿಮೆ ಎನ್ನುತ್ತಿದ್ದವರೆಲ್ಲಾ ಈಗ ಎಂತಾ ಮಳೆ ಎಂದು  ಕರಾವಳಿ ಜಿಲ್ಲೆಗಳಲ್ಲಿ ಮಾತನಾಡಲು ಆರಂಭಿಸಿದ್ದಾರೆ. ಆದರೆ ನಮಗೆಲ್ಲಾ ಗೊತ್ತೇ ಇಲ್ಲದ ಹಾಗೆ ಕಳೆದ 5 ವರ್ಷಗಳಲ್ಲಿ ಮಳೆಯ ಅವಧಿ ಬದಲಾಗುತ್ತಿದೆ.  ಮಳೆ ದಾಖಲೀಕರಣ ಮಾಡುತ್ತಿರುವ ಸುಳ್ಯದ ಬಾಳಿಲದ ಪಿಜಿಎಸ್‌ಎನ್‌ ಪ್ರಸಾದ್‌ ಅವರ ಸೂಕ್ಷ್ಮವಾದ ಗಮನಿಸುವಿಕೆಯ ಮಾಹಿತಿಯ ಪ್ರಕಾರ ಮಳೆಯಲ್ಲಿ ಬದಲಾವಣೆ ಆಗುತ್ತಿದೆ…

ಕಳೆದ 48 ವರ್ಷಗಳಿಂದ ಮಳೆ ದಾಖಲೀಕರಣ ಮಾಡುತ್ತಿರುವ ಸುಳ್ಯದ ಪಿಜಿಎಸ್‌ಎನ್‌ ಪ್ರಸಾದ್‌ ಅವರ ಪ್ರಕಾರ ಕಳೆದ ವರ್ಷ ಜುಲೈ ತಿಂಗಳಲ್ಲಿ 2077 ಮಿಮೀ ಮಳೆಯಾಗಿತ್ತು.  ಹಿಂದೆ ಈ ಮಾದರಿ ಇರಲಿಲ್ಲ .ಕಳೆದ 5  ವರ್ಷಗಳಲ್ಲಿ ಜೂನ್‌ ವರೆಗೆ ಕಡಿಮೆಯಾಗಿ ನಂತರ ಜುಲೈ, ಆಗಸ್ಟ್‌ ತಿಂಗಳಲ್ಲಿ ಅಧಿಕ ಮಳೆಯಾಗುತ್ತಿದೆ.

ಈ ವರ್ಷ ಸುಮಾರು ಮೇ ಅಂತ್ಯದವರೆಗೆ ಮಳೆ ಕಡಿಮೆ ಇತ್ತು, ಒಮ್ಮೆ ಮಳೆಯಾಗಲಿ ಎನ್ನುವ ಭಾವ ಇತ್ತು. ಜೂನ್.‌6 ಕ್ಕೆ ಮುಂಗಾರು ಪ್ರವೇಶ ಆದರೂ ತೀರಾ ದುರ್ಬಲವಾಗಿತ್ತು. ಹೀಗಾಗಿ ಜೂನ್‌ ಅಂತ್ಯದವರೆಗೆ ಬಾಳಿಲದಲ್ಲಿ  728 ಮಿಮೀ ಮಳೆಯಷ್ಟೇ ಆಗಿತ್ತು. ಆದರೆ ಜುಲೈ ತಿಂಗಳಲ್ಲಿ ಮುಂಗಾರು ವೇಗ ಪಡೆಯಿತು, ಹೀಗಾಗಿ ಜುಲೈ ತಿಂಗಳಲಿ  1205 ಮಿಮೀ ಮಳೆ ಇದುವರೆಗೆ ಆಗಿದೆ. ಮಳೆ ಅಳತೆಯ ಕಾರಣದಿಂದ ಈ ಸೂಕ್ಷ್ಮಗಳನ್ನು ಗಮನಿಸಲಾಗಿದೆ. ಈ ವರ್ಷ  10% ಮಳೆ ಕಡಿಮೆ ಇರಬಹುದು ಎನ್ನುವ ಲೆಕ್ಕಾಚಾರ ಈಗಿನದು. ಆದರೆ ಈ ಲೆಕ್ಕಾಚಾರ ಪ್ರಕೃತಿಯ ಕಾರಣದಿಂದ ಬದಲಾಗುತ್ತಿದೆ ಎನ್ನುವುದು  ಗಮನಿಸಬೇಕಾದ ಅಂಶ.

ಪಿಜಿಎಸ್‌ಎನ್‌ ಪ್ರಸಾದ್, ಬಾಳಿಲ

ಜುಲೈ ಹಾಗೂ ಆಗಸ್ಟ್‌ ತಿಂಗಳಲ್ಲಿ ಮಳೆ ಜಾಸ್ತಿಯಾಗುತ್ತಿದೆ.  ಕೆಲವು  5 ವರ್ಷಗಳಿಂದ ಈ ರೀತಿ ಆಗುತ್ತಿದೆ ಈ ರೀತಿಯ ಬದಲಾವಣೆ  ಆಗುತ್ತಿದೆ.ಇದಕ್ಕೆ ಕಾರಣಗಳು ಹಲವಾರು, ಈ ಬಗ್ಗೆ ಅಧ್ಯಯನ ಆಗಬೇಕಿದೆ ಎನ್ನುವುದು  ಪಿಜಿಎಸ್‌ಎನ್‌ ಪ್ರಸಾದ್‌ ಅವರ ಅಭಿಪ್ರಾಯ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

7 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

8 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

17 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

17 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

18 hours ago