Advertisement
MIRROR FOCUS

#RainRecord | ಈ ಬಾರಿ ಮಳೆ ಹೇಗಿದೆ ? | 5 ವರ್ಷಗಳಿಂದ ಮಳೆಯ ಬದಲಾವಣೆ ಹೇಗಾಗುತ್ತಿದೆ…?

Share

ಮಳೆ ಹೇಗೆ ? ಮೊನ್ನೆಯವರೆಗೆ ಮಳೆ ಕಡಿಮೆ ಎನ್ನುತ್ತಿದ್ದವರೆಲ್ಲಾ ಈಗ ಎಂತಾ ಮಳೆ ಎಂದು  ಕರಾವಳಿ ಜಿಲ್ಲೆಗಳಲ್ಲಿ ಮಾತನಾಡಲು ಆರಂಭಿಸಿದ್ದಾರೆ. ಆದರೆ ನಮಗೆಲ್ಲಾ ಗೊತ್ತೇ ಇಲ್ಲದ ಹಾಗೆ ಕಳೆದ 5 ವರ್ಷಗಳಲ್ಲಿ ಮಳೆಯ ಅವಧಿ ಬದಲಾಗುತ್ತಿದೆ.  ಮಳೆ ದಾಖಲೀಕರಣ ಮಾಡುತ್ತಿರುವ ಸುಳ್ಯದ ಬಾಳಿಲದ ಪಿಜಿಎಸ್‌ಎನ್‌ ಪ್ರಸಾದ್‌ ಅವರ ಸೂಕ್ಷ್ಮವಾದ ಗಮನಿಸುವಿಕೆಯ ಮಾಹಿತಿಯ ಪ್ರಕಾರ ಮಳೆಯಲ್ಲಿ ಬದಲಾವಣೆ ಆಗುತ್ತಿದೆ…

ಕಳೆದ 48 ವರ್ಷಗಳಿಂದ ಮಳೆ ದಾಖಲೀಕರಣ ಮಾಡುತ್ತಿರುವ ಸುಳ್ಯದ ಪಿಜಿಎಸ್‌ಎನ್‌ ಪ್ರಸಾದ್‌ ಅವರ ಪ್ರಕಾರ ಕಳೆದ ವರ್ಷ ಜುಲೈ ತಿಂಗಳಲ್ಲಿ 2077 ಮಿಮೀ ಮಳೆಯಾಗಿತ್ತು.  ಹಿಂದೆ ಈ ಮಾದರಿ ಇರಲಿಲ್ಲ .ಕಳೆದ 5  ವರ್ಷಗಳಲ್ಲಿ ಜೂನ್‌ ವರೆಗೆ ಕಡಿಮೆಯಾಗಿ ನಂತರ ಜುಲೈ, ಆಗಸ್ಟ್‌ ತಿಂಗಳಲ್ಲಿ ಅಧಿಕ ಮಳೆಯಾಗುತ್ತಿದೆ.

ಈ ವರ್ಷ ಸುಮಾರು ಮೇ ಅಂತ್ಯದವರೆಗೆ ಮಳೆ ಕಡಿಮೆ ಇತ್ತು, ಒಮ್ಮೆ ಮಳೆಯಾಗಲಿ ಎನ್ನುವ ಭಾವ ಇತ್ತು. ಜೂನ್.‌6 ಕ್ಕೆ ಮುಂಗಾರು ಪ್ರವೇಶ ಆದರೂ ತೀರಾ ದುರ್ಬಲವಾಗಿತ್ತು. ಹೀಗಾಗಿ ಜೂನ್‌ ಅಂತ್ಯದವರೆಗೆ ಬಾಳಿಲದಲ್ಲಿ  728 ಮಿಮೀ ಮಳೆಯಷ್ಟೇ ಆಗಿತ್ತು. ಆದರೆ ಜುಲೈ ತಿಂಗಳಲ್ಲಿ ಮುಂಗಾರು ವೇಗ ಪಡೆಯಿತು, ಹೀಗಾಗಿ ಜುಲೈ ತಿಂಗಳಲಿ  1205 ಮಿಮೀ ಮಳೆ ಇದುವರೆಗೆ ಆಗಿದೆ. ಮಳೆ ಅಳತೆಯ ಕಾರಣದಿಂದ ಈ ಸೂಕ್ಷ್ಮಗಳನ್ನು ಗಮನಿಸಲಾಗಿದೆ. ಈ ವರ್ಷ  10% ಮಳೆ ಕಡಿಮೆ ಇರಬಹುದು ಎನ್ನುವ ಲೆಕ್ಕಾಚಾರ ಈಗಿನದು. ಆದರೆ ಈ ಲೆಕ್ಕಾಚಾರ ಪ್ರಕೃತಿಯ ಕಾರಣದಿಂದ ಬದಲಾಗುತ್ತಿದೆ ಎನ್ನುವುದು  ಗಮನಿಸಬೇಕಾದ ಅಂಶ.

ಪಿಜಿಎಸ್‌ಎನ್‌ ಪ್ರಸಾದ್, ಬಾಳಿಲ

ಜುಲೈ ಹಾಗೂ ಆಗಸ್ಟ್‌ ತಿಂಗಳಲ್ಲಿ ಮಳೆ ಜಾಸ್ತಿಯಾಗುತ್ತಿದೆ.  ಕೆಲವು  5 ವರ್ಷಗಳಿಂದ ಈ ರೀತಿ ಆಗುತ್ತಿದೆ ಈ ರೀತಿಯ ಬದಲಾವಣೆ  ಆಗುತ್ತಿದೆ.ಇದಕ್ಕೆ ಕಾರಣಗಳು ಹಲವಾರು, ಈ ಬಗ್ಗೆ ಅಧ್ಯಯನ ಆಗಬೇಕಿದೆ ಎನ್ನುವುದು  ಪಿಜಿಎಸ್‌ಎನ್‌ ಪ್ರಸಾದ್‌ ಅವರ ಅಭಿಪ್ರಾಯ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago