Advertisement
ಸುದ್ದಿಗಳು

ವೈಷ್ಣವಿ ಅವರಿಗೆ ರಸಾಯನಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ |

Share

ಬೆಂಗಳೂರಿನ ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಸೈಂಟಿಫಿಕ್ ರಿಸರ್ಚ್ ನ ಸಂಶೋಧನಾ ವಿದ್ಯಾರ್ಥಿ ವೈಷ್ಣವಿ ಅವರಿಗೆ Heterogeneous Catalysis ಕ್ಷೇತ್ರದಲ್ಲಿ,ಡಾ. ಗಣಪತಿ ವಿ ಶಾನಭಾಗ್ ಅವರ ಮಾರ್ಗದರ್ಶನದಲ್ಲಿ “Designing novel catalysts for conversion of biomass derivatives furfuryl alcohol and levulinic acid into value-added chemicals” ಎಂಬ ವಿಷಯದ ಮೇಲೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ವೈಷ್ಣವಿ ಯವರು ಕೇಂದ್ರ ಸರಕಾರದ ಪತಿಷ್ಠಿತ Council of Scientific & Industrial Research ನಿಂದ SRF ಫೆಲೋಶಿಪ್ (CSIR-SRF Direct) ಪಡೆದಿರುವುದಷ್ಟೇ ಅಲ್ಲದೆ, ಅನೇಕ ರಾಷ್ಟೀಯ ಮತ್ತು ಅಂತರಾಷ್ಟ್ರೀಯ ವೈಜ್ಞಾನಿಕ ಸಮ್ಮೇಳನಗಲ್ಲಿ ಭಾಗವಹಿಸಿ ಅತ್ಯುತ್ತಮ ಮಂಡನೆಗಾಗಿ 6 Best Presentation award” ಪಡೆದಿದ್ದಾರೆ. ಇವರು ಬರೆದ 4 ಸಂಶೋಧನಾ ಲೇಖನಗಳು ಪ್ರತಿಷ್ಠಿತ ಅಂತರಾಷ್ಟೀಯ ಜರ್ನಲ್ ಗಳಲ್ಲಿ ಪ್ರಕಟವಾಗಿವೆ ಹಾಗೂ 3 ಲೇಖನಗಳು ಪ್ರಕಟವಾಗುವ ಪ್ರಕ್ರಿಯೆಯಲ್ಲಿವೆ. ಇವರು ಸಹ-ಲೇಖಕರಾಗಿ ಬರೆದ 2 ಪಠ್ಯ ಅಧ್ಯಾಯಗಳನ್ನು ಪ್ರತಿಷ್ಠಿತSpringer-Nature ಮತ್ತು Elsevier ಪ್ರಕಾಶನಗಳು ಪ್ರಕಟಿಸಿವೆ.

ಇವರು ಮೂಲತಃ ಕುಶಾಲನಗರದ ಶಿಕ್ಷಕಿ  ಚಿತ್ರಾ ಮತ್ತು ಉದ್ಯಮಿ ಜನಾರ್ದನ ಅವರ ಸುಪುತ್ರಿಯಾಗಿದ್ದು, ಮಂಡೆಕೋಲು ಗ್ರಾಮದ ಬೊಳುಗಲ್ಲು ಪದ್ಮಾವತಿ ಮತ್ತು ದಿ. ಶಶಿಧರ ನಾಯಕ್ (ಮಾಜಿ ಸಿಇಓ ಮಂಡೆಕೋಲು ಸಹಕಾರಿ ಬ್ಯಾಂಕ್) ಇವರ ಪುತ್ರ ಸುಬ್ರಹ್ಮಣ್ಯ ಬಿ ಎಸ್ ಅವರ ಪತ್ನಿ, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

8 minutes ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

9 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

13 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

21 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

23 hours ago