ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರ ಜೊತೆಗೆ ಮಹಿಳೆಯೊಬ್ಬರ ಫೋಟೋ ವೈರಲ್ ಆಗುತ್ತಿದ್ದಂತೆಯೇ ಮಹಿಳೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಶಾಸಕರಿಗೂ ನನಗೂ ಸಂಪರ್ಕವೇ ಇಲ್ಲ, ಉದ್ದೇಶಪೂರ್ವಕವಾಗಿ ಈ ರೀತಿ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಚುನಾವಣೆಯ ಸಮಯದಲ್ಲಿ ಪುತ್ತೂರು ಶಾಸಕರ ಈ ಪೋಟೋ ವೈರಲ್ ಆಗಿರುವುದು ಬಿಜೆಪಿಗೂ ಮುಜುಗರವಾಗಿದೆ.ಉದ್ದೇಶಪೂರ್ವಕವಾಗಿ ವಿಡಿಯೋ ಮತ್ತು ಫೋಟೊಗಳನ್ನು ಹರಿಯಬಿಡಲಾಗಿದೆ ಎಂದು ಬಿಜೆಪಿ ವಲಯದಲ್ಲಿ ಚರ್ಚೆಯೂ ಆಗುತ್ತಿದೆ. ಈ ನಡುವೆ ಪುತ್ತೂರು ಶಾಸಕರು ಕೂಡಾ ದೂರು ನೀಡಿದ್ದಾರೆ.
ಫೋಟೋವನ್ನು ಯಾರೋ ಎಡಿಟ್ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆಂದು ಮಹಿಳೆ ದೂರಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೂ ಸ್ಪಷ್ಟನೆ ನೀಡಿದ್ದಾರೆ. ಶಾಸಕರನ್ನು ಭೇಟಿ ಮಾಡುವ ಪ್ರಸಂಗ ಈ ಹಿಂದೆ ಬಂದಿರಲೇ ಇಲ್ಲ. ನನ್ನ ಫೋಟೋಗಳನ್ನು ಎಡಿಟ್ ಮಾಡಿ ವೈರಲ್ ಮಾಡುತ್ತಿದ್ದಾರೆ. ಅದಕ್ಕೆ ನಾನು ಹೆದರುವ ಪ್ರಶ್ನೆಯೇ ಇಲ್ಲ. ಯಾಕಂದರೆ ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಫೋಟೋಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಈ ರೀತಿ ಎಡಿಟ್ ಮಾಡಿ ಓರ್ವ ಮಹಿಳೆ ವಿರುದ್ಧ ಇಷ್ಟೊಂದು ದೊಡ್ಡ ಮಟ್ಟದ ಆರೋಪ ಮಾಡುವುದು ಸರಿ ಅಲ್ಲ ಎಂದು ಅವರು ಹೇಳಿದ್ದಾರೆ.
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…