ಮಳೆ ಹೇಗೆ ? ಮೊನ್ನೆಯವರೆಗೆ ಮಳೆ ಕಡಿಮೆ ಎನ್ನುತ್ತಿದ್ದವರೆಲ್ಲಾ ಈಗ ಎಂತಾ ಮಳೆ ಎಂದು ಕರಾವಳಿ ಜಿಲ್ಲೆಗಳಲ್ಲಿ ಮಾತನಾಡಲು ಆರಂಭಿಸಿದ್ದಾರೆ. ಆದರೆ ನಮಗೆಲ್ಲಾ ಗೊತ್ತೇ ಇಲ್ಲದ ಹಾಗೆ ಕಳೆದ 5 ವರ್ಷಗಳಲ್ಲಿ ಮಳೆಯ ಅವಧಿ ಬದಲಾಗುತ್ತಿದೆ. ಮಳೆ ದಾಖಲೀಕರಣ ಮಾಡುತ್ತಿರುವ ಸುಳ್ಯದ ಬಾಳಿಲದ ಪಿಜಿಎಸ್ಎನ್ ಪ್ರಸಾದ್ ಅವರ ಸೂಕ್ಷ್ಮವಾದ ಗಮನಿಸುವಿಕೆಯ ಮಾಹಿತಿಯ ಪ್ರಕಾರ ಮಳೆಯಲ್ಲಿ ಬದಲಾವಣೆ ಆಗುತ್ತಿದೆ…
ಕಳೆದ 48 ವರ್ಷಗಳಿಂದ ಮಳೆ ದಾಖಲೀಕರಣ ಮಾಡುತ್ತಿರುವ ಸುಳ್ಯದ ಪಿಜಿಎಸ್ಎನ್ ಪ್ರಸಾದ್ ಅವರ ಪ್ರಕಾರ ಕಳೆದ ವರ್ಷ ಜುಲೈ ತಿಂಗಳಲ್ಲಿ 2077 ಮಿಮೀ ಮಳೆಯಾಗಿತ್ತು. ಹಿಂದೆ ಈ ಮಾದರಿ ಇರಲಿಲ್ಲ .ಕಳೆದ 5 ವರ್ಷಗಳಲ್ಲಿ ಜೂನ್ ವರೆಗೆ ಕಡಿಮೆಯಾಗಿ ನಂತರ ಜುಲೈ, ಆಗಸ್ಟ್ ತಿಂಗಳಲ್ಲಿ ಅಧಿಕ ಮಳೆಯಾಗುತ್ತಿದೆ.
ಈ ವರ್ಷ ಸುಮಾರು ಮೇ ಅಂತ್ಯದವರೆಗೆ ಮಳೆ ಕಡಿಮೆ ಇತ್ತು, ಒಮ್ಮೆ ಮಳೆಯಾಗಲಿ ಎನ್ನುವ ಭಾವ ಇತ್ತು. ಜೂನ್.6 ಕ್ಕೆ ಮುಂಗಾರು ಪ್ರವೇಶ ಆದರೂ ತೀರಾ ದುರ್ಬಲವಾಗಿತ್ತು. ಹೀಗಾಗಿ ಜೂನ್ ಅಂತ್ಯದವರೆಗೆ ಬಾಳಿಲದಲ್ಲಿ 728 ಮಿಮೀ ಮಳೆಯಷ್ಟೇ ಆಗಿತ್ತು. ಆದರೆ ಜುಲೈ ತಿಂಗಳಲ್ಲಿ ಮುಂಗಾರು ವೇಗ ಪಡೆಯಿತು, ಹೀಗಾಗಿ ಜುಲೈ ತಿಂಗಳಲಿ 1205 ಮಿಮೀ ಮಳೆ ಇದುವರೆಗೆ ಆಗಿದೆ. ಮಳೆ ಅಳತೆಯ ಕಾರಣದಿಂದ ಈ ಸೂಕ್ಷ್ಮಗಳನ್ನು ಗಮನಿಸಲಾಗಿದೆ. ಈ ವರ್ಷ 10% ಮಳೆ ಕಡಿಮೆ ಇರಬಹುದು ಎನ್ನುವ ಲೆಕ್ಕಾಚಾರ ಈಗಿನದು. ಆದರೆ ಈ ಲೆಕ್ಕಾಚಾರ ಪ್ರಕೃತಿಯ ಕಾರಣದಿಂದ ಬದಲಾಗುತ್ತಿದೆ ಎನ್ನುವುದು ಗಮನಿಸಬೇಕಾದ ಅಂಶ.
ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಮಳೆ ಜಾಸ್ತಿಯಾಗುತ್ತಿದೆ. ಕೆಲವು 5 ವರ್ಷಗಳಿಂದ ಈ ರೀತಿ ಆಗುತ್ತಿದೆ ಈ ರೀತಿಯ ಬದಲಾವಣೆ ಆಗುತ್ತಿದೆ.ಇದಕ್ಕೆ ಕಾರಣಗಳು ಹಲವಾರು, ಈ ಬಗ್ಗೆ ಅಧ್ಯಯನ ಆಗಬೇಕಿದೆ ಎನ್ನುವುದು ಪಿಜಿಎಸ್ಎನ್ ಪ್ರಸಾದ್ ಅವರ ಅಭಿಪ್ರಾಯ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…